Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಬದನೆ ರಸದ ಅದ್ಭುತ ಆರೋಗ್ಯಲಾಭಗಳು

ಬದನೆ ರಸದ ಅದ್ಭುತ ಆರೋಗ್ಯಲಾಭಗಳು

ವಾರ್ತಾಭಾರತಿವಾರ್ತಾಭಾರತಿ28 Aug 2020 6:15 PM IST
share

ಎಗ್‌ಪ್ಲಾಂಟ್ ಅಥವಾ ಬದನೆ ನಿಮಗೆ ಇಷ್ಟವೇ? ಅಲ್ಲದಿದ್ದರೂ ನೀವು ಅದನ್ನು ಖಂಡಿತ ತಿನ್ನಬೇಕು ಎಂದರೆ ನಿಮಗೆ ಅಚ್ಚರಿಯಾಗಬಹುದು. ಬದನೆಯ ರುಚಿಯಲ್ಲದೆ ಅದು ನೀಡುವ ಆರೋಗ್ಯಲಾಭಗಳ ಬಗ್ಗೆ ಎಂದಾದರೂ ಯೋಚಿಸಿದ್ದೀರಾ? ಬದನೆಯು ಮಧುಮೇಹವನ್ನು ನಿಯಂತ್ರಿಸಲು ನೆರವಾಗುತ್ತದೆ ಎನ್ನುವುದು ನಿಮಗೆ ಗೊತ್ತೇ? ಬದನೆ ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಬೊಜ್ಜನ್ನು ತಗ್ಗಿಸಲು ಸಹ ನೆರವಾಗುತ್ತದೆ. ನೀವು ದೇಹತೂಕವನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ಬದನೆ ನಿಮ್ಮ ಆಹಾರದಲ್ಲಿರಲಿ. ಬದನೆಯಲ್ಲಿರುವ ಖನಿಜಗಳು,ಉತ್ಕರ್ಷಣ ನಿರೋಧಕಗಳು ಮತ್ತು ವಿಟಾಮಿನ್‌ಗಳು ನಮ್ಮ ಶರೀರಕ್ಕೆ ಲಾಭದಾಯಕವಾಗಿವೆ. ನಮ್ಮ ಆರೋಗ್ಯಕ್ಕೆ ಪೂರಕವಾಗಿರುವ ಇಂತಹ ಹಲವಾರು ಪೋಷಕಾಂಶಗಳು ಬದನೆಯಲ್ಲಿವೆ. ಸೋರೆಕಾಯಿ ರಸ, ಹಾಗಲಕಾಯಿ ರಸದ ಬಗ್ಗೆ ನೀವು ಕೇಳಿರಬಹುದಾದರೂ ಬದನೆ ರಸದ ಬಗ್ಗೆ ಕೇಳಿರಲಿಕ್ಕಿಲ್ಲ. ಬದನೆ ರಸವು ನೀಡುವ ಆರೋಗ್ಯಲಾಭಗಳ ಕುರಿತು ಮಾಹಿತಿಗಳಿಲ್ಲಿವೆ.....

►ಮಧುಮೇಹವನ್ನು ನಿಯಂತ್ರಿಸುತ್ತದೆ

ಬದನೆ ರಸವು ಮಧುಮೇಹಿಗಳಲ್ಲಿ ರಕ್ತದಲ್ಲಿಯ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ನೆರವಾಗುತ್ತದೆ. ಅದರಲ್ಲಿ ಗಣನೀಯ ಪ್ರಮಾಣದಲ್ಲಿರುವ ನಾರು ರಕ್ತದಲ್ಲಿಯ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಅದು ಸ್ವಲ್ಪ ಪ್ರಮಾಣದಲ್ಲಿ ಕರಗಬಲ್ಲ ಕಾರ್ಬೊಹೈಡ್ರೇಟ್‌ಗಳನ್ನೂ ಒಳಗೊಂಡಿರುತ್ತದೆ. ಈ ಕಾರಣದಿಂದಾಗಿ ಬದನೆಯು ಮಧುಮೇಹಿಗಳಿಗೆ ತುಂಬ ಲಾಭದಾಯಕವಾಗಿದೆ. ಬದನೆ ರಸವನ್ನು ಯಾವುದೇ ರೀತಿಯಲ್ಲಿ ಸೇವಿಸಬಹುದು.

