ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಗಂಗಾಧರ ಭಟ್ ನಿಧನ
ಬಂಟ್ವಾಳ, ಆ.27: ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಯು.ಗಂಗಾಧರ ಭಟ್(90) ಅಲ್ಪಕಾಲದ ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗಿನ ಜಾವ ನಿಧನರಾಗಿದ್ದಾರೆ.
ಸತ್ಯಸಾಯಿ ಬಾಬಾ ಅವರ ಭಕ್ತರಾಗಿದ್ದ ಗಂಗಾಧರ ಭಟ್ ಅವರು ಮಡಿಯಾಲ ನಾರಾಯಣ ಭಟ್ ಜತೆಗೆ ಅಳಿಕೆ ಹಾಗೂ ಮುದ್ದೇನಹಳ್ಳಿಯಲ್ಲಿ ವಿದ್ಯಾಸಂಸ್ಥೆ ಕಟ್ಟಿ ಬೆಳೆಸುವಲ್ಲಿ ಮುಂಚೂಣಿಯಲ್ಲಿದ್ದರು. 1977ರಿಂದ ಇಲ್ಲಿಯ ತನಕ ಸುಮಾರು 43 ವರ್ಷಗಳ ಕಾಲ ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಮಧ್ಯಾಹ್ನ ಅಳಿಕೆ ಶ್ರೀ ಸತ್ಯಸಾಯಿಲೋಕ ಸೇವಾ ವಿದ್ಯಾಸಂಸ್ಥೆಗಳ ಆವರಣದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಲಿದೆ.
ಸಂತಾಪ: ಯು.ಗಂಗಾಧರ ಭಟ್ ನಿಧನಕ್ಕೆ ಉಕ್ಕುಡ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ರಶೀದ್ ವಿಟ್ಲ ಸಂತಾಪ ಸೂಚಿಸಿದ್ದಾರೆ.
Next Story