Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಡಾಖ್: ಪ್ಯಾಂಗೋಂಗ್ ಸಮೀಪ ಭಾರತ-ಚೀನಾ...

ಲಡಾಖ್: ಪ್ಯಾಂಗೋಂಗ್ ಸಮೀಪ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ; ವರದಿ

ವಾರ್ತಾಭಾರತಿವಾರ್ತಾಭಾರತಿ31 Aug 2020 12:01 PM IST
share
ಲಡಾಖ್: ಪ್ಯಾಂಗೋಂಗ್ ಸಮೀಪ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ;  ವರದಿ

ಹೊಸದಿಲ್ಲಿ, ಆ.31: ಪೂರ್ವ ಲಡಾಖ್‌ನ ಪ್ಯಾಂಗೋಂಗ್ ತ್ಸೊ ಪ್ರದೇಶದಲ್ಲಿ ಮತ್ತೆ ಭಾರತ-ಚೀನಾ ಸೈನಿಕರ ಮಧ್ಯೆ ಘರ್ಷಣೆ ನಡೆದಿದೆ. ಭಾರೀ ಸಂಖ್ಯೆಯಲ್ಲಿ ಜಮಾವಣೆಗೊಂಡ ಚೀನೀ ಸೈನಿಕರು ಭಾರತೀಯ ಸೈನಿಕರೊಂದಿಗೆ ಜಟಾಪಟಿ ನಡೆಸಿದ್ದಾರೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಪ್ಯಾಂಗೋಂಗ್ ಸಮೀಪ ಚೀನಾದ ಸೈನಿಕರು ಅತಿಕ್ರಮಣಕ್ಕೆ ನಡೆಸಿದ ಪ್ರಯತ್ನವನ್ನು ಭಾರತೀಯ ಸೈನಿಕರು ವಿಫಲಗೊಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಆದರೆ ಉಭಯ ಸೇನೆಗಳ ಮಧ್ಯೆ ದೈಹಿಕ ಘರ್ಷಣೆ ನಡೆದಿಲ್ಲ ಎಂದು ಸೇನೆಯ ವಕ್ತಾರರು ಹೇಳಿದ್ದಾರೆ.

ಆಗಸ್ಟ್ 29 - 30ರ ಮಧ್ಯರಾತ್ರಿ ಪೂರ್ವ ಲಡಾಖ್‌ನ ಪ್ಯಾಂಗೋಂಗ್ ತ್ಸೊ ಸರೋವರದ ದಕ್ಷಿಣ ತೀರದಲ್ಲಿ ಏಕಪಕ್ಷೀಯವಾಗಿ ವಾಸ್ತವಿಕ ಸ್ಥಿತಿಯನ್ನು ಬದಲಿಸಲು ಚೀನಾದ ಪಡೆ ನಡೆಸಿದ ಪ್ರಚೋದನಕಾರಿ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಭಾರತೀಯ ಸೇನೆ ಸೋಮವಾರ ಹೇಳಿದೆ. ಪೂರ್ವ ಲಡಾಖ್‌ನಲ್ಲಿ ಭಾರತ-ಚೀನಾ ಪಡೆಗಳ ನಡುವೆ ಉಂಟಾಗಿರುವ ಬಿಕ್ಕಟ್ಟನ್ನು ಬಗೆಹರಿಸಲು ಉಭಯ ದೇಶಗಳ ಮಧ್ಯೆ ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ನಡೆದಿದ್ದ ಸಭೆಯಲ್ಲಿ ಮೂಡಿದ್ದ ಒಮ್ಮತಾಭಿಪ್ರಾಯವನ್ನು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್‌ಎ) ಉಲ್ಲಂಘಿಸಿದೆ ಎಂದು ಭಾರತದ ಸೇನಾಪಡೆ ವಕ್ತಾರ ಕ ಅಮನ್ ಆನಂದ್ ಹೇಳಿದ್ದಾರೆ.

