Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಸುಗಂಧ ದ್ರವ್ಯಗಳನ್ನು ಬಳಸುತ್ತೀರಾ?...

ಸುಗಂಧ ದ್ರವ್ಯಗಳನ್ನು ಬಳಸುತ್ತೀರಾ? ಹಾಗಿದ್ದರೆ ಅದರ ಅಡ್ಡಪರಿಣಾಮಗಳೂ ನಿಮಗೆ ಗೊತ್ತಿರಲಿ

ವಾರ್ತಾಭಾರತಿವಾರ್ತಾಭಾರತಿ26 Aug 2020 6:01 PM IST
share
ಸುಗಂಧ ದ್ರವ್ಯಗಳನ್ನು ಬಳಸುತ್ತೀರಾ? ಹಾಗಿದ್ದರೆ ಅದರ ಅಡ್ಡಪರಿಣಾಮಗಳೂ ನಿಮಗೆ ಗೊತ್ತಿರಲಿ

ಹೆಣ್ಣಿರಲಿ ಅಥವಾ ಗಂಡಿರಲಿ,ಮನೆಯಿಂದ ಹೊರಬೀಳುವಾಗ ಇಷ್ಟದ ಸುಗಂಧ ದ್ರವ್ಯವನ್ನು ಶರೀರಕ್ಕೆ ಪೂಸಿಕೊಳ್ಳುವುದು ಸಾಮಾನ್ಯವಾಗಿದೆ. ಆದರೆ ನಿಮ್ಮ ಇಷ್ಟದ ಸುಗಂಧ ದ್ರವ್ಯ ಹಲವಾರು ಆರೋಗ್ಯ ಸಮಸ್ಯೆಗಳಿಗೆ ತನ್ನ ಪಾಲು ಸಲ್ಲಿಸುತ್ತಿರಬಹುದು. ಸುಗಂಧ ದ್ರವ್ಯಗಳು ಮತ್ತು ಪರಿಮಳ ಕಣ್ಣಿನಲ್ಲಿ ನೀರು ಬರುವಂತೆ ಮತ್ತು ಸೀನುವಂತೆ ಮಾಡಬಹುದು ಮತ್ತು ಇವು ಸೌಮ್ಯ ಅಲರ್ಜಿಗಳಾಗಿವೆ. ಆದರೆ ರಾಸಾಯನಿಕಗಳನ್ನು ಒಳಗೊಂಡಿರುವ ಸುಗಂಧ ದ್ರವ್ಯಗಳು ಕಾಂಟ್ಯಾಕ್ಟ್ ಡರ್ಮಟೈಟಿಸ್ ಎಂಬ ಚರ್ಮರೋಗವನ್ನುಂಟು ಮಾಡುತ್ತವೆ. ಇಂತಹ ಸುಗಂಧ ದ್ರವ್ಯದ ಸಂಪರ್ಕಕ್ಕೆ ಬಂದಾಗ ಚರ್ಮದಲ್ಲಿ ಉರಿಯೂತವುಂಟಾಗುತ್ತದೆ, ಕೆಂಪುಬಣ್ಣಕ್ಕೆ ತಿರುಗುತ್ತದೆ ಮತ್ತು ದದ್ದುಗಳೂ ಕಾಣಿಸಿಕೊಳ್ಳಬಹುದು,ಕಾಂಟ್ಯಾಕ್ಟ್ ಡರ್ಮಟೈಟಿಸ್ ಕಜ್ಜಿಗೂ ಕಾರಣವಾಗಬಹುದು. ಹೆಚ್ಚಿನ ಜನರಿಗೆ ಇಂತಹ ಗಂಭೀರ ಅಡ್ಡಪರಿಣಾಮಗಳು ಉಂಟಾಗುವುದಿಲ್ಲವಾದರೂ ಸುಗಂಧದ್ರವ್ಯಗಳನ್ನು ಬಳಸುವವರು ಅವುಗಳಲ್ಲಿಯ ಜೈವಿಕ ರಾಸಾಯನಿಕಗಳ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ.