►ಹೃದ್ರೋಗಿಗಳಿಗೆ ಒಳ್ಳೆಯದು

ಬದನೆ ರಸದ ಸೇವನೆಯು ಹೃದ್ರೋಗಿಗಳಿಗೆ ಒಳ್ಳೆಯದು. ಬದನೆಯಲ್ಲಿ ವಿಟಾಮಿನ್ ಬಿ6,ವಿಟಾಮಿನ್ ಸಿ,ಪೊಟ್ಯಾಷಿಯಂ,ನಾರು ಮತ್ತು ಫೈಟೊನ್ಯೂಟ್ರಿಯಂಟ್‌ಗಳು ಹೇರಳವಾಗಿದ್ದು,ಇವು ಹೃದಯದ ಆರೋಗ್ಯಕ್ಕೆ ಪೂರಕವಾಗಿವೆ. ಬದನೆಯಲ್ಲಿ ಫ್ಲಾವನೈಡ್‌ಗಳೂ ನಿಖರ ಪ್ರಮಾಣದಲ್ಲಿವೆ. ಹೀಗಾಗಿ ಅದು ಪಾರ್ಶ್ವವಾಯು ಮತ್ತು ಹೃದಯಾಘಾತಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಆರೋಗ್ಯವಂತ ವ್ಯಕ್ತಿ ಬದನೆ ರಸವನ್ನು ನಿಯಮಿತವಾಗಿ ಸೇವಿಸುತ್ತಿದ್ದರೆ ಭವಿಷ್ಯದಲ್ಲಿ ಹೃದಯ ರೋಗಗಳಿಗೆ ಗುರಿಯಾಗುವ ಸಾಧ್ಯತೆಗಳು ಕಡಿಮೆಯಾಗುತ್ತವೆ.

►ಬೊಜ್ಜನ್ನು ಕಡಿಮೆ ಮಾಡುತ್ತದೆ

ನಿಮ್ಮ ಶರೀರದಲ್ಲಿಯ ಬೊಜ್ಜನ್ನು ಕರಗಿಸಲು ಮತ್ತು ಚಯಾಪಚಯವನ್ನು ಹೆಚ್ಚಿಸಲು ಬದನೆಯು ನೆರವಾಗಬಲ್ಲದು. ಪ್ರತಿ ದಿನ ಮಧ್ಯಾಹ್ನದ ಊಟಕ್ಕೆ ಮೊದಲು ಒಂದು ಕಪ್ ಬದನೆ ರಸ ಸೇವಿಸುವುದರೊಂದಿಗೆ ನೀವು ಶರೀರದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಬದನೆಯಲ್ಲಿರುವ ನಾರು ಹೊಟ್ಟೆ ತುಂಬಿರುವಂತೆ ಮಾಡುತ್ತದೆ ಮತ್ತು ಮಧ್ಯೆ ಮಧ್ಯೆ ಏನಾದರೂ ತಿನ್ನುತ್ತಿರಬೇಕೆಂಬ ತುಡಿತವುಂಟಾಗುವುದಿಲ್ಲ. ಬದನೆ ರಸದಲ್ಲಿರುವ ಸಾಪೊನಿನ್ ಶರೀರವು ಕೊಬ್ಬನ್ನು ಹೀರಿಕೊಳ್ಳುವುದನ್ನು ತಡೆಯುತ್ತದೆ.

►ಕೊಲೆಸ್ಟ್ರಾಲ್ ತಗ್ಗಿಸಲು ನೆರವಾಗುತ್ತದೆ

ಬದನೆ ರಸದ ಸೇವನೆಯು ರಕ್ತದಲ್ಲಿಯ ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ. ಬದನೆ ಗಿಡದ ಎಲೆಗಳ ರಸವನ್ನು ಸೇವಿಸುವ ಮೂಲಕವೂ ರಕ್ತದಲ್ಲಿಯ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿಕೊಳ್ಳಬಹುದು.

►ರಕ್ತದೊತ್ತಡ ಕಡಿಮೆ ಮಾಡುತ್ತದೆ

ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರಿಗೆ ಬದನೆಯು ಅತ್ಯಂತ ಲಾಭದಾಯಕವಾಗಿದೆ. ಬದನೆಯಲ್ಲಿ ಪೊಟ್ಯಾಷಿಯಂ ಸರಿಯಾದ ಪ್ರಮಾಣದಲ್ಲಿರುತ್ತದೆ ಮತ್ತು ಪೊಟ್ಯಾಷಿಯಂ ಸಮೃದ್ಧ ಆಹಾರ ಕ್ರಮವು ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುತ್ತದೆ ಹೀಗಾಗಿ ಬದನೆ ರಸವನ್ನು ಸೇವಿಸುವುದು ಅಧಿಕ ರಕ್ತದೊತ್ತಡ ರೋಗಿಗಳಿಗೆ ಒಳ್ಳೆಯದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X