Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಸಂಕಷ್ಟದ ನಡುವೆ ದಸರಾ ಆಚರಣೆ ಬೇಡ:...

ಕೊರೋನ ಸಂಕಷ್ಟದ ನಡುವೆ ದಸರಾ ಆಚರಣೆ ಬೇಡ: ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ

ವಾರ್ತಾಭಾರತಿವಾರ್ತಾಭಾರತಿ28 Aug 2020 11:30 PM IST
share
ಕೊರೋನ ಸಂಕಷ್ಟದ ನಡುವೆ ದಸರಾ ಆಚರಣೆ ಬೇಡ: ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ

ಮೈಸೂರು,ಆ.28: ಕೊರೋನ ವೈರಸ್ ಮತ್ತು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಈ ಬಾರಿ ದಸರಾ ಆಚರಣೆ ಬೇಡ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೋನ ವೈರಸ್‍ನಿಂದ ಇಡೀ ದೇಶವೆ ತತ್ತರಿಸಿ ಹೋಗಿದೆ. ಜೊತೆಗೆ ನೆರೆಯಿಂದಲೂ ರಾಜ್ಯದ ಜನ ಸಂಕಷ್ಟ ಎದುರಿಸುತಿದ್ದಾರೆ. ಇಂತಹ ಸಂದರ್ಭದಲ್ಲಿ ದಸರಾ ಅಚರಣೆ ಬೇಡ, ಈ ಭಾಗದ ಜನರು ರೂಢಿಗತವಾಗಿ ಅಥವಾ ಸಾಂಪ್ರದಾಯಿಕವಾಗಿ ದಸರಾ ಹಬ್ಬವನ್ನು ಸ್ವತಃ ತಮ್ಮ ಮನೆಗಳಲ್ಲಿ ಆಚರಿಸಿಕೊಳ್ಳುತ್ತಾರೆ. ಆದರೆ, ಸರ್ಕಾರ ದಸರಾವನ್ನು ಆಚರಿಸುವುದು ಈ ವರ್ಷ ನಿಲ್ಲಿಸಬೇಕು ಎಂದು ಹೇಳಿದರು.

ರಾಜ್ಯ ಮತ್ತು ದೇಶ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತಿದ್ದು, ಸರ್ಕಾರ ನಡೆಸಲು ಸಾಲ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳುತ್ತಿದ್ದಾರೆ. ಹಾಗಿದ್ದ ಮೇಲೆ ದಸರಾ ಆಚರಣೆಗೂ ಸಾಲ ಮಾಡುತ್ತಾರೆ. ಹಾಗಾಗಿ ಈ ಬಾರಿ ದಸರಾ ಅಚರಣೆ ಬೇಡ, ದಸರಾಗೆ ಖರ್ಚು ಮಾಡುವ ದುಡ್ಡನ್ನು ನೆರೆ ಸಂಕಷ್ಟ ಎದುರಿಸಿ ಮನೆ ಮಠ ಕಳೆದುಕೊಂಡವರಿಗೆ ನೀಡಲಿ ಎಂದು ಒತ್ತಾಯಿಸಿದರು.

ಮೈಸೂರು ಜಿಲ್ಲೆಯ ಎಚ್.ಡಿ,ಕೋಟೆ, ಸರಗೂರು ಮತ್ತು ಇತರೆ ತಾಲ್ಲೂಕುಗಳಲ್ಲಿ ಈ ಮುಂಗಾರಿನಲ್ಲಿ ಬೆಳೆಯಲಾಗಿದ್ದ ಹತ್ತಿ ಫಸಲು ಇದೂವರೆಗೂ ಕಾಯಿ ಕಟ್ಟಿಲ್ಲ. ಇದರಿಂದ ರೈತರಿಗೆ ಕೋಟ್ಯಂತರ ರೂಪಾಯಿಗಳು ನಷ್ಟವಾಗುವ ಆತಂಕ ಉಂಟಾಗಿದೆ. ಹಲವಾರು ಕಂಪನಿಗಳು ಬೀಜಗಳನ್ನು ವಿತರಿಸಿದ್ದು, ಇದೂವರೆಗೆ ಹತ್ತಿ ಫಸಲು ಕಟಾವಿಗೆ ಪ್ರಾರಂಭವಾಗಬೇಕಿತ್ತು. ಆದರೆ ಗಿಡಗಳಲ್ಲಿ ಕಾಯಿ ಕಟ್ಟದೆ ಬರಿ ಸೊಪ್ಪು ಮಾತ್ರ ಇದೆ. ಈ ರೀತಿ ಲಕ್ಷಾಂತರ ಎಕರೆಯಲ್ಲಿ ಬೆಳೆಯಲಾಗಿರುವ ಹತ್ತಿ ಫಸಲು ನಷ್ಟವಾಗುವ ಎಲ್ಲ ಲಕ್ಷಣಗಳು ಇದ್ದು ಸರ್ಕಾರ ಕೂಡಲೇ ಈ ಬಗ್ಗೆ ಸಮೀಕ್ಷೆ ನಡೆಸಬೇಕು. ಸಂಬಂಧಪಟ್ಟ ಬೀಜದ ಕಂಪೆನಿಗಳ ಮೇಲೆ ಕ್ರಮ ಕೈಗೊಳ್ಳಬೇಕು ರೈತರಿಗೆ ನಷ್ಟವನ್ನು ವೈಜ್ಞಾನಿಕ ಮಾನದಂಡದಲ್ಲಿ ತುಂಬಿಸಿಕೊಡಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ತಮಿಳುನಾಡು ರೈತ ಸಂಘದ ಅಧ್ಯಕ್ಷ ವಕೀಲ ಸಿ.ಗುರುಸ್ವಾಮಿ,  ರೈತ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶೆಟ್ಟಹಳ್ಳಿ ಚಂದ್ರೇಗೌಡ, ತಾ. ಸಂಘಟನಾ ಕಾರ್ಯದರ್ಶಿ ಮಂಡಕಳ್ಳಿ ಮಹೇಶ್, ತಾಲ್ಲೂ ಅಧ್ಯಕ್ಷ ಪಿ.ಮರಂಕಯ್ಯ ಸೇರಿದಂತೆ ಹಲವರು ಉಪಸ್ಥಿರಿದ್ದರು.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬರೆದಿರುವ ಪತ್ರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಕಾರಾತ್ಮಕವಾಗಿ ಸ್ಪಂಧಿಸುತ್ತಾರೆ ಎಂಬ ನಂಬಿಕೆ ಇಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೇ ಸರ್ಕಾರಿ ಸೌಮ್ಯದ ಎಲ್ಲಾ ಇಲಾಖೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತಿದ್ದಾರೆ. ಇಂತಹ ಸಂದರ್ಭದಲ್ಲಿ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯುತ್ತಾರೆ ಎಂಬ ನಂಬಿಕೆ ಇಲ್ಲ. ಹಾಗಾಗಿ  ಪ್ರತಿಭಟನೆಯ ಮೂಲಕ ಪ್ರಧಾನ ಮಂತ್ರಿಗಳ ಗಮನ ಸೆಳೆಯುವ ಹೋರಾಟವನ್ನು ರೈತ ಸಂಘ ಇತರೆ ಸಂಘಟನೆಗಳೊಡಗೂಡಿ ಹಮ್ಮಿಕೊಳ್ಳಲಿದೆ

-ಬಡಗಲಪುರ ನಾಗೇಂದ್ರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X