Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಾರತ-ಅಮೆರಿಕ ಸಂಬಂಧ ಗಟ್ಟಿಗೊಳಿಸುವಲ್ಲಿ...

ಭಾರತ-ಅಮೆರಿಕ ಸಂಬಂಧ ಗಟ್ಟಿಗೊಳಿಸುವಲ್ಲಿ ಕರ್ನಾಟಕದ ಪಾತ್ರ ಪ್ರಮುಖ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಹೂಡಿಕೆ ಮಾಡಿಲು ಅಮೆರಿಕ ಕಂಪೆನಿಗಳಿಗೆ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ1 Sept 2020 9:51 PM IST
share
ಭಾರತ-ಅಮೆರಿಕ ಸಂಬಂಧ ಗಟ್ಟಿಗೊಳಿಸುವಲ್ಲಿ ಕರ್ನಾಟಕದ ಪಾತ್ರ ಪ್ರಮುಖ: ಸಿಎಂ ಯಡಿಯೂರಪ್ಪ

ಬೆಂಗಳೂರು, ಸೆ. 1: ಜಾಗತಿಕ ಮಟ್ಟದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವಾಣಿಜ್ಯ ಸಂಬಂಧವನ್ನು ಗಟ್ಟಿಗೊಳಿಸುವಲ್ಲಿ ಕರ್ನಾಟಕ ಪ್ರಮುಖ ಪಾತ್ರ ವಹಿಸಲಿದ್ದು, ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆದ್ಯತೆ ನೀಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಮೆರಿಕದ ಕಂಪೆನಿಗಳಿಗೆ ಇಂದಿಲ್ಲಿ ಮನವಿ ಮಾಡಿದ್ದಾರೆ.

ಮಂಗಳವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಯುಎಸ್-ಇಂಡಿಯಾ ಬಿಸಿನೆಸ್ ಕೌನ್ಸಿಲ್ ಆಯೋಜಿಸಿದ್ದ ವರ್ಚ್ಯುಯಲ್ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಮೆರಿಕ ಕಂಪೆನಿಗಳಿಂದ ನೇರ ಹೂಡಿಕೆಗೆ ಎಲ್ಲ ರೀತಿಯ ಸಹಕಾರ ಒದಗಿಸುವುದು, ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ ಹೇಗೆ ಮತ್ತು ಅದಕ್ಕಾಗಿ ಸರಕಾರ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಅಮೆರಿಕದ ಉದ್ದಿಮೆದಾರರಿಗೆ ಮನವರಿಕೆ ಮಾಡಿಕೊಟ್ಟರು.

ಕೊರೋನ ಆಘಾತದ ಜತೆಗೆ, ಅಮೆರಿಕ ಮತ್ತು ಚೀನಾ ನಡುವಿನ ಆರ್ಥಿಕ ಸಂಬಂಧದ ಮೇಲೆ ಕರಿ ನೆರಳು ಆವರಿಸಿರುವ ಈ ಸಂದರ್ಭದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವಾಣಿಜ್ಯ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಅವಕಾಶ ಹೆಚ್ಚಿದೆ. ಈ ಕಾರಣದಿಂದಾಗಿ ಅಮೆರಿಕದ ಕಂಪೆನಿಗಳಿಗೆ ಭಾರತ ನೆಚ್ಚಿನ ತಾಣವಾಗಲಿದೆ. ಅದರಲ್ಲೂ ಕೈಗಾರಿಕಾ ಸ್ನೇಹಿ ವಾತಾವರಣ ಇರುವ ಕರ್ನಾಟಕದ ಬಗ್ಗೆ ಹೆಚ್ಚಿನ ವಿಶ್ವಾಸವಿದೆ. ಲಾಕ್‍ಡೌನ್ ನಂತರ ಆರ್ಥಿಕ ಪುನಶ್ಚೇತನಕ್ಕೆ ರಾಜ್ಯ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ವಾಣಿಜ್ಯ ಚಟುವಟಿಕೆಗಳಿಗೆ ಪೂರಕ ವಾತಾರವಾರಣ ಕಲ್ಪಿಸಲಾಗಿದೆ ಎಂದು ಸಿಎಂ ವಿವರಿಸಿದರು.

