Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದ್ವೇಷ ಭಾಷಣಗಳ ಬಗ್ಗೆ ಅಂಖಿದಾಸ್...

ದ್ವೇಷ ಭಾಷಣಗಳ ಬಗ್ಗೆ ಅಂಖಿದಾಸ್ ‘ಪ್ರಭಾವವಿಲ್ಲದೆ’ ಮರುಪರಿಶೀಲನೆ ನಡೆಸಿ

ಝುಕರ್ ಬರ್ಗ್ ಗೆ 54 ನಿವೃತ್ತ ಐಎಎಸ್ ಅಧಿಕಾರಿಗಳ ಪತ್ರ

ವಾರ್ತಾಭಾರತಿವಾರ್ತಾಭಾರತಿ24 Aug 2020 10:05 PM IST
share
ದ್ವೇಷ ಭಾಷಣಗಳ ಬಗ್ಗೆ ಅಂಖಿದಾಸ್ ‘ಪ್ರಭಾವವಿಲ್ಲದೆ’ ಮರುಪರಿಶೀಲನೆ ನಡೆಸಿ

ಹೊಸದಿಲ್ಲಿ, ಆ. 24: ಭಾರತದಲ್ಲಿ ಫೇಸ್‌ಬುಕ್‌ನ ದ್ವೇಷ ಭಾಷಣ ನೀತಿಯ ಕುರಿತು ಪರಿಶೀಲನೆ ನಡೆಸುವಂತೆ ಆಗ್ರಹಿಸಿ 54 ನಿವೃತ್ತ ಐಎಎಸ್ ಅಧಿಕಾರಿಗಳ ಗುಂಪು ಸೋಮವಾರ ಫೇಸ್‌ಬುಕ್‌ನ ಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮಾರ್ಕ್ ಝುಕರ್‌ಬರ್ಗ್ ಅವರಿಗೆ ಬಹಿರಂಗ ಪತ್ರ ಬರೆದಿದೆ.

“ಭಾರತದಲ್ಲಿ ಫೇಸ್‌ ಬುಕ್‌ ನ ದ್ವೇಷ ಭಾಷಣ ನೀತಿ ಪರಿಶೀಲನೆಗೆ ನೀವು ಗಂಭೀರ ಪ್ರಯತ್ನ ಮಾಡುತ್ತೀರಿ ಎಂಬ ನಿರೀಕ್ಷೆಯಿಂದ ನಾವು ಈ ಪತ್ರ ಬರೆಯುತ್ತಿದ್ದೇವೆ. ಇಂತಹ ಪರಿಶೀಲನೆ ಸಂದರ್ಭ ಫೇಸ್‌ಬುಕ್‌ನ ಸಾರ್ವಜನಿಕ ನೀತಿಯ ಭಾರತದ ಮುಖ್ಯಸ್ಥ ಅಂಖಿ ದಾಸ್ ಪರಿಶೀಲನೆಯ ಮೇಲೆ ಪ್ರಭಾವ ಬೀರುವ ಸ್ಥಾನದಲ್ಲಿ ಇರಬಾರದು” ಎಂದು ಗುಂಪು ಮನವಿ ಮಾಡಿದೆ.

ಕಾನ್‌ಸ್ಟಿಟ್ಯೂಷನಲ್ ಕಂಡಕ್ಟ್ ಗ್ರೂಪ್ ಸಂಘಟನೆಯ ಸದಸ್ಯರಾದ ನಿವೃತ್ತ ಐಎಎಸ್ ಅಧಿಕಾರಿ ಹರ್ಷ ಮಂದರ್, ನಿವೃತ್ತ ಐಪಿಎಸ್ ಅಧಿಕಾರಿ ಶಾಫಿ ಆಲಂ, ನಿವೃತ್ತ ಐಎಎಸ್ ಅಧಿಕಾರಿ ಚಂದ್ರಶೇಖರ್ ಬಾಲಕೃಷ್ಣನ್ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಸಲಾಹುದ್ದೀನ್ ಅಹ್ಮದ್ ಹಾಗೂ ಇತರರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

ಫೇಸ್‌ಬುಕ್‌ನ ದ್ವೇಷ ಭಾಷಣ ನೀತಿ ಬಗೆಗಿನ ಆಗಸ್ಟ್ 14ರ ವಾಲ್‌ಸ್ಟ್ರೀಟ್ ಜರ್ನಲ್‌ನ ಲೇಖನ ನಮ್ಮ ಗಮನ ಸೆಳೆದಿದಿದೆ. ತನ್ನ ಉದ್ಯಮಕ್ಕೆ ಉಂಟಾಗುವ ಹಾನಿ ತಪ್ಪಿಸಲು ಬಿಜೆಪಿ ನಾಯಕ ಹಾಗೂ ಇತರ ಹಿಂದೂ ರಾಷ್ಟ್ರವಾದಿ ವ್ಯಕ್ತಿಗಳು ಹಾಗೂ ಗುಂಪುಗಳ ದ್ವೇಷ ಭಾಷಣದ ಬಗ್ಗೆ ಭಾರತದಲ್ಲಿ ಫೇಸ್‌ಬುಕ್ ಕುರುಡಾಗುತ್ತಿದೆ ಎಂದು ಲೇಖನದಲ್ಲಿ ಹೇಳಲಾಗಿದೆ ಎಂದು ಗುಂಪು ತಿಳಿಸಿದೆ.

ಭಾರತದಲ್ಲಿ ದ್ವೇಷಭಾಷಣ ಅನುತ್ತೇಜಿಸುವ ನೀತಿಗಳನ್ನು ಅನುಷ್ಠಾನಗೊಳಿಸುವಲ್ಲಿ ಫೇಸ್‌ಬುಕ್ ವಿಫಲವಾಗಿದೆ. ತನ್ನ ವಾಣಿಜ್ಯ ಹಿತಾಸಾಕ್ತಿ ಕಾಯ್ದುಗೊಳ್ಳುವ ಉದ್ದೇಶದಿಂದ ಫೇಸ್‌ಬುಕ್ ಈ ರೀತಿ ವರ್ತಿಸುತ್ತಿದೆ ಎಂದು ಕಾಣುತ್ತದೆ ಎಂದು ಪತ್ರ ಹೇಳಿದೆ. ಫೇಸ್‌ಬುಕ್‌ನ ಇಂತಹ ನಡವಳಿಕೆ ಇತರ ದೇಶಗಳಲ್ಲಿ ಕೂಡ ಚರ್ಚೆಯ ವಿಷಯವಾಗಿರುವುದನ್ನು ನಾವು ಗಮನಿಸಿದ್ದೇವೆ. ಮಾನವನ ಜೀವಕ್ಕಿಂತ ವಾಣಿಜ್ಯ ಹಿತಾಸಕ್ತಿ ಮುಖ್ಯವೇ ? ಎಂದು ಗುಂಪು ಪ್ರಶ್ನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X