Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೈಂಗಿಕ ಕಿರುಕುಳ ಆರೋಪ: ಕ್ಷಮೆ ಕೋರುವಂತೆ...

ಲೈಂಗಿಕ ಕಿರುಕುಳ ಆರೋಪ: ಕ್ಷಮೆ ಕೋರುವಂತೆ ಅಸ್ಸಾಂ ರೈಫಲ್ಸ್‌ಗೆ ವೈಎಂಎ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 Aug 2020 7:30 PM IST
share
ಲೈಂಗಿಕ ಕಿರುಕುಳ ಆರೋಪ: ಕ್ಷಮೆ ಕೋರುವಂತೆ ಅಸ್ಸಾಂ ರೈಫಲ್ಸ್‌ಗೆ ವೈಎಂಎ ಆಗ್ರಹ

ಐಜ್ವಾಲ್ (ಮಿಝೋರಾಂ),ಆ.24: ಭಾರತ-ಮ್ಯಾನ್ಮಾರ್ ಗಡಿಯನ್ನು ಕಾಯುತ್ತಿರುವ ಅಸ್ಸಾಂ ರೈಫಲ್ಸ್‌ನ ಸಿಬ್ಬಂದಿಗಳು ಸ್ವಾತಂತ್ರ್ಯ ದಿನದಂದು ಚಂಫಾಯಿ ಜಿಲ್ಲೆಯ ಸೆಸಿ ಗ್ರಾಮದಲ್ಲಿ ತಮ್ಮ ಹೊಲಗಳಿಂದ ಮನೆಗೆ ಮರಳುತ್ತಿದ್ದ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳವನ್ನು ನೀಡಿದ್ದರು ಮತ್ತು ಪಡೆಯ ಸಿಬ್ಬಂದಿಗಳು ಕೋವಿಡ್-19 ಸುರಕ್ಷತಾ ಶಿಷ್ಟಾಚಾರಗಳನ್ನು ಉಲ್ಲಂಘಿಸುತ್ತಿದ್ದಾರೆ ಎಂದು ಮಿಝೋರಾಂ ನ ಪ್ರಬಲ ಸಂಘಟನೆ ಯಂಗ್ ಮಿರೆ ಅಸೋಸಿಯೇಷನ್ (ವೈಎಂಎ) ಆರೋಪಿಸಿದೆ. ಇದಕ್ಕಾಗಿ ಅಸ್ಸಾಂ ರೈಫಲ್ಸ್ ಕ್ಷಮೆ ಯಾಚಿಸಬೇಕು ಎಂದು ಅದು ಆಗ್ರಹಿಸಿದೆ. ಆದರೆ ಅಸ್ಸಾಂ ರೈಫಲ್ಸ್ ಈ ಆರೋಪಗಳನ್ನು ನಿರಾಕರಿಸಿದೆ.

ಅಸ್ಸಾ ರೈಫಲ್ಸ್ ಈ ತಿಂಗಳ ಅಂತ್ಯದೊಳಗೆ ಕ್ಷಮೆ ಯಾಚಿಸದಿದ್ದರೆ ತಾನು ಕಠಿಣ ಕ್ರಮ ಕೈಗೊಳ್ಳುವುದಾಗಿ ವೈಎಂಎ ಕೇಂದ್ರ ಸಮಿತಿಯು ಹೇಳಿಕೆಯೊಂದರಲ್ಲಿ ಎಚ್ಚರಿಕೆ ನೀಡಿದೆ.

ಅಸ್ಸಾಂ ರೈಫಲ್ಸ್ ಸಿಬ್ಬಂದಿ ವರ್ತನೆ ಆರೋಪ ಕುರಿತು ಮುಖ್ಯಮಂತ್ರಿ ಝೋರಾಮ್ ಥಂಗ ಅವರು ಶನಿವಾರ ವೈಎಂಎ ನಾಯಕರೊಡನೆ ಮಾತುಕತೆ ನಡೆಸಿದ್ದರು. ಸುರಕ್ಷತಾ ಶಿಷ್ಟಾಚಾರಗಳನ್ನು ಅಗೌರವಿಸುವಲ್ಲಿ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಗೈರುಹಾಜರಾಗುವಲ್ಲಿ ಅಸ್ಸಾಂ ರೈಫಲ್ಸ್‌ನ ಅನುಚಿತ ವರ್ತನೆಯ ಬಗ್ಗೆ ಕೇಂದ್ರ ಗೃಹಸಚಿವಾಲಯಕ್ಕೆ ಪ್ರತ್ಯೇಕ ಪತ್ರಗಳನ್ನು ಬರೆಯಲು ರಾಜ್ಯ ಸರಕಾರ ಮತ್ತು ವೈಎಂಎ ಈ ವೇಳೆ ನಿರ್ಧರಿಸಿದ್ದವು ಎಂದು ಅಧಿಕಾರಿಯೋರ್ವರು ತಿಳಿಸಿದರು.

46ನೇ ಬಟಾಲಿಯನ್‌ನ 15 ಸಿಬ್ಬಂದಿಗಳು ಆ.18ರಂದು ಕಡ್ಡಾಯ ತಪಾಸಣೆಗೊಳಗಾಗದೆ ಬಲವಂತದಿಂದ ಮಿಝೋರಾಂ ಪ್ರವೇಶಿಸಿದ್ದರು. ಈ ಸಿಬ್ಬಂದಿಗಳ ಪ್ರವೇಶಕ್ಕೆ ನೆರವಾಗಲು ಮತ್ತು ನಾಗರಿಕ ಆಡಳಿತವನ್ನು ಬೆದರಿಸಲು 25 ಸಿಬ್ಬಂದಿಗಳನ್ನು ಐಜ್ವಾಲ್‌ನಿಂದ ವೈರಂಗ್ಟೆ ಗಡಿ ತನಿಖಾ ಠಾಣೆಗೆ ಕಳುಹಿಸಲಾಗಿತ್ತು ಎಂದು ರಾಜ್ಯ ಗೃಹಸಚಿವಾಲಯವು ಆರೋಪಿಸಿದೆ.

ಈ ಆರೋಪವನ್ನು ನಿರಾಕರಿಸಿರುವ ಅಸ್ಸಾಂ ರೈಫಲ್ಸ್,ಭದ್ರತಾ ಸಿಬ್ಬಂದಿಗಳ ಅಂತರರಾಜ್ಯ ಚಲನವಲನಗಳನ್ನು ನಿರ್ಬಂಧಿಸುವ ಮೂಲಕ ಮಿಝೋರಾಂ ಸರಕಾರವು ಕೇಂದ್ರ ಗೃಹ ಸಚಿವಾಲಯದ ನಿರ್ದೇಶಗಳನ್ನು ಉಲ್ಲಂಘಿಸಿದೆ ಎಂದು ಹೇಳಿದೆ.

ತನ್ನ ಸಿಬ್ಬಂದಿಗಳು ಸೆಸಿ ಗ್ರಾಮದಲ್ಲಿ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದರು ಮತ್ತು ಸ್ವಾತತ್ರ್ಯೋತ್ಸವಕ್ಕೆ ಪಡೆಯು ಗೈರುಹಾಜರಾಗಿತ್ತು ಎಂಬ ಆರೋಪಗಳನ್ನೂ ಅಸ್ಸಾಂ ರೈಫಲ್ಸ್ ನಿರಾಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X