ರಕ್ಷಣೆ ಮತ್ತು ವ್ಯೂಹಾತ್ಮಕ ವಿಷಯಗಳ ಒಪ್ಪಂದಗಳು ಮಾತ್ರವಲ್ಲದೇ ಭಾರತ ಮತ್ತು ಅಮೆರಿಕದ ಜನರ ನಡುವಿನ ಸಂಬಂಧವೂ ಪ್ರಬಲವಾಗಿದೆ. ಎರಡು ದಶಕಗಳಲ್ಲಿ ಉಭಯ ರಾಷ್ಟ್ರಗಳ ನಡುವಿನ ವಹಿವಾಟು ಗಣನೀಯ ಮಟ್ಟದಲ್ಲಿ ಏರಿಕೆ ಕಂಡಿದ್ದು, 2000 ಇಸವಿಯಲ್ಲಿ 19 ಶತಕೋಟಿ ಡಾಲರ್ ನಷ್ಟಿದ್ದ ವಹಿವಾಟು ಪ್ರಮಾಣ 2020ರ ವೇಳೆಗೆ 149 ಶತಕೋಟಿ ಡಾಲರ್ ಗೆ ತಲುಪಿದೆ. ಉದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ವಲಯಗಳಲ್ಲಿ ಪ್ರಬಲ ಸಾಮರ್ಥ್ಯ ಹೊಂದಿರುವ ರಾಜ್ಯ, ಜೈವಿಕ ತಂತ್ರಜ್ಞಾನ, ಆರೋಗ್ಯ ರಕ್ಷಣೆ, ಸೆಮಿಕಂಡಕ್ಟರ್, ಕೃಷಿ, ವಾಹನ ಮುಂತಾದ ನಾನಾ ಕ್ಷೇತ್ರಗಳನ್ನು ಉತ್ತೇಜಿಸಲು 'ಉದ್ಯಮ ನಿರ್ದಿಷ್ಟ ನೀತಿ' ಜಾರಿ ತರುವ ಮೂಲಕ ಉದ್ಯಮ ಸ್ನೇಹಿ ಆಡಳಿತ ವ್ಯವಸ್ಥೆ ರೂಪಿಸಿದೆ ಎಂದರು.

ಅಮೆರಿಕದ ಬಂಡವಾಳ, ಆವಿಷ್ಕಾರ ಮತ್ತು ನವೀನ ತಂತ್ರಜ್ಞಾನದ ಜತೆಗೆ ನಮ್ಮ ನುರಿತ ಮಾನವ ಸಂಪನ್ಮೂಲ ಹಾಗೂ ನಮಲ್ಲಿ ಲಭ್ಯವಿರುವ ಹೂಡಿಕೆ ಅವಕಾಶಗಳ ಸಂಯೋಜನೆಯಿಂದ ಕರ್ನಾಟಕ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸಬಹುದು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಆರ್ಥಿಕ ಮತ್ತು ಕೈಗಾರಿಕಾ ಅಭಿವೃದ್ಧಿ ನಮ್ಮ ಸರಕಾರದ ಆದ್ಯತೆ. ಅಮೆರಿಕ ಮತ್ತು ಭಾರತ ಪರಸ್ಪರ ಕೈ ಜೋಡಿಸುವ ಮೂಲಕ ಉತ್ತಮ ಸಹಭಾಗಿತ್ವ ಸಾಧಿಸಬಹುದು ಎಂದು ಯಡಿಯೂರಪ್ಪ ಭರವಸೆ ನೀಡಿದರು.

