ಮಾಜಿ ರಾಷ್ಟ್ರಪತಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಶ್ರದ್ದಾಂಜಲಿ
‘ಭಾರತದ ಆರ್ಥಿಕತೆಯ ಸುಧಾರಕ ಪ್ರಣವ್ ಮುಖರ್ಜಿ’
ಉಡುಪಿ, ಸೆ.1: ಕಾಂಗ್ರೆಸ್ನ ಹಿರಿಯ ನಾಯಕರಾಗಿದ್ದ ಪ್ರಣಬ್ ಮುಖರ್ಜಿ ದೇಶದ ಜನಮಾನಸದಲ್ಲಿ ವಿಶಿಷ್ಠ ಸ್ಥಾನ ಪಡೆದವರು. ಉತ್ತಮ ವಾಗ್ಮಿಯಾಗಿ, ಸಂಸದೀಯ ಪಟುವಾಗಿ ರಾಷ್ಟ್ರಪತಿ ಸ್ಥಾನಕ್ಕೇರುವ ಮುನ್ನ ಕಾಂಗ್ರೆಸ್ ಸರಕಾರಗಳಲ್ಲಿ ರಕ್ಷಣೆ, ವಿದೇಶಾಂಗ, ವಾಣಿಜ್ಯ, ಹಣಕಾಸು, ಕೈಗಾರಿಕಾ ಇಲಾಖೆಗಳನ್ನು ಸಮರ್ಥವಾಗಿ ಮುನ್ನೆಡೆಸಿ ಇಲಾಖೆಗಳಲ್ಲಿ ಹೊಸತನ, ಆಡಳಿತ ಸುಧಾರಣೆಗಳನ್ನು ಜಾರಿಗೆ ತಂದವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.
ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡ ಮಾಜಿ ರಾಷ್ಟ್ರಪತಿ ಭಾರತ ರತ್ನ ಪ್ರಣವ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ ಸಭೆಯಲ್ಲಿ ನುಡಿ ನಮನ ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ,ಪ್ರಣವ್ ಮುಖರ್ಜಿ ದೇಶದ ಹಣಕಾಸು ಸಚಿವರಾಗಿ ಸುಧಾರಣೆಗಳ ಮೂಲಕ ಭಾರತದ ಆರ್ಥಿಕತೆ ದಿಕ್ಕನ್ನು ಬದಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಜಿಎಸ್ಟಿ ಪರಿಕಲ್ಪನೆಯನ್ನು ಮೊದಲಿಗೆ ಜಾರಿಗೆ ತಂದ ಹೆಗ್ಗಳಿಕೆ ಅವರದಾಗಿತ್ತು ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್ ಸಹ ನುಡಿನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ದಿನೇಶ್ ಪುತ್ರನ್, ಬಿ.ನರಸಿಂಹ ಮೂರ್ತಿ, ವೆರೋನಿಕಾ ಕರ್ನೇಲಿಯೋ, ಹರೀಶ್ ಕಿಣಿ, ಮುರಳಿ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಕುಶಲ್ ಶೆಟ್ಟಿ, ಅಣ್ಣಯ್ಯ ಶೇರಿಗಾರ್, ಕೀರ್ತಿ ಶೆಟ್ಟಿ, ಕೇಶವ್ ಕೋಟ್ಯಾನ್, ಬಾಲಕೃಷ್ಣ ಪೂಜಾರಿ, ವಿಶ್ವಾಸ್ ಅಮೀನ್, ಇಸ್ಮಾಯಿಲ್ ಆತ್ರಾಡಿ, ಶಶಿಧರ ಶೆಟ್ಟಿ ಎಲ್ಲೂರು, ಉದ್ಯಾವರ ನಾಗೇಶ್ಕುಮಾರ್, ಯತೀಶ್ ಕರ್ಕೇರಾ, ಕೃಷ್ಣಮೂರ್ತಿ ಆಚಾರ್ಯ, ಮೀನಾಕ್ಷಿ ಮಾಧವ ಬನ್ನಂಜೆ, ಚಂದ್ರಿಕಾ ಶೆಟ್ಟಿ, ಲೂವಿಸ್ ಲೋಬೋ, ಕಿಶೋರ್ ಎರ್ಮಾಳ್, ಉಪೇಂದ್ರ ಮೆಂಡನ್, ಅಮೃತಾ ಕೃಷ್ಣಮೂರ್ತಿ, ಜಯ ಪೂಜಾರಿ, ರಮೇಶ್ ಕಾಂಚನ್, ಆರ್.ಕೆ. ರಮೇಶ್ ಪೂಜಾರಿ, ನಾರಾಯಣ ಕುಂದರ್, ಪ್ರಶಾಂತ್ ಪೂಜಾರಿ, ಹಮದ್ ಮೊದಲಾದವರು ಉಪಸ್ಥಿತರಿದ್ದರು.
ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಸ್ವಾಗತಿಸಿ, ಉಡುಪಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ವಂದಿಸಿದರು.