ಮಾತುಕತೆ ಮೂಲಕ ಶಾಂತಿ, ನೆಮ್ಮದಿ ಉಳಿಸಿಕೊಂಡು ಬರಲು ಭಾರತದ ಸೇನೆ ಬದ್ಧವಾಗಿದೆ. ಇದೇ ವೇಳೆ, ತನ್ನ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲೂ ಬದ್ಧವಾಗಿದೆ. ಈಗ ಉದ್ಭವಿಸಿರುವ ಬಿಕ್ಕಟ್ಟನ್ನು ನಿವಾರಿಸಲು ಉಭಯ ಸೇನೆಗಳ ಬ್ರಿಗೇಡ್ ಕಮಾಂಡರ್ ಮಟ್ಟದ ಧ್ವಜ ಸಭೆ ಚುಷೂಲ್ ವಲಯದಲ್ಲಿ ನಡೆದಿದೆ ಎಂದವರು ಹೇಳಿದ್ದಾರೆ. ಚೀನಾದ ಸೈನಿಕರು ಭಾರೀ ಸಂಖ್ಯೆಯಲ್ಲಿ ಬಂದಿದ್ದರು. ಭಾರತದ ಸೇನೆಯೂ ಸಿದ್ಧವಾಗಿತ್ತು. ರಸ್ತೆಯಿಲ್ಲದ ಕಾರಣ ಪ್ಯಾಂಗೋಂಗ್ ಸರೋವರದ ತೀರದುದ್ದಕ್ಕೂ ಅವರು ಪಶ್ಚಿಮದತ್ತ ನಡೆದುಕೊಂಡು ಬಂದರು. ಈ ಪ್ರದೇಶವನ್ನು ಏಕಪಕ್ಷೀಯವಾಗಿ ಆಕ್ರಮಿಸಿಕೊಳ್ಳುವುದು ಅವರ ಉದ್ದೇಶವಾಗಿತ್ತು. ಆದರೆ ಚೀನಾದ ನಡೆಯ ಬಗ್ಗೆ ಅರಿವಿದ್ದ ಭಾರತೀಯ ಸೇನೆ ಚೀನಾ ಸೇನೆಯ ಅತಿಕ್ರಮಣವನ್ನು ತಡೆಯಲು ಅಲ್ಲಿ ಸನ್ನದ್ಧ ಸ್ಥಿತಿಯಲ್ಲಿತ್ತು. ಯಾವುದೇ ದೈಹಿಕ ಘರ್ಷಣೆ ನಡೆದಿಲ್ಲ ಮತ್ತು ಈಗ ಅಲ್ಲಿ ಮುಖಾಮುಖಿ ಪರಿಸ್ಥಿತಿಯಿಲ್ಲ ಎಂದು ಭಾರತೀಯ ಸೇನೆಯ ಮೂಲಗಳು ಹೇಳಿವೆ.

ಈ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಚೀನೀಯರಿಂದ ಅತಿಕ್ರಮಣ ಪ್ರಯತ್ನ ನಡೆದಿದೆ. ಭಾರತ ಭಾರೀ ಸಂಖ್ಯೆಯಲ್ಲಿ ಯೋಧರನ್ನು ಈ ಪ್ರದೇಶದಲ್ಲೇ ಉಳಿಸಿಕೊಂಡಿದೆ. ಚೀನಾದ ಕೆಲ ಸೈನಿಕರೂ ಇದೇ ಪ್ರದೇಶದಲ್ಲಿ ಉಳಿದಿದ್ದಾರೆ ಎಂದು ಮೂಲಗಳು ಹೇಳಿವೆ. ಜೂನ್ 15ರಂದು ಗಾಲ್ವನ್ ಕಣಿವೆಯಲ್ಲಿ ನಡೆದಿದ್ದ ಘರ್ಷಣೆಯ ಬಳಿಕ ಎರಡು ದೇಶಗಳ ಸೇನೆಗಳ ಮಧ್ಯೆ ನಡೆದ ಪ್ರಥಮ ಪ್ರಮುಖ ಘಟನೆ ಇದಾಗಿದೆ. ಗಾಲ್ವನ್ ಕಣಿವೆ ಘರ್ಷಣೆಯ ಹಿನ್ನೆಲೆಯಲ್ಲಿ ಭಾರತ-ಚೀನಾಗಳ ಮಧ್ಯೆ ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಹಲವು ಸುತ್ತಿನ ಮಾತುಕತೆ ನಡೆದಿತ್ತು. ಗಲ್ವಾನ್ ಕಣಿವೆ ಹಾಗೂ ಇತರ ಘರ್ಷಣೆ ಸ್ಥಳಗಳಿಂದ ಸೇನೆ ಹಿಂದಕ್ಕೆ ಕರೆಸಿಕೊಳ್ಳಲು ಚೀನಾ ಸಮ್ಮತಿಸಿದ್ದರೂ, ಪಾಂಗ್ಯೋಂಗ್ ತ್ಸೊ, ದೇಪ್ಸಂಗ್ ಸಹಿತ ಕೆಲವು ಪ್ರದೇಶಗಳಿಂದ ಹಿಂದಕ್ಕೆ ಸರಿಯಲು ನಿರಾಕರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X