Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪತ್ರಕರ್ತರು ಕೊರೋನದಿಂದ ಸಾಯುವ ಸಾಧ್ಯತೆ...

ಪತ್ರಕರ್ತರು ಕೊರೋನದಿಂದ ಸಾಯುವ ಸಾಧ್ಯತೆ ಇದೆ ಎಂದ ಬ್ರೆಝಿಲ್ ಅಧ್ಯಕ್ಷ ಬೊಲ್ಸೊನಾರೊ!

ವಾರ್ತಾಭಾರತಿವಾರ್ತಾಭಾರತಿ25 Aug 2020 10:59 PM IST
share
ಪತ್ರಕರ್ತರು ಕೊರೋನದಿಂದ ಸಾಯುವ ಸಾಧ್ಯತೆ ಇದೆ ಎಂದ ಬ್ರೆಝಿಲ್ ಅಧ್ಯಕ್ಷ ಬೊಲ್ಸೊನಾರೊ!

ಸಾವೋಪೌಲೊ (ಬ್ರೆಝಿಲ್), ಆ. 25: ಸೋಮವಾರ ನಡೆದ ಸಾರ್ವಜನಿಕ ಸಮಾರಂಭವೊಂದರಲ್ಲಿ, ಪತ್ರಕರ್ತರ ವಿರುದ್ಧದ ದಾಳಿಯನ್ನು ಮುಂದುವರಿಸಿದ ಬ್ರೆಝಿಲ್ ಅಧ್ಯಕ್ಷ ಜೈರ್ ಬೊಲ್ಸೊನಾರೊ, ಪತ್ರಕರ್ತರು ‘ದೈಹಿಕವಾಗಿ ದುರ್ಬಲರು’ ಎಂದು ಬಣ್ಣಿಸಿದ್ದಾರೆ. ‘‘ಅವರು ಗಟ್ಟಿಮುಟ್ಟಾದ ದೇಹಗಳನ್ನು ಹೊಂದಿಲ್ಲ, ಹಾಗಾಗಿ, ಅವರು ಕೊರೋನ ವೈರಸ್‌ನಿಂದಾಗಿ ಸಾಯುವ ಸಾಧ್ಯತೆ ಗರಿಷ್ಠವಾಗಿದೆ’’ ಎಂದು ಹೇಳಿದ್ದಾರೆ.

ಸೇನೆಯ ಮಾಜಿ ಕ್ಯಾಪ್ಟನ್ ಆಗಿರುವ ಕಡು ಬಲಪಂಥೀಯ ಬೊಲ್ಸೊನಾರೊ, ಪತ್ರಕರ್ತರೊಂದಿಗೆ ಹಿಂದಿನಿಂದಲೂ ಕಹಿ ಸಂಬಂಧವನ್ನು ಹೊಂದಿದ್ದಾರೆ. ಅವರು ಕೆಲವು ನಿರ್ದಿಷ್ಟ ಪತ್ರಿಕೆಗಳು ಮತ್ತು ಪತ್ರಕರ್ತರ ವಿರುದ್ಧ ತನ್ನ ಕೋಪವನ್ನು ತೋರ್ಪಡಿಸುತ್ತಲೇ ಬಂದಿದ್ದಾರೆ. ಅವರ ಬೆಂಬಲಿಗರು ಕೂಡ ಸಭೆಗಳು ಮತ್ತು ಸಾರ್ವನಿಕ ಸಮಾರಂಭಗಳಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.

‘‘ನಾನು ನಿಮ್ಮ ಮುಖಕ್ಕೆ ಪದೇ ಪದೇ ಗುದ್ದಲು ಬಯಸುತ್ತೇನೆ’’ ಎಂದು ರವಿವಾರ ಬೊಲ್ಸೊನಾರೊ ಪತ್ರಕರ್ತರೊಬ್ಬರಿಗೆ ಹೇಳಿದರು. ದೇಶದ ಭ್ರಷ್ಟಾಚಾರ ಹಗರಣವೊಂದರಲ್ಲಿ ಅವರ ಪತ್ನಿಯ ಪಾತ್ರದ ಬಗ್ಗೆ ಆ ಪತ್ರಕರ್ತ ಪ್ರಶ್ನಿಸಿದಾಗ ಅವರು ಈ ರೀತಿಯಾಗಿ ಕೋಪದಿಂದ ಪ್ರತಿಕ್ರಿಯಿಸಿದ್ದರು.

ನಾನು ಹಿಂದೆ ಅಥ್ಲೀಟ್ ಆಗಿದ್ದುದರಿಂದ ಇತ್ತೀಚೆಗೆ ಕೊರೋನ ವೈರಸ್ ವಿರುದ್ಧ ಹೋರಾಡುವುದು ಸುಲಭವಾಯಿತು ಎಂದು ಸೋಮವಾರ ನಡೆದ ‘‘ಕೊರೋನ ವೈರಸನ್ನು ಸೋಲಿಸುವುದು’’ ಎಂಬ ವಿಷಯದ ಕುರಿತ ಸಮಾವೇಶದಲ್ಲಿ ಮಾತನಾಡುತ್ತಾ ಹೇಳಿದರು.

‘‘ನಾನು ಅಥ್ಲೀಟ್ ಆಗಿದ್ದೆ ಎಂದು ಹೇಳಿದಾಗ ಪತ್ರಿಕೆಗಳು ತಮಾಷೆ ಮಾಡಿವೆ. ಆದರೆ, ನಿಮ್ಮಂಥ ಬೊಜ್ಜು ದೇಹದ ಪತ್ರಕರ್ತರಿಗೆ ಕೊರೋನ ವೈರಸ್ ಬಂದರೆ ನೀವು ಬದುಕುವ ಸಂಭವನೀಯತೆ ಅತ್ಯಲ್ಪ’’ ಎಂದು ಬೊಲ್ಸೊನಾರೊ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X