Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯರ ವಿವಾಹ ಕನಿಷ್ಟ ಪ್ರಾಯಮಿತಿ...

ಮಹಿಳೆಯರ ವಿವಾಹ ಕನಿಷ್ಟ ಪ್ರಾಯಮಿತಿ ಹೆಚ್ಚಳ ಬೇಡ: ಸಾಮಾಜಿಕ ಸಂಘಟನೆಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ25 Aug 2020 10:30 PM IST
share
ಮಹಿಳೆಯರ ವಿವಾಹ ಕನಿಷ್ಟ ಪ್ರಾಯಮಿತಿ ಹೆಚ್ಚಳ ಬೇಡ: ಸಾಮಾಜಿಕ ಸಂಘಟನೆಗಳ ಆಗ್ರಹ

ಹೊಸದಿಲ್ಲಿ, ಆ.25: ಮಹಿಳೆಯರ ವಿವಾಹ ಕನಿಷ್ಟ ಪ್ರಾಯಮಿತಿ ಹೆಚ್ಚಳ ಮಾಡದಂತೆ 100ಕ್ಕೂ ಹೆಚ್ಚು ಸಾಮಾಜಿಕ ಸಂಘಟನೆಗಳು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದು, ಪ್ರಾಯಮಿತಿ ಹೆಚ್ಚಳದಿಂದ ತಾಯಿ ಹಾಗೂ ಶಿಶುವಿನ ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆ ಆಗದು ಎಂದು ಅಭಿಪ್ರಾಯಪಟ್ಟಿವೆ.

ವಿವಾಹದ ಕನಿಷ್ಟ ಪ್ರಾಯಮಿತಿ ಹೆಚ್ಚಳದಿಂದ ಇನ್ನಷ್ಟು ಮಹಿಳೆಯರು ವೈವಾಹಿಕ ಸ್ಥಾನಮಾನ ಮತ್ತು ಹಕ್ಕಿನಿಂದ ವಂಚಿತರಾಗಲಿದ್ದಾರೆ. ಕಾನೂನಿನ ಮೂಲಕ ವಿವಾಹದ ಪ್ರಾಯ ಮಿತಿ ಹೆಚ್ಚಳವು ಮಹಿಳೆಯರ ಶೀಘ್ರ ವಿವಾಹವನ್ನು ತಡೆಯುವುದಿಲ್ಲ ಅಪರಾಧೀಕರಿಸುತ್ತದೆ ಅಷ್ಟೇ ಎಂದು ಸಾಮಾಜಿಕ ಹಕ್ಕುಗಳ ರಕ್ಷಣೆಗಾಗಿ ಕಾರ್ಯ ನಿರ್ವಹಿಸುವ ಸಂಘಟನೆಗಳು ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

ಮಹಿಳೆಯರ ವಿವಾಹ ಕನಿಷ್ಟ ಪ್ರಾಯಮಿತಿಯನ್ನು ಹೆಚ್ಚಿಸಲು ನಿರ್ಧರಿಸಿರುವ ಕೇಂದ್ರ ಸರಕಾರ ಈ ನಿಟ್ಟಿನಲ್ಲಿ ಕಾರ್ಯಪಡೆಯನ್ನು ರಚಿಸಿದೆ. ಪ್ರಧಾನಿ ಮೋದಿ ತಮ್ಮ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಭಾಷಣದಲ್ಲೂ ಇದನ್ನು ಉಲ್ಲೇಖಿಸಿದ್ದರು. ಈಗ ದೇಶದಲ್ಲಿ ಮಹಿಳೆಯರ ವಿವಾಹ ಕನಿಷ್ಟ ಪ್ರಾಯಮಿತಿ 18 ವರ್ಷ, ಪುರುಷರ ವಿವಾಹ ಕನಿಷ್ಟ ಪ್ರಾಯಮಿತಿ 21 ವರ್ಷ. ಮಹಿಳೆ, ಪುರುಷರ ವಿವಾಹ ಕನಿಷ್ಟ ಪ್ರಾಯಮಿತಿಯನ್ನು 21 ವರ್ಷಕ್ಕೆ ನಿಗದಿಗೊಳಿಸುವುದು ಸರಕಾರದ ಉದ್ದೇಶವಾಗಿದ್ದು ಇದು ಲಿಂಗ ಸಮಾನತೆಯ , ಮಹಿಳಾ ಸಬಲೀಕರಣದ ಸಂಕೇತವಾಗಿದೆ ಎಂದು ಸರಕಾರ ಹೇಳಿದೆ.

