Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ರೈಸ್ಟ್‌ಚರ್ಚ್ ಮಸೀದಿ ಹತ್ಯಾಕಾಂಡ:...

ಕ್ರೈಸ್ಟ್‌ಚರ್ಚ್ ಮಸೀದಿ ಹತ್ಯಾಕಾಂಡ: ಹಂತಕನೊಂದಿಗೆ ಸಂತ್ರಸ್ತರ ಮುಖಾಮುಖಿ

ಯಾವುದೇ ಭಾವನೆ ತೋರ್ಪಡಿಸದ ದೋಷಿ

ವಾರ್ತಾಭಾರತಿವಾರ್ತಾಭಾರತಿ24 Aug 2020 9:20 PM IST
share
ಕ್ರೈಸ್ಟ್‌ಚರ್ಚ್ ಮಸೀದಿ ಹತ್ಯಾಕಾಂಡ: ಹಂತಕನೊಂದಿಗೆ ಸಂತ್ರಸ್ತರ ಮುಖಾಮುಖಿ

ಕ್ರೈಸ್ಟ್‌ಚರ್ಚ್ (ನ್ಯೂಝಿಲ್ಯಾಂಡ್), ಆ. 24: ನ್ಯೂಝಿಲ್ಯಾಂಡ್‌ನ ಕ್ರೈಸ್ಟ್‌ಚರ್ಚ್ ನಗರದ ಮಸೀದಿಯೊಂದರಲ್ಲಿ ಕಳೆದ ವರ್ಷ 51 ಮುಸ್ಲಿಮರನ್ನು ಕೊಂದ ಆರೋಪವನ್ನು ಎದುರಿಸುತ್ತಿರುವ ವ್ಯಕ್ತಿಯನ್ನು ಘಟನೆಯ ಸಂತ್ರಸ್ತರು ಸೋಮವಾರ ತರಾಟೆಗೆ ತೆಗೆದುಕೊಂಡಾಗ ಆ ವ್ಯಕ್ತಿಯು ಯಾವುದೇ ಭಾವನೆಯನ್ನು ತೋರ್ಪಡಿಸಲಿಲ್ಲ ಎಂದು ವರದಿಯಾಗಿದೆ.

ಕ್ರೈಸ್ಟ್‌ಚರ್ಚ್ ನ್ಯಾಯಾಲಯದಲ್ಲಿ ದೋಷಿಯ ಶಿಕ್ಷೆಯ ಪ್ರಮಾಣದ ವಿಚಾರಣೆ ಆರಂಭವಾದಾಗ, ಆತನ ಪೂರ್ವಯೋಜಿತ ದಾಳಿಯ ಆಘಾತಕಾರಿ ವಿವರಗಳನ್ನು ಪ್ರಾಸಿಕ್ಯೂಟರ್‌ಗಳು ನ್ಯಾಯಾಲಯದ ಮುಂದೆ ಇಟ್ಟರು. ಆ ಭೀಕರ ದಾಳಿಯ ವೇಳೆ, ತಾನು ಗುಂಡು ಹಾರಿಸಿರುವುದಕ್ಕಿಂತಲೂ ಹೆಚ್ಚಿನ ಮಂದಿಗೆ ಗುಂಡು ಹಾರಿಸಲು ದೋಷಿ ಬ್ರೆಂಟನ್ ಟಾರಂಟ್ ಬಯಸಿದ್ದನು ಎಂದು ಅವರು ಹೇಳಿದರು.

ಆಸ್ಟ್ರೇಲಿಯನ್ ಬಂದೂಕುಧಾರಿಯು ಮೊದಲ ಬಾರಿ ಮುಖಾಮುಖಿಯಾದಾಗ, ದುಃಖತಪ್ತ ಕುಟುಂಬಗಳು ಮತ್ತು ಗಾಯಾಳುಗಳು ತಾವು ಅಂದು ಪಟ್ಟ ಪಾಡನ್ನು ಬಣ್ಣಿಸಿದರು. ಹೆಣಗಳ ಅಡಿಯಲ್ಲಿ ತಾವು ಹೇಗೆ ಅಡಗಿದೆವು, ಇನ್ನು ಕಿವಿಯಲ್ಲಿ ರಿಂಗಣಿಸುವ ಸ್ವಯಂಚಾಲಿತ ಬಂದೂಕೊಂದರ ಶಬ್ಧದೊಂದಿಗೆ ತಾವು ಹೇಗೆ ಬದುಕುವುದನ್ನು ರೂಢಿಸಿಕೊಳ್ಳಬೇಕು ಎಂಬ ಬಗ್ಗೆ ಸಂತ್ರಸ್ತರು ಮಾತನಾಡಿದರು.

 2019 ಮಾರ್ಚ್ 15ರಂದು ‘ಬಿಳಿಯರು ಶ್ರೇಷ್ಠರು’ ಎಂದು ಹೇಳುವ ಸಿದ್ಧಾಂತವನ್ನು ಅನುಸರಿಸುವ ಟಾರಟ್, ಎರಡು ಮಸೀದಿಗಳಲ್ಲಿ ಪ್ರಾರ್ಥನೆ ನಡೆಸುತ್ತಿದ್ದವರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದನು. ಮಕ್ಕಳು, ಮಹಿಳೆಯರು ಎಂದು ನೋಡದೆ ಕಣ್ಣಿಗೆ ಕಾಣಿಸಿದವರ ಮೇಲೆ ಗುಂಡು ಹಾರಿಸುತ್ತಾ ಅವನು ಸಾವಿನ ಕೇಕೆ ಹಾಕಿದ್ದನು.

ತನ್ನ ವಿರುದ್ಧದ 51 ಕೊಲೆ, 40 ಕೊಲೆಯತ್ನ ಮತ್ತು ಒಂದು ಭಯೋತ್ಪಾದನೆ ಆರೋಪಗಳನ್ನು 29 ವರ್ಷದ ಹಂತಕನು ಒಪ್ಪಿಕೊಂಡಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X