Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 6ನೆ ತರಗತಿಯ ಸಮಾಜಶಾಸ್ತ್ರ ಪಠ್ಯದಲ್ಲಿನ...

6ನೆ ತರಗತಿಯ ಸಮಾಜಶಾಸ್ತ್ರ ಪಠ್ಯದಲ್ಲಿನ ಪಾಠ ಕೈಬಿಡಲು ಶಿಕ್ಷಣ ಸಚಿವರ ಆದೇಶ

ವಾರ್ತಾಭಾರತಿವಾರ್ತಾಭಾರತಿ26 Aug 2020 8:22 PM IST
share
6ನೆ ತರಗತಿಯ ಸಮಾಜಶಾಸ್ತ್ರ ಪಠ್ಯದಲ್ಲಿನ ಪಾಠ ಕೈಬಿಡಲು ಶಿಕ್ಷಣ ಸಚಿವರ ಆದೇಶ

ಉಡುಪಿ, ಆ.26: ಆರನೇ ತರಗತಿಯ ಸಮಾಜಶಾಸ್ತ್ರ ಪಠ್ಯದಲ್ಲಿ ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗಿರುವ ಅಂಶಗಳಿವೆ ಎಂಬ ಆಕ್ಷೇಪದ ಹಿನ್ನೆಲೆ ಯಲ್ಲಿ ಆ ಪಾಠವನ್ನು ಕೈ ಬಿಡಲು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ನೀಡಿದ್ದಾರೆ.

‘ಉತ್ತರ ವೇದಕಾಲದಲ್ಲಿ ವೈದಿಕ ಆಚರಣೆಗಳಾದ ಯಾಗ-ಯಜ್ಞಗಳ ಹೆಸರಲ್ಲಿ ಕೃಷಿಗೆ ನೆರವಾಗುತ್ತಿದ್ದ ಪ್ರಾಣಿಗಳನ್ನು ಕೊಲ್ಲಲಾಗುತ್ತಿತ್ತು. ಇದರಿಂದ ಆಹಾರದ ಉತ್ಪಾದನೆ ಕುಂಠಿತವಾಯಿತು. ಯಾಗಗಳಿಗೆ ಆಹಾರ ಧಾನ್ಯ- ಹಾಲು-ತುಪ್ಪಗಳನ್ನು ಹಾಕಿದ ಪರಿಣಾಮ ಆಹಾರದ ಅಭಾವವೂ ಉಂಟಾಯಿತು. ಯಾಗ ಯಜ್ಞಗಳಿಂದ ಮಾತ್ರ ಮುಕ್ತಿ ಸಾಧ್ಯ ಎಂಬ ನಂಬಿಕೆ ಜನರಲ್ಲಿ ಮನೆ ಮಾಡಿತ್ತು. ಸಂಸ್ಕೃತವೆಂಬ ಪುರೋಹಿತ ಭಾಷೆಯಲ್ಲಿ ಈ ಆಚರಣೆಗಳು ನಡೆಯುತ್ತಿದ್ದು ಜನಸಾಮಾನ್ಯರಿಗೆ ಇದು ಅರ್ಥವಾಗುತ್ತಿರಲಿಲ್ಲ. ಸರಳ ಮಾರ್ಗ ಗಳ ಮೂಲಕ ಮುಕ್ತಿ ಹೊಂದಲು ಹೊಸ ಧರ್ಮವನ್ನು ಜನ ಅಪೇಕ್ಷಿಸುತ್ತಿದ್ದರು’ ಎಂದು ಈ ಪಠ್ಯದಲ್ಲಿ ಬರೆಯಲಾಗಿದೆ.

ಪಠ್ಯದಲ್ಲಿರುವ ಯಾಗದ ಕುರಿತ ವಿಚಾರ ತಪ್ಪು ಎಂಬ ಅಭಿಪ್ರಾಯದಲ್ಲಿ ಉಡುಪಿಯ ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಆಡಿಯೋ ಬಿಡುಗಡೆ ಮಾಡಿದ್ದರು. ಈ ಕುರಿತು ಸಾಮಾಜಿಕ ಜಾಲ ತಾಣಗಲ್ಲಿ ವ್ಯಾಪಕ ಚರ್ಚೆಯೂ ನಡೆದಿತ್ತು.

ಇದಕ್ಕೆ ಪ್ರತಿಕ್ರಿಯಿಸಿ ಆಡಿಯೋ ಬಿಡುಗಡೆ ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈ ಪಾಠ ಪುಸ್ತಕ ಈ ವರ್ಷ ಪ್ರಕಟವಾಗಿದ್ದಲ್ಲ. ಈ ವರ್ಷ ಯಾವುದೇ ಪಠ್ಯವನ್ನು ನಾವು ಪರಿಷ್ಕರಿಸಿಲ್ಲ. ಆದರೂ ಈ ವರ್ಷ ಈ ಪಾಠವನ್ನು ಮಾಡದಿರುವಂತೆ ಆದೇಶ ನೀಡುತ್ತೇನೆ. ಮುಂದಿನ ವರ್ಷ ಪಠ್ಯ ಪುಸ್ತಕ ಪ್ರಕಟ ವಾಗುವಾಗ ಈ ಪಾಠ ತೆಗೆಯಲಾಗುವುದು. ಈಗಾಗಲೇ ಎಲ್ಲ ಪಠ್ಯ ಪುಸ್ತಕ ಗಳು ಮುದ್ರಣ ಮಾಡಿ ಮಕ್ಕಳಿಗೆ ತಲುಪಿಸಿರುವುದರಿಂದ ಆ ಅಂಶವನ್ನು ಪಠ್ಯದಿಂದ ತೆಗೆಯಲು ಆಗಲ್ಲ ಎಂದು ಹೇಳಲು ವಿಷಾಧಿಸುತ್ತೇನೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X