Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರಕಾರದ ಅನುಮತಿಯಿಲ್ಲದೆ ಕೇಂದ್ರ...

ಕೇಂದ್ರ ಸರಕಾರದ ಅನುಮತಿಯಿಲ್ಲದೆ ಕೇಂದ್ರ ಸಚಿವ ಠಾಕೂರ್ ವಿರುದ್ಧ ಎಫ್ಐಆರ್ ಇಲ್ಲ ಎಂದ ದಿಲ್ಲಿ ಕೋರ್ಟ್

ದ್ವೇಷ ಭಾಷಣ ಆರೋಪ

ವಾರ್ತಾಭಾರತಿವಾರ್ತಾಭಾರತಿ27 Aug 2020 10:37 PM IST
share
ಕೇಂದ್ರ ಸರಕಾರದ ಅನುಮತಿಯಿಲ್ಲದೆ ಕೇಂದ್ರ ಸಚಿವ ಠಾಕೂರ್ ವಿರುದ್ಧ ಎಫ್ಐಆರ್ ಇಲ್ಲ ಎಂದ ದಿಲ್ಲಿ ಕೋರ್ಟ್

 ಹೊಸದಿಲ್ಲಿ, ಆ.28: ದಿಲ್ಲಿಯ ಶಾಹೀನ್‌ ಬಾಗ್‌ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ವಿರೋಧಿಸಿ ದ್ವೇಷ ಭಾಷಣದ ಮಾಡಿದ್ದ ಆರೋಪದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಹಾಗೂ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರಿ ಸಿಪಿಎಂ ನಾಯಕಿ ಬೃಂದಾ ಕಾರಟ್ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿಯ ನ್ಯಾಯಾಲಯವು ಬುಧವಾರ ತಳ್ಳಿಹಾಕಿದೆ.

ಕಾನೂನು ಪ್ರಕಾರ ಕೇಂದ್ರ ಸಚಿವ ಹಾಗೂ ಸಂಸದರ ವಿರುದ್ಧ ಎಫ್‌ಐಆರ್ ದಾಖಲಿಸುವುದಕ್ಕೆ ಕೇಂದ್ರ ಸರಕಾರದ ಅನುಮತಿ ಅಗತ್ಯವಿರುವುದರಿಂದ ಕಾರಟ್ ಅವರ ಅರ್ಜಿಯನ್ನು ತಿರಸ್ಕರಿಸಿರುವುದಾಗಿ ಅವರು ಹೇಳಿದ್ದಾರೆ.

 ಠಾಕೂರ್ ಹಾಗೂ ವರ್ಮಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದಿಲ್ಲಿ ಪೊಲೀಸರಿಗೆ ಸೂಚನೆ ನೀಡಬೇಕೆಂದು ಕೋರಿ ಬೃಂದಾ ಕಾರಟ್ ಹಾಗೂ ಕೆ.ಎಂ. ತಿವಾರಿ ದಿಲ್ಲಿ ಪೊಲೀಸರಿಗೆ ದೂರು ನೀಡಿದ್ದರು.

‘‘ ಆರೋಪಕ್ಕೆ ಸಂಬಂಧಿಸಿ ಪ್ರತಿವಾದಿಗಳ ಮೇಲೆ ಕಾನೂನುಕ್ರಮ ಕೈಗೊಳ್ಳಲು ದೂರುದಾರರು, ಸಂಬಂಧಪಟ್ಟ ಪ್ರಾಧಿಕಾರ (ಕೇಂದ್ರ ಸರಕಾರ)ದಿಂದ ಅನುಮತಿಯನ್ನು ಪಡೆದಿಲ್ಲ. ಹೀಗಾಗಿ ಈ ದೂರನ್ನು ವಜಾಗೊಳಿಸಲಾಗಿದೆ’’ ಎಂದು ನ್ಯಾಯಾಲಯ ತಿಳಿಸಿದೆ.

‘‘ ಸಿಎಎ ಪ್ರತಿಭಟನೆಯ ವಿರುದ್ಧ ಠಾಕೂರ್ ಹಾಗೂ ವರ್ಮಾ ಜನರನ್ನು ಪ್ರಚೋದಿಸಿದ್ದರು. ಇದರ ಪರಿಣಾಮವಾಗಿ ದಿಲ್ಲಿಯ ಎರಡು ಪ್ರತಿಭಟನಾ ಸ್ಥಳಗಳಲ್ಲಿ ಗುಂಡು ಹಾರಾಟದ ಘಟನೆಗಳು ನಡೆದಿದ್ದವು’’ ಎಂದು ಕಾರಟ್ ದೂರಿನಲ್ಲಿ ಹೇಳಿದ್ದರು.

  ಠಾಕೂರ್ ಹಾಗೂ ವರ್ಮಾ ವಿರುದ್ಧ ತಾನು ದಿಲ್ಲಿ ಪೊಲೀಸ್ ಆಯುಕ್ತ ಹಾಗೂ ಸಂಸತ್ ‌ಭವನ ರಸ್ತೆಯ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದರೂ, ಅವರು ಅದಕ್ಕೆ ಪ್ರತಿಕ್ರಿಯಿಸಿಲ್ಲವೆಂದು ಕಾರಟ್ ಆಪಾದಿಸಿದ್ದರು.

    ಅನುರಾಗ್ ಠಾಕೂರ್ ಅವರು ಜನವರಿ 27ರಂದು ಪಾಲ್ಗೊಂಡಿದ್ದ ಸಾರ್ವಜನಿಕ ರ್ಯಾಲಿಯಲ್ಲಿ, ಸಿಎಎ ವಿರೋಧಿ ಪ್ರತಿಭಟನಕಾರರ ವಿರುದ್ಧ ಭಾಷಣ ಮಾಡಿದ್ದು, ‘‘ ದೇಶದ್ರೋಹಿಗಳಿಗೆ ಗುಂಡಿಕ್ಕಿ’’ ಎಂದು ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ್ದರು ಎಂದು ಕಾರಟ್ ಆಪಾದಿಸಿದ್ದರು. ಸಂಸದ ವರ್ಮ ಕೂಡಾ ಜನವರಿ 28ರಂದು ಸಿಎಎ ವಿರೋಧಿ ಪ್ರತಿಭಟನಕಾರರ ವಿರುದ್ಧ ನಿಂದನಾತ್ಮಕ ಭಾಷಣ ಮಾಡಿದ್ದರು ಎಂದು ದೂರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X