Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶ್ರೀಕೃಷ್ಣ ಮಠದಿಂದ ಒಂದು ಕೋಟಿ ರೂ....

ಶ್ರೀಕೃಷ್ಣ ಮಠದಿಂದ ಒಂದು ಕೋಟಿ ರೂ. ಬ್ಯಾಂಕ್ ಸಾಲ: ಪರ್ಯಾಯ ಅದಮಾರು ಶ್ರೀ

ವಾರ್ತಾಭಾರತಿವಾರ್ತಾಭಾರತಿ31 Aug 2020 8:00 PM IST
share

ಉಡುಪಿ, ಆ.31: ಆರ್ಥಿಕ ಸಂಕಷ್ಟದಿಂದ ಶ್ರೀಕೃಷ್ಣ ಮಠದ ಆಡಳಿತ ನಿರ್ವ ಹಣೆಗಾಗಿ ಬ್ಯಾಂಕಿನಿಂದ ಒಂದು ಕೋಟಿ ರೂ. ಸಾಲ ಪಡೆಯಲಾಗಿದೆ ಎಂದು ಪರ್ಯಾಯ ಅದಮಾರು ಮಠಾಧೀಶ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಮಠದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 15ಲಕ್ಷ ರೂ. ಈಗಾಗಲೇ ಪಡೆದು ಕೊಂಡಿದ್ದೇವೆ. ಮುಂದೆ ಅಗತ್ಯಕ್ಕೆ ತಕ್ಕಂತೆ ತೆಗೆದುಕೊಳ್ಳಲಾಗುವುದು. ಸಾಲವನ್ನು ಆಸ್ತಿ ಅಡವಿಟ್ಟೇ ಪಡೆದುಕೊಂಡಿದ್ದೇವೆ. ಮಠದ ನಿರ್ವಹಣೆ, ಎಣ್ಣೆ, ತುಪ್ಪ ಸೇರಿದಂತೆ ಪ್ರತಿದಿನ ಸುಮಾರು 1.25ಲಕ್ಷ ರೂ. ಖುರ್ಚು ಇರುತ್ತದೆ ಎಂದರು.

ಅದಮಾರು ಮಠದ ಅಧೀನದಲ್ಲಿರುವ ವಿದ್ಯಾಸಂಸ್ಥೆಗಳಿಂದ ಹಣವನ್ನು ಪಡೆಯಬಹುದಲ್ಲವೇ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಆದರೆ ನಾವು ಈವರೆಗೆ ಮಠದಿಂದ ನಮ್ಮ ಶಿಕ್ಷಣ ಸಂಸ್ಥೆಗಳಿಗೆ ಹಣ ನೀಡಿದ್ದೇವೆ ಹೊರತು ಶಿಕ್ಷಣ ಸಂಸ್ಥೆಯ ಹಣವನ್ನು ಮಠಕ್ಕೆ ಬಳಕೆ ಮಾಡಿಲ್ಲ. ಶಿಕ್ಷಣ ಸಂಸ್ಥೆಗಳಿಗೆ ಆಯಾ ಟ್ರಸ್ಟ್, ಮಂಡಳಿಗಳಿರುವುದರಿಂದ ಅಲ್ಲಿಂದ ಮಠಕ್ಕೆ ಹಣ ಪಡೆಯಲು ಆಗಲ್ಲ ಎಂದು ಅವರು ಹೇಳಿದರು.

ಮಠದಲ್ಲಿ ಸಂಪತ್ತು ಇದ್ದರೂ ಸಾಲ ಮಾಡುವುದರಿಂದ ಮಠದ ಸಿಬ್ಬಂದಿ ಗಳಿಗೆ ಕೆಲವೊಂದು ಜವಾಬ್ದಾರಿ ಹಾಗೂ ಎಚ್ಚರಿಕೆ ಬರುತ್ತದೆ. ಮಠದಲ್ಲಿರುವ ಮೂಲ ನಿಧಿಯನ್ನು ಕೂಡ ನಾವು ತೆಗೆಯುವುದಿಲ್ಲ. ಸಾಲದ ವಿಚಾರ ತಿಳಿದು 10-15 ಮಂದಿ ನೆರವು ನೀಡಲು ಮುಂದೆ ಬಂದಿ ದ್ದಾರೆ. 1988-90ರಲ್ಲಿ ಶ್ರೀವಿಭುದೇಶ ತೀರ್ಥರು ಕೂಡ 60ಲಕ್ಷ ರೂ. ಸಾಲ ಮಾಡಿದ್ದರು. ಅದರಲ್ಲಿ 25ಲಕ್ಷ ರೂ.ವನ್ನು ಅವರು ತಮ್ಮ ಪರ್ಯಾಯ ಅವಧಿ ಮುಗಿದ ನಂತರ ತೀರಿಸಿದ್ದರು ಎಂದು ಅವರು ತಿಳಿಸಿದರು.

‘ಸರಕಾರವನ್ನು ಕೇಳುವುದು ಸರಿಯಲ್ಲ’

ಈ ಹಿಂದೆ ಸರಕಾರದಿಂದ ಸಾಕಷ್ಟು ಕೇಳಿದ್ದೇವೆ. ಆದರೆ ಈಗ ನಾವು ಸರಕಾರ ವನ್ನು ಕೇಳುವುದು ಸರಿಯಲ್ಲ. ದೇಶ ತುಂಬಾ ವಿಶಾಲವಾಗಿದೆ. ಸ್ವಾವಲಂಬಿ ಭಾರತೀಯರಾಗಿ ಕಡುಬಡವರಾದರೂ ಸರಕಾರವನ್ನು ಕೇಳಬಾರದು ಎಂದು ಪರ್ಯಾಯ ಅದಮಾರು ಶ್ರೀ ಹೇಳಿದರು.

ಜನರು ಅಕ್ಕಿ ಕೊಡುವುದು ಸರಕಾರದ ಜವಾಬ್ದಾರಿ ಎಂದು ತಿಳಿದುಕೊಳ್ಳ ಬಾರದು. ನಮಗೆ ನಮ್ಮದೇ ಆದ ಕರ್ತವ್ಯಗಳಿರುತ್ತದೆ. ಸರಕಾರ ಎಷ್ಟು ಜನರಿಗೆ ಎಷ್ಟು ದಿನ ಅಂತ ಕೊಡಬಹುದು. ಹಾಗೆ ಕೊಟ್ಟರೆ ಮುಂದೆ ಅದು ಸಾಲದ ರೂಪದಲ್ಲಿ ನಮ್ಮ ತಲೆಯ ಮೇಲೆಯೇ ಇರುತ್ತದೆ. ಆದುದರಿಂದ ಜನರು ಸರಕಾರ ಸಹಾಯ ಮಾಡಬೇಕೆಂದು ಬಯಸಬಾರದು ಎಂದು ಅವರು ಅಭಿಪ್ರಾಯ ಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X