Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದಲ್ಲ ಒಂದು ದಿನ ಅವರು ಸಂವಿಧಾನವನ್ನು...

ಒಂದಲ್ಲ ಒಂದು ದಿನ ಅವರು ಸಂವಿಧಾನವನ್ನು ನದಿಗೆಸೆಯುತ್ತಾರೆ: ಕೇಂದ್ರದ ವಿರುದ್ಧ ಫಾರೂಕ್ ಅಬ್ದುಲ್ಲಾ ಟೀಕೆ

ವಾರ್ತಾಭಾರತಿವಾರ್ತಾಭಾರತಿ25 Aug 2020 8:09 PM IST
share
ಒಂದಲ್ಲ ಒಂದು ದಿನ ಅವರು ಸಂವಿಧಾನವನ್ನು ನದಿಗೆಸೆಯುತ್ತಾರೆ: ಕೇಂದ್ರದ ವಿರುದ್ಧ ಫಾರೂಕ್ ಅಬ್ದುಲ್ಲಾ ಟೀಕೆ

ಹೊಸದಿಲ್ಲಿ,ಆ.25: ಜಮ್ಮುಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದುಪಡಿಸಿದ್ದಕ್ಕಾಗಿ ಕೇಂದ್ರವನ್ನು ಬಲವಾಗಿ ಟೀಕಿಸಿರುವ ನ್ಯಾಶನಲ್ ಕಾನ್ಫರೆನ್ಸ್ ವರಿಷ್ಠ ಫಾರೂಕ್ ಅಬ್ದುಲ್ಲಾ ಅವರು ಮೋದಿ ಸರಕಾರವು ಸಂವಿಧಾನದಲ್ಲಿ ನಂಬಿಕೆಯಿರಿಸಿಲ್ಲವೆಂದು ಹೇಳಿದ್ದಾರೆ.

‘ದಿ ಹಿಂದೂ’ ಪತ್ರಿಕೆಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಈಗಲೂ ಬಂಧನದಲ್ಲಿರುವ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು, ವಿಶೇಷ ಸ್ಥಾನಮಾನ ರದ್ದತಿಗಾಗಿ ಕೇಂದ್ರದ ಜೊತೆ ಸಹಕರಿಸದೆ ಇದ್ದ ಕಾರಣಕ್ಕಾಗಿ ಯಾತನೆ ಪಡುತ್ತಿದ್ದಾರೆ ಎಂದರು.

‘‘ದಿಲ್ಲಿಯಲ್ಲಿದ್ದು ಆಳ್ವಿಕೆ ನಡೆಸುವ ಜನರಿಗೆ ಸಂವಿಧಾನದಲ್ಲಿ ನಂಬಿಕೆಯಿಲ್ಲ’’ ಎಂದವರು ಪತ್ರಿಕೆಗೆ ತಿಳಿಸಿದರು. ‘‘ ಅವರನ್ನು ಅವರ ದಾರಿಗೆ ಬಿಟ್ಟುಬಿಟ್ಟರೆ, ಒಂದಲ್ಲ ಒಂದು ದಿನ ಅವರು ಸಂವಿಧಾನವನ್ನು ಗಂಗಾ ಅಥವಾ ಯಮುನಾ ನದಿಗೆ ಎಸೆಯಲಿದ್ದಾರೆ. ಈ ಫ್ಯಾಶಿಸ್ಟರು ಏನನ್ನೂ ಮಾಡಿಯಾರು’’ ಎಂದವರು ಆಕ್ರೋಶ ವ್ಯಕ್ತಪಡಿಸಿದರು.

 ಆಗಸ್ಟ್ 4ರಂದು ಗುಪ್ಕಾರ್‌ನಲ್ಲಿ ನಡೆದ ಸರ್ವಪಕ್ಷ ಸಮಾವೇಶದಲ್ಲಿ ಕೈಗೊಳ್ಳಲಾದ ನಿರ್ಣಯವನ್ನು ಪುನರುಚ್ಚರಿಸಿದ ಅವರು ಜಮ್ಮುಕಾಶ್ಮೀರದ ಜನತೆಯ ಹಕ್ಕುಗಳ ರಕ್ಷಣೆಗಾಗಿ ಎಲ್ಲ ಪಕ್ಷಗಳು ಒಗ್ಗೂಡಿ ಅಭಿಯಾನವನ್ನು ಆರಂಭಿಸಲಿವೆ ಎಂದರು. ಮೆಹಬೂಬಾ ಮುಫ್ತಿ ಅವರು ಕೂಡಾ ಶೀಘ್ರದಲ್ಲೇ ಬಿಡುಗಡೆಗೊಳ್ಳುವರು ಹಾಗೂ ಕಾಶ್ಮೀರ ಮಾತ್ರವಲ್ಲ ಜಮ್ಮು, ಲೇಹ್ ಹಾಗೂ ಕಾರ್ಗಿಲ್‌ನ ಜನತೆ ಕೂಡಾ ಈ ಹೋರಾಟದಲ್ಲಿ ನಮ್ಮಿಂದಿಗಿರುವರು ಎಂದರು.

ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯ ಬಳಿಕ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧಿತನಾಗಿದ್ದ ತನ್ನನ್ನು ಭಯೋತ್ಪಾದಕ ಅಥವಾ ಕ್ರಿಮಿನಲ್‌ನಂತೆ ನಡೆಸಿಕೊಳ್ಳಲಾಗಿತ್ತೆಂದು ಫಾರೂಕ್ ಹೇಳಿದರು. ‘‘ನನ್ನನ್ನು ಕಾಣಲು ಬಂದ ಮಗಳಿಗೂ ಅವಕಾಶ ನೀಡಲಿಲ್ಲ. ಇದರಿಂದ ಆಘಾತಗೊಂಡ ಆಕೆ ಬಾಗಿಲಲ್ಲೇ ಬಸವಳಿದು ಬಿದ್ದಿದ್ದರು. ಆಕೆಗೆ ಹಲವಾರು ದಿನಗಳ ಕಾಲ ವೈದ್ಯರಿಂದ ಚಿಕಿತ್ಸೆ ನೀಡಬೇಕಾಯಿತು. ಇದು ಅತ್ಯಂತ ದುರಂತಮಯವಾದುದು. ಇವೆಲ್ಲವನ್ನೂ ನಾವು ಸಹಿಸಿಕೊಳ್ಳಬೇಕಾಯಿತು” ಎಂದು ಫಾರೂಕ್ ಸಂದರ್ಶನದಲ್ಲಿ ಹೇಳಿದ್ದಾರೆ.

ಲಡಾಕ್‌ನಲ್ಲಿ ನೆರೆಯ ರಾಷ್ಟ್ರ ಚೀನಾದ ಅತಿಕ್ರಮಣದ ಬಗ್ಗೆ ಪ್ರಧಾನಿಯವರ ಮೌನವನ್ನು ಫಾರೂಕ್ ಅವರು ಸಂದರ್ಶನದಲ್ಲಿ ಪ್ರಶ್ನಿಸಿದರು. ಒಂದು ವೇಳೆ ಪಾಕಿಸ್ತಾನವು ಅತಿಕ್ರಮ ನಡೆಸಿದ್ದರೆ, ಕೇಂದ್ರ ಸರಕಾರವು ದಿನವಿಡಿ ಕಿರುಚಾಡುತ್ತಲೇ ಇರುತ್ತಿತ್ತು ಎಂದವರು ಕಟಕಿಯಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X