ಆದರೆ, ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಮಹಿಳೆ ಮತ್ತು ಪುರುಷರ ಕನಿಷ್ಟ ವಿವಾಹ ಪ್ರಾಯಮಿತಿ 18 ವರ್ಷ. ಆದ್ದರಿಂದ ಭಾರತದಲ್ಲೂ 18 ವರ್ಷಕ್ಕೆ ಇಳಿಸುವುದು ಸೂಕ್ತ ಎಂದು ಸಂಘಟನೆಗಳು ಆಗ್ರಹಿಸಿವೆ. ಕಾನೂನು ಬದಲಾವಣೆಯ ಮೂಲಕವೇ ಉದ್ದೇಶಗಳನ್ನು ಸಾಧಿಸಬಹುದು ಎಂಬ ರೀತಿಯಲ್ಲಿ ಕಳೆದ ಕೆಲ ವರ್ಷಗಳಿಂದ ದೇಶದಲ್ಲಿ ಕಾನೂನುಗಳನ್ನು ಹೆಚ್ಚು ಶಿಕ್ಷಾರ್ಹವಾಗಿಸುವ ಪ್ರಯತ್ನ ನಡೆಯುತ್ತದೆ. ಮಹಿಳೆಯರಿಗೆ ಉನ್ನತ ಶಿಕ್ಷಣ , ಉತ್ತಮ ಉದ್ಯೋಗದ ಅವಕಾಶ ಲಭ್ಯವಾಗಿಸಲು ಕ್ರಮ ಕೈಗೊಳ್ಳದೆ ಕೇವಲ ವಯಸ್ಸಿನ ಬದಲಾವಣೆಯಿಂದ ಏನನ್ನೂ ಸಾಧಿಸಲಾಗದು. ಮಹಿಳೆಯರು ಇನ್ನಷ್ಟು ವರ್ಷ ಹುಟ್ಟಿದ ಮನೆಯಲ್ಲೇ ಇರುವಂತಾಗುತ್ತದೆ. ಅಲ್ಲದೆ ವರದಕ್ಷಿಣೆ ಹಾಗೂ ಮದುವೆ ವೆಚ್ಚ ದಿನೇ ದಿನೇ ಹೆಚ್ಚುತ್ತಿರುವ ಈ ಸಮಯದಲ್ಲಿ ಹೆಣ್ಮಕ್ಕಳ ವಿವಾಹಕ್ಕೆ ಮತ್ತೂ 3 ವರ್ಷ ಕಾಯುವುದು ಬಡ ಕುಟುಂಬದವರ ಬವಣೆಯನ್ನು ಹೆಚ್ಚಿಸುತ್ತದೆ. ಆದ್ದರಿಂದ ವಿವಾಹದ ಪ್ರಾಯಮಿತಿ ಹೆಚ್ಚಿಸುವ ಬದಲು, ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು, ಉದ್ಯೋಗ ಖಾತರಿ ಒದಗಿಸುವುದು, ಹದಿಹರೆಯದವರಿಗೆ ಕಲಿಯುವಾಗಲೇ ಸಂಪಾದಿಸುವ ಅವಕಾಶ ಒದಗಿಸುವುದು, ಹದಿಹರೆಯದವರಲ್ಲಿ ವಿಶೇಷವಾಗಿ ಹುಡುಗಿಯರಲ್ಲಿ ಅಪೌಷ್ಟಿಕತೆ ಸಮಸ್ಯೆ ನಿವಾರಣೆಗೆ ಅಂಗನವಾಡಿಯಿಂದ ಶಾಲೆಯ ಹಂತದವರೆಗೆ ಪೌಷ್ಟಿಕ ಆಹಾರ ಒದಗಿಸುವ ವ್ಯವಸ್ಥೆ ಮಾಡಲು ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಸಂಘಸಂಸ್ಥೆಗಳು ಹೇಳಿಕೆಯಲ್ಲಿ ಆಗ್ರಹಿಸಿವೆ.

  ‘ಸೆಂಟರ್ ಫಾರ್ ಚೈಲ್ಡ್ ರೈಟ್ಸ್’ನ ಸಹಸಂಸ್ಥಾಪಕಿ ಏನಾಕ್ಷಿ ಗಂಗೂಲಿ, ‘ನ್ಯಾಷನಲ್ ಕೋಅಲಿಶನ್ ಅಡ್ವೋಕೇಟಿಂಗ್ ಫಾರ್ ಅಡೋಲ್ಸೆಂಟ್ ಕನ್ಸರ್ನ್ಸ್’ನ ಕಾರ್ಯನಿರ್ವಾಹಕ ನಿರ್ದೇಶಕಿ ಮಧು ಮೆಹ್ರಾ, ಸೆಂಟರ್ ಫಾರ್ ವುಮೆನ್ಸ್ ಡೆವಲಪ್‌ಮೆಂಟ್ ಸ್ಟಡೀಸ್‌ನ ಮೇರಿ ಜಾನ್, ಮಕ್ಕಳ ಹಕ್ಕಿಗಾಗಿ ಕಾರ್ಯನಿರ್ವಹಿಸುವ ಸಂಘಟನೆಯ ನಿರ್ದೇಶಕಿ ಕವಿತಾ ರತ್ನ ಹೇಳಿಕೆಗೆ ಸಹಿ ಹಾಕಿದವರಲ್ಲಿ ಪ್ರಮುಖರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X