Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು ಕಾಶ್ಮೀರದ ಆಡಳಿತಕ್ಕೆ ಹೊಸ...

ಜಮ್ಮು ಕಾಶ್ಮೀರದ ಆಡಳಿತಕ್ಕೆ ಹೊಸ ನಿಯಮಾವಳಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ28 Aug 2020 10:17 PM IST
share
ಜಮ್ಮು ಕಾಶ್ಮೀರದ ಆಡಳಿತಕ್ಕೆ ಹೊಸ ನಿಯಮಾವಳಿ ಪ್ರಕಟ

ಶ್ರೀನಗರ, ಆ.28: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಸಚಿವರ ಸಮಿತಿಯ ಕಾರ್ಯಗಳನ್ನು ನಿರ್ದಿಷ್ಟಪಡಿಸುವ (ನಿಖರಗೊಳಿಸುವ) ಹೊಸ ನಿಯಮಗಳನ್ನು ಶುಕ್ರವಾರ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.

 ಹೊಸ ವ್ಯವಹಾರ ನಿಯಮದ ಪ್ರಕಾರ, ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ, ಅಖಿಲ ಭಾರತೀಯ ಸೇವೆ ಮತ್ತು ಭ್ರಷ್ಟಾಚಾರ ನಿಗ್ರಹ ವ್ಯವಸ್ಥೆಗಳು ಲೆಫ್ಟಿನೆಂಟ್ ಗವರ್ನರ್ ಅವರ ಕಾರ್ಯನಿರ್ವಹಣೆಯಡಿ ಬರುತ್ತವೆ. ಅಂದರೆ ಸಚಿವರ ಸಮಿತಿ ಅಥವಾ ಮುಖ್ಯಮಂತ್ರಿಗೆ ಈ ಕಾರ್ಯ ವ್ಯವಸ್ಥೆಯಲ್ಲಿ ಯಾವುದೇ ಅಧಿಕಾರ ಇರುವುದಿಲ್ಲ.

 ಕೇಂದ್ರಾಡಳಿತ ಪ್ರದೇಶದ ಶಾಂತಿ ಮತ್ತು ನೆಮ್ಮದಿಯ ಮೇಲೆ ಅಥವಾ ಅಲ್ಪಸಂಖ್ಯಾತ ಸಮುದಾಯ, ಎಸ್‌ಸಿ/ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಮೇಲೆ ಪರಿಣಾಮ ಬೀರುವ ಅಥವಾ ಬೀಳಬಹುದಾದ ಯಾವುದೇ ವಿಷಯ ಅಥವಾ ಪ್ರಸ್ತಾವನೆಗೆ ಸಂಬಂಧಿಸಿ ಆದೇಶ ಹೊರಡಿಸುವ ಮುನ್ನ ಮುಖ್ಯ ಕಾರ್ಯದರ್ಶಿಗಳ ಮೂಲಕ (ಮುಖ್ಯಮಂತ್ರಿಗೆ ತಿಳಿಸಿ) ಲೆಫ್ಟಿನೆಂಟ್ ಗವರ್ನರ್‌ಗೆ ಸಲ್ಲಿಸಬೇಕು ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಹೊರಡಿಸಿದ ಅಧಿಸೂಚನೆ ತಿಳಿಸಿದೆ.

