ಅನುಮಾನಾಸ್ಪದ ಬೀಜ ಪೊಟ್ಟಣಗಳ ಬಗ್ಗೆ ಎಚ್ಚರ ವಹಿಸಲು ಸೂಚನೆ
ಮಂಗಳೂರು, ಆ.28: ಅನುಮಾನಸ್ಪದವಾಗಿ ಬೀಜಗಳ ಪೊಟ್ಟಣಗಳು ಅಜ್ಞಾತ ಮೂಲಗಳಿಂದ ಸಾಗಾಣಿಕೆಯಾಗಿರುವ ಬಗ್ಗೆ ಮಾಹಿತಿ ಬಂದಿರುತ್ತದೆ. ಈ ಬೀಜಗಳು ಹೊರಗಿನ ಆಕ್ರಮಣಕಾರಿ ಜಾತಿಗಳಾಗಿರಬಹುದು ಅಥವಾ ರೋಗಕಾರಕಗಳಾಗಿರಬಹುದು. ಇದು ಕೃಷಿ ಪರಿಸರ ವ್ಯವಸ್ಥೆಗೆ, ಜೀವ ವೈವಿಧ್ಯತೆಗೆ ಹಾಗೂ ರಾಷ್ಟ್ರ ಭದ್ರತೆಗೆ ಗಂಭೀರ ಅಪಾಯವಾಗಬಹುದು. ಆದುದರಿಂದ ರೈತ ಬಾಂಧವರು ಅಪೇಕ್ಷಿಸದ, ಅನುಮಾನಸ್ಪದ ಬೀಜಗಳ ಪೊಟ್ಟಣಗಳನ್ನು ಖರೀದಿಸುವುದು ಹಾಗೂ ಇಂತಹ ಪ್ರಕರಣ ಕಂಡು ಬಂದಲ್ಲಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ದ.ಕ. ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಪ್ರಕಟನೆ ತಿಳಿಸಿದೆ.
Next Story