ಐಟಿ, ಐಟಿಇಎಸ್ ಸೇವೆಗಳು, ಮೆಷಿನ್ ಟೂಲಿಂಗ್, ಉತ್ಪಾದನೆ, ಏರೋಸ್ಪೇಸ್, ಜೈವಿಕ ತಂತ್ರಜ್ಞಾನ ಹಾಗೂ ಇಂಜಿನಿಯರಿಂಗ್ ವಿನ್ಯಾಸ ಸೇರಿದಂತೆ ಕರ್ನಾಟಕದಲ್ಲಿ ಹೂಡಿಕೆಗೆ ಅವಕಾಶ ಇರುವ ಉದ್ಯಮಗಳ ಬಗ್ಗೆ ವಿವರಿಸಿದ ಯಡಿಯೂರಪ್ಪ, ಫಾರ್ಚೂನ್ 500 ಕಂಪೆನಿಗಳ ಪೈಕಿ 400 ಕಂಪೆನಿಗಳು ಜತೆಗೆ ಸುಮಾರು 400 ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರಗಳಿಗೆ ರಾಜ್ಯ ನೆಲೆಯಾಗಿದೆ. 2020 ಮಾರ್ಚ್ ನಲ್ಲಿ ಕೊನೆಗೊಂಡ ಅವಧಿಯಲ್ಲಿ ರಾಜ್ಯ ವಿದೇಶಿ ನೇರ ಹೂಡಿಕೆಯಲ್ಲಿ 2ನೆ ಸ್ಥಾನದಲ್ಲಿದ್ದು, ಉದ್ದಿಮೆದಾರರ ನೆಚ್ಚಿನ ತಾಣ ಎನಿಸಿಕೊಂಡಿದೆ ಎಂದು ನುಡಿದರು.

ನೀತಿ ಆಯೋಗ ಬಿಡುಗಡೆ ಮಾಡುವ ಹೊಸ ಆವಿಷ್ಕಾರಗಳ ಸೂಚಿ 2019ರ ಪಟ್ಟಿಯಲ್ಲಿ ನಮ್ಮ ರಾಜ್ಯ ಅಗ್ರ ಸ್ಥಾನ ಪಡೆದಿದೆ. ನುರಿತ ಮಾನವ ಸಂಪನ್ಮೂಲ ಲಭ್ಯತೆ, ಉನ್ನತ ಶಿಕ್ಷಣ ಸಂಸ್ಥೆಗಳು, ಪ್ರಮುಖ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳು, ಉತ್ತಮ ಆಡಳಿತ ಹಾಗೂ ಹೂಡಿಕೆಗೆ ಪೂರಕ ವಾತಾವರಣದಿಂದಾಗಿ ರಾಜ್ಯ ಅಗ್ರಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದು ಅವರು ವಿವರಿಸಿದರು.

ಹೂಡಿಕೆದಾರರನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರ, ಹೊಸ ಕೈಗಾರಿಕಾ ನೀತಿ 2020-2025 ಪರಿಚಯಿಸಿದ್ದು, ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಗೆ ಹೊಸ ನೀತಿ ನೆರವಾಗಲಿದೆ. ಆರ್ಥಿಕತೆ ಮತ್ತು ಕೈಗಾರಿಕಾ ಅಭಿವೃದ್ಧಿಯನ್ನು ಉತ್ತೇಜಿಸುವುದು ಸರಕಾರದ ಆದ್ಯತೆ. ಹೂಡಿಕೆ ಸ್ನೇಹಿ ನೀತಿ ಹಾಗೂ ಪೂರಕ ಸೌಲಭ್ಯ, ಭತ್ಯೆ ಒದಗಿಸುವ ಹೂಡಿಕೆ ಮಾಡುವಂತೆ ಅಮೆರಿಕದ ಕಂಪೆನಿಗಳನ್ನು ಆಹ್ವಾನಿಸುತ್ತೇವೆ ಎಂದು ಅವರು ಹೇಳಿದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಆಯುಕ್ತೆ ಗುಂಜನ್ ಕೃಷ್ಣ, ಅಮೆರಿಕದಲ್ಲಿನ ಭಾರತದ ರಾಯಭಾರಿ ತರಣ್‍ಜೀತ್ ಸಿಂಗ್ ಸಂಧು, ಆಪ್ಕೋ ಕಾರ್ಯಕಾರಿ ನಿರ್ದೇಶಕ ಟಿಮ್ ರೊಮರ್, ಲಾಕ್‍ಹೀಡ್ ಮಾರ್ಟಿನ್ ಸಿಇಓ ವಿಲಿಯಮ್ ಬ್ಲೇರ್, ಕಾರ್ಗಿಲ್ ಅಧ್ಯಕ್ಷ ಸಿಮನ್ ಜಾರ್ಜ್, 3ಎಂನ ವ್ಯವಸ್ಥಾಪಕ ನಿರ್ದೇಶಕ