Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನವಾಲ್ನಿಗೆ ವಿಷಪ್ರಾಶನ: ಸ್ವತಂತ್ರ...

ನವಾಲ್ನಿಗೆ ವಿಷಪ್ರಾಶನ: ಸ್ವತಂತ್ರ ತನಿಖೆಗೆ ಬ್ರಿಟನ್ ಪ್ರಧಾನಿ ಕರೆ

ವಾರ್ತಾಭಾರತಿವಾರ್ತಾಭಾರತಿ26 Aug 2020 10:28 PM IST
share
ನವಾಲ್ನಿಗೆ ವಿಷಪ್ರಾಶನ: ಸ್ವತಂತ್ರ ತನಿಖೆಗೆ ಬ್ರಿಟನ್ ಪ್ರಧಾನಿ ಕರೆ

ಲಂಡನ್, ಆ. 2: ರಶ್ಯದ ಪ್ರತಿಪಕ್ಷ ನಾಯಕ ಅಲೆಕ್ಸೀ ನವಾಲ್ನಿಗೆ ವಿಷವುಣಿಸಲಾಗಿದೆ ಎನ್ನಲಾದ ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆ ನಡೆಯಬೇಕೆಂದು ಬ್ರಿಟನ್ ಬಯಸುತ್ತದೆ ಎಂದು ಆ ದೇಶದ ಪ್ರಧಾನಿ ಬೊರಿಸ್ ಜಾನ್ಸನ್ ಬುಧವಾರ ಹೇಳಿದ್ದಾರೆ.

‘‘ನವಾಲ್ನಿಗೆ ಏನು ಆಯಿತು ಎಂಬ ಬಗ್ಗೆ ನಾವು ಸಂಪೂರ್ಣ ಹಾಗೂ ಪಾರದರ್ಶಕ ತನಿಖೆಯೊಂದನ್ನು ಬಯಸುತ್ತೇವೆ. ಈ ಕೃತ್ಯ ಮಾಡಿದವರು ಕಾನೂನಿನ ಕ್ರಮಕ್ಕೆ ಒಳಗಾಗಬೇಕು ಹಾಗೂ ಸಂತ್ರಸ್ತನಿಗೆ ನ್ಯಾಯ ಒದಗಿಸುವ ಅಂತರ್‌ರಾಷ್ಟ್ರೀಯ ಪ್ರಯತ್ನಗಳಲ್ಲಿ ಬ್ರಿಟನ್ ಕೈಜೋಡಿಸುತ್ತದೆ’’ ಎಂದು ಅವರು ನುಡಿದರು.

 ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್‌ರ ಕಟು ಟೀಕಾಕಾರರಾಗಿರುವ 44 ವರ್ಷದ ನವಾಲ್ನಿಯು ಗುರುವಾರ ಸೈಬೀರಿಯದಿಂದ ಮಾಸ್ಕೋಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ತೀವ್ರ ಅಸ್ವಸ್ಥರಾಗಿ ಪ್ರಜ್ಞಾಹೀನ ಸ್ಥಿತಿಯನ್ನು ತಲುಪಿದ್ದರು. ಬಳಿಕ ವಿಮಾನ ಸೈಬೀರಿಯದ ಓಮ್‌ಸ್ಕ್ ನಗರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು ಅವರನ್ನು ಅಲ್ಲಿನ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿತ್ತು.

ಶನಿವಾರ ಅವರನ್ನು ಜರ್ಮನಿ ರಾಜಧಾನಿ ಬರ್ಲಿನ್‌ನ ಆಸ್ಪತ್ರೆಯೊಂದಕ್ಕೆ ಸಾಗಿಸಲಾಗಿತ್ತು.

2006ರಲ್ಲಿ ರಶ್ಯದ ಗುಪ್ತಚರ ಸಂಸ್ಥೆ ಕೆಜಿಬಿಯ ಮಾಜಿ ಏಜಂಟ್ ಅಲೆಕ್ಸಾಂಡರ್ ಲಿಟ್ವಿನೆಂಕೊರನ್ನು ಲಂಡನ್‌ನಲ್ಲಿ ವಿಷಕಾರಿ ವಿಕಿರಣ ಹಾಯಿಸಿ ಕೊಲೆ ಮಾಡಲಾಗಿತ್ತು ಹಾಗೂ ಈ ಕೊಲೆಯ ಹಿಂದೆ ಪುಟಿನ್ ಇದ್ದಾರೆ ಎಂದು ಆರೋಪಿಸಲಾಗಿತ್ತು.

2018ರಲ್ಲಿ ಆಗ್ನೇಯ ಇಂಗ್ಲೆಂಡ್‌ನ ಸ್ಯಾಲಿಸ್‌ಬರಿಯಲ್ಲಿ ರಶ್ಯದ ಡಬಲ್ ಏಜಂಟ್ ಸರ್ಗೀ ಸ್ಕ್ರಿಪಾಲ್‌ರನ್ನು ಸೇನೆಯಲ್ಲಿ ಬಳಸಲಾಗುವ ಅತಿ ವಿಷಕಾರಕ ರಾಸಾಯನಿಕವೊಂದನ್ನು ಬಳಸಿ ಕೊಲೆ ಮಾಡಲು ಯತ್ನಿಸಲಾಗಿತ್ತು. ಅದರ ಹಿಂದೆಯೂ ರಶ್ಯ ಸರಕಾರವಿತ್ತು ಎಂದು ಆರೋಪಿಸಲಾಗಿದೆ.

ನವಾಲ್ನಿಗೆ ವಿಷಪ್ರಾಶನವಾಗಿದೆ ಎಂಬ ಆರೋಪಗಳ ಬಗ್ಗೆ ‘ಸಂಪೂರ್ಣ ಹಾಗೂ ಸ್ವತಂತ್ರ’ ಅಂತರ್‌ರಾಷ್ಟ್ರೀಯ ತನಿಖೆ ನಡೆಸುವಂತೆ ಕಳೆದ ವಾರ ಸರ್ವಪಕ್ಷ ಬ್ರಿಟಿಶ್ ಸಂಸದರ ಗುಂಪೊಂದು ಲಂಡನ್‌ನಲ್ಲಿರುವ ರಶ್ಯ ರಾಯಭಾರಿಗೆ ಪತ್ರ ಬರೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X