ಆದರೆ ರಾಸಾಯನಿಕಗಳಿಗೆ ಅಸಹಿಷ್ಣುತೆಯನ್ನು ಹೊಂದಿರುವ ಶೇ.2ರಷ್ಟು ಜನರು ಸುಗಂಧ ದ್ರವ್ಯಗಳಿಂದಾಗಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ.

ಒಂದೆಡೆ ಅಲರ್ಜಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೆ ಸುಗಂಧ ಉತ್ಪನ್ನಗಳ ಸಂಖ್ಯೆಯೂ ಹೆಚ್ಚುತ್ತಿದೆ. ಅನಾಫಿಲಾಕ್ಸಿಸ್ ಅನ್ನು ಒಳಗೊಂಡಿರುವ ಸುಗಂಧ ದ್ರವ್ಯದ ಸಂಪರ್ಕದಿಂದ ಈಗಾಗಲೇ ಇರುವ ಕಜ್ಜಿ ಅಥವಾ ಡರ್ಮಟೈಟಿಸ್ ಉಲ್ಬಣಗೊಳ್ಳುತ್ತದೆ. ಲಭ್ಯ ಅಂಕಿಅಂಶಗಳಂತೆ ಸುಮಾರು ಶೇ.10ರಷ್ಟು ಜನರು ಸುಗಂಧ ದ್ರವ್ಯಗಳಲ್ಲಿರುವ ರಾಸಾಯನಿಕಗಳಿಂದ ಅಲರ್ಜಿಗೊಳಗಾಗುತ್ತಾರೆ. ಆದರೆ ಸುಗಂಧ ದ್ರವ್ಯಗಳ ಹೆಚ್ಚಿರುವ ಬಳಕೆಯಿಂದಾಗಿ ಅದು ಪರಿಮಳದ ಮೋಂಬತ್ತಿಯಾಗಿರಲಿ ಅಥವಾ ಏರ್ ಫ್ರೆಷ್ನರ್ ಆಗಿರಲಿ,ಶೇ.55ರಷ್ಟು ಜನರು ಕನಿಷ್ಠ ಒಂದು ಅಲರ್ಜಿಕಾರಕಕ್ಕೆ ಪಾಸಿಟಿವ್ ಆಗುತ್ತಿರುವುದರಿಂದ ಅಲರ್ಜಿಗಳು ಹೆಚ್ಚಾಗುತ್ತಿವೆ.

ನೂತನ ಅಧ್ಯಯನ ವರದಿಯೊಂದರಂತೆ ಏರ್ ಫ್ರೆಷ್ನರ್‌ಗಳು,ಪರಿಮಳಯುಕ್ತ ಮೋಂಬತ್ತಿಗಳು ಮತ್ತು ಇಂತಹ ಇತರ ವಸ್ತುಗಳು ವ್ಯಕ್ತಿಯನ್ನು ಮೈಗ್ರೇನ್ ಮತ್ತು ಅಸ್ತಮಾಕ್ಕೆ ಗುರಿಯಾಗುವ ಅಪಾಯಕ್ಕೆ ತಳ್ಳುತ್ತವೆ. ಸುಗಂಧ ಉತ್ಪನ್ನಗಳು ವ್ಯಕ್ತಿಯಲ್ಲಿ ಅಲರ್ಜಿಗಳನ್ನು ಉಂಟು ಮಾಡುತ್ತವೆ ಎಂದೂ ವರದಿಯು ಬೆಟ್ಟುಮಾಡಿದೆ. ಪರಿಮಳದ ಕಣಗಳಿಗೆ ಒಡ್ಡಿಕೊಳ್ಳುವ ಸುಮಾರು ಮೂರನೇ ಒಂದು ಭಾಗದಷ್ಟು ಜನರಲ್ಲಿ ಈ ಕಣಗಳು ನಿರೋಧಕ ವ್ಯವಸ್ಥೆಯನ್ನು ಪ್ರಚೋದಿಸುವುದರಿಂದ ಚರ್ಮದಲ್ಲಿ ಬಿರುಕುಗಳು,ಹಪ್ಪಳೆಗಳು ಮತ್ತು ತುರಿಕೆ ಕಾಣಿಸಿಕೊಳ್ಳುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X