Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಸ್ಯಾನಿಟರಿ ಪ್ಯಾಡ್ ಜತೆಗೆ ಡಯಾಪರ್ ಕೂಡ...

‘ಸ್ಯಾನಿಟರಿ ಪ್ಯಾಡ್ ಜತೆಗೆ ಡಯಾಪರ್ ಕೂಡ ಧರಿಸುತ್ತಿದ್ದೇವೆ’: ಪಿಪಿಇ ಕಿಟ್ ಧರಿಸುವ ವೈದ್ಯೆಯರ ಅಳಲು

ವಾರ್ತಾಭಾರತಿವಾರ್ತಾಭಾರತಿ25 Aug 2020 5:38 PM IST
share
‘ಸ್ಯಾನಿಟರಿ ಪ್ಯಾಡ್ ಜತೆಗೆ ಡಯಾಪರ್ ಕೂಡ ಧರಿಸುತ್ತಿದ್ದೇವೆ’: ಪಿಪಿಇ ಕಿಟ್ ಧರಿಸುವ ವೈದ್ಯೆಯರ ಅಳಲು

ಹೊಸದಿಲ್ಲಿ: ಕೋವಿಡ್ 19 ಸಾಂಕ್ರಾಮಿಕದ ಈ ಕಷ್ಟಕರ ಸಮಯದಲ್ಲಿ ಆಸ್ಪತ್ರೆಗಳಲ್ಲಿ ಕೊರೋನ ರೋಗಿಗಳಿಗೆ ಪಿಪಿಇ ಕಿಟ್ ಧರಿಸಿ ಚಿಕಿತ್ಸೆ ನೀಡುವ ವೈದ್ಯರು, ದಾದಿಯರು, ಇತರ ಕೊರೋನ ಯೋಧರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವುದು ವಾಸ್ತವ. ಪಿಪಿಇ ಕಿಟ್ ಧರಿಸಿದಾಗ ಮೈಯ್ಯಿಡೀ ಬೆವರುವುದರ ಜತೆಗೆ ಊಟ ಮಾಡುವುದು ಬಿಡಿ, ಶೌಚಾಲಯಕ್ಕೂ ಹೋಗಲೂ ಸಾಧ್ಯವಾಗದಂತಹ ಪರಿಸ್ಥಿತಿ ಇದೆ.

ತಮ್ಮ ಸಮಸ್ಯೆಗಳ ಬಗ್ಗೆ ಮಾತನಾಡುವ ಪಂಚಕುಲಾದ ಪಾರಸ್ ಆಸ್ಪತ್ರೆಯ ನರರೋಗ ತಜ್ಞೆ ಡಾ. ಜಸ್ಲೊವಲೀನ್ ಕೌರ್, “ಮೂತ್ರ ವಿಸರ್ಜನೆಗೆ ಸಹಕಾರಿಯಾಗಲು ನಾವು ಡಯಾಪರ್ ಬಳಸುತ್ತೇವೆ'' ಎಂದು ಹೇಳುತ್ತಾರೆ.

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ. ಇಲ್ಲಿಯ ತನಕ ಎಕ್ಸ್‍ಎಲ್ ಪ್ಯಾಡ್ ಅಥವಾ ಟ್ಯಾಂಪನ್‍ ಗಳನ್ನು ಬಳಸದ ನಾನು ಈಗ ಅವುಗಳನ್ನು ಧರಿಸಬೇಕಾಗುತ್ತದೆ'' ಎಂದು ಅವರು ವಿವರಿಸುತ್ತಾರೆ.

“ಅಧಿಕ ರಕ್ತಸ್ರಾವದ ಸಮಸ್ಯೆಯಿರುವವರು ಕೆಲವೊಮ್ಮೆ ಎರಡು ಪ್ಯಾಡ್ ಅಥವಾ ಹೆಚ್ಚು ಪ್ಯಾಡ್‍ಗಳನ್ನು ಪಿಪಿಇ ಕಿಟ್ ಧರಿಸಿರುವಾಗ ಧರಿಸಬೇಕಾಗುತ್ತದೆ, ಇದು ಎಷ್ಟು ಅನಾನುಕೂಲಕರ ಎಂಬುದು ಎಲ್ಲರಿಗೂ ಅರ್ಥವಾಗಬಹುದು,'' ಎಂದು ನೊಯ್ಡಾದ ಮದರ್ ಹುಡ್ ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ. ಸಂದೀಪ್ ಛಡ್ಡ ಹೇಳುತ್ತಾರೆ.

ಬದಲಿಸುವ ಅವಕಾಶವಿಲ್ಲದೆ ಗಂಟೆಗಟ್ಟಲೆ ಒಂದೇ ಸ್ಯಾನಿಟರಿ ಪ್ಯಾಡ್ ಅಥವಾ ಟ್ಯಾಂಪನ್‍ನಲ್ಲಿರುವುದರಿಂದ ಸೋಂಕಿನ ಸಮಸ್ಯೆಗಳೂ ಕಾಡಬಹುದು ಎಂದು ಫೋರ್ಟಿಸ್ ಆಸ್ಪತ್ರೆಯ ವೈದ್ಯೆ ಡಾ. ರಿಚಾ ಸರೀನ್ ಹೇಳುತ್ತಾರೆ.

“ಜತೆಗೆ ಋತುಸ್ರಾವದ ದಿನಗಳಲ್ಲಿ ಎದುರಾಗುವ ಒತ್ತಡ ಕೂಡ ವ್ಯತಿರಿಕ್ತ ಪರಿಣಾಮ ಬೀರಬಹುದು, ಅತಿ ರಕ್ತಸ್ರಾವವಾದಾಗ ಅಥವಾ ನೋವಿದ್ದಾಗ ಸಮಸ್ಯೆ ಉಲ್ಬಣವಾಗಬಹುದು'' ಎಂದು ನವಿ ಮುಂಬೈನ ಆಸ್ಪತ್ರೆಯೊಂದರ ನರ್ಸಿಂಗ್ ಮ್ಯಾನೇಜರ್ ಆರತಿ ಮಾಧವಿ ವಿವರಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X