 ಅಖಿಲ ಭಾರತೀಯ ಸೇವೆಯ ಅಧಿಕಾರಿಗಳಿಗೆ ಸಂಬಂಧಿಸದ, ಹೊಸ ತೆರಿಗೆ ವಿಧಿಸುವ ಪ್ರಸ್ತಾವನೆ, ಭೂಕಂದಾಯ, ಸರಕಾರಿ ಆಸ್ತಿಯ ಮಾರಾಟ ಅಥವಾ ಲೀಸ್ ಒಪ್ಪಂದ, ಇಲಾಖೆ ಅಥವಾ ಅಧಿಕಾರಿಗಳ ಮರು ಸಂಯೋಜನೆ, ಮಸೂದೆ ರೂಪಿಸುವುದು ಮುಂತಾದ ಕೆಲಸಗಳನ್ನು ಮುಖ್ಯಮಂತ್ರಿ ನೇತೃತ್ವದ ಸಚಿವರ ಸಮಿತಿ ನಿರ್ಧರಿಸುತ್ತದೆ. ಒಂದು ವೇಳೆ ಲೆಫ್ಟಿನೆಂಟ್ ಗವರ್ನರ್ ಮತ್ತು ಸಚಿವರ ಮಧ್ಯೆ ಭಿನ್ನಾಭಿಪ್ರಾಯ ಮೂಡಿ, ಆರು ತಿಂಗಳ ಬಳಿಕವೂ ಒಮ್ಮತಾಭಿಪ್ರಾಯ ಮೂಡದಿದ್ದರೆ ಆಗ ಲೆಫ್ಟಿನೆಂಟ್ ಗವರ್ನರ್(ಎಲ್‌ಜಿ) ಅವರ ನಿರ್ಧಾರವನ್ನು ಸಚಿವ ಸಮಿತಿ ಒಪ್ಪಬೇಕು. ಕೇಂದ್ರಾಡಳಿತ ಪ್ರದೇಶದ ಸರಕಾರ ಮತ್ತು ಕೇಂದ್ರ ಸರಕಾರ, ರಾಜ್ಯ ಸರಕಾರಗಳ ಮಧ್ಯೆ ವಿವಾದಕ್ಕೆ ಕಾರಣವಾಗಬಲ್ಲ ಯಾವುದೇ ವಿಷಯವನ್ನು ಸಂಬಂಧಿತ ಇಲಾಖೆಯ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿಯ ಮೂಲಕ ಎಲ್‌ಜಿ ಮತ್ತು ಮುಖ್ಯಮಂತ್ರಿಯ ಗಮನಕ್ಕೆ ತರಬೇಕು.

 ಕೇಂದ್ರಾಡಳಿತ ಪ್ರದೇಶದಲ್ಲಿ ಶಾಲಾ ಶಿಕ್ಷಣ, ಕೃಷಿ, ಉನ್ನತ ಶಿಕ್ಷಣ, ತೋಟಗಾರಿಕೆ, ಚುನಾವಣೆ, ಸಾಮಾನ್ಯ ಆಡಳಿತ, ಗೃಹ, ಗಣಿಗಾರಿಕೆ, ಇಂಧನ, ಲೋಕೋಪಯೋಗಿ ಇಲಾಖೆ, ಬುಡಕಟ್ಟು ವ್ಯವಹಾರ, ಸಾರಿಗೆ ಸೇರಿದಂತೆ 39 ಇಲಾಖೆಗಳಿರುತ್ತವೆ. ಪ್ರಧಾನಿ ಹಾಗೂ ಇತರ ಕೇಂದ್ರ ಸಚಿವರ ಸಹಿತ ಕೇಂದ್ರ ಸರಕಾರದಿಂದ ಬರುವ ಎಲ್ಲಾ ಮಾಹಿತಿಗಳನ್ನು(ದೈನಂದಿನ ವಿಷಯ ಮತ್ತು ಪ್ರಾಮುಖ್ಯವಿಲ್ಲದ ವಿಷಯ ಹೊರತುಪಡಿಸಿ) ತಕ್ಷಣ ಮುಖ್ಯ ಕಾರ್ಯದರ್ಶಿ, ಆಯಾ ಖಾತೆಯ ಸಚಿವ, ಮುಖ್ಯಮಂತ್ರಿ ಮತ್ತು ಎಲ್‌ಜಿ ಗಮನಕ್ಕೆ ತರಬೇಕು ಎಂದು ನಿಯಮಾವಳಿಯಲ್ಲಿ ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X