ಮಾದಕ ದ್ರವ್ಯ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಕೋಟ
ಉಡುಪಿ, ಆ. 31: ಮಾದಕ ದ್ರವ್ಯ ಸೇವೆ, ಮಾರಾಟ ವಿಚಾರದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ನಿರ್ಧಾರ ಗಳನ್ನು ತೆಗೆದುಕೊಂಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಡಳಿತಗಳಿಗೂ ಈ ಬಗ್ಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ರಾಜ್ಯ ಬಂದರು ಮತ್ತು ಮೀನುಗಾರಿಕಾ ಸಚಿವರೂ ಆಗಿರುವ ಕೋಟ ತಿಳಿಸಿದರು.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯದಲ್ಲಿ ಎಂತಹ ಕಠಿಣ ಪರಿಸ್ಥಿತಿ ಎದುರಾದರೂ ಚಿಂತೆ ಇಲ್ಲ, ಮಾದಕ ದ್ರವ್ಯದ ಜಾಲವನ್ನು ಮಟ್ಟ ಹಾಕುತ್ತೇವೆ. ಇಲ್ಲಿ ಆ ವುಡ್, ಈ ವುಡ್ ಎಂಬ ಪ್ರಶ್ನೆಯೇ ಬರುವುದಿಲ್ಲ. ಗೃಹ ಸಚಿವರ ಕಠಿಣ ನಿರ್ಧಾರವನ್ನು ಇಡೀ ಮಂತ್ರಿಮಂಡಲ ಬೆಂಬಲಿಸುತ್ತದೆ. ರಾಜ್ಯ ಸರಕಾರ ಈ ಬಗ್ಗೆ ನಿರ್ಧಾರ ತೆಗೆದುಕೊಂಡಿದೆ ಎಂದರು.ಡ್ರಗ್ಸ್ ವಿಚಾರದಲ್ಲಿ ವ್ಯಕ್ತಿಗಳು ಗೌಣ, ವಿಚಾರವಷ್ಟೇ ಮುಖ್ಯ. ಇಲ್ಲಿ ಸಣ್ಣವರು, ದೊಡ್ಡವರು ಎಂಬ ಪ್ರಶ್ನೆಯೇ ಬರುವುದಿಲ್ಲ. ನಮ್ಮ ಸರಕಾರ ವಿಷಯಗಳ ಮೇಲೆ ಹೋಗುತ್ತದೆ, ವ್ಯಕ್ತಿಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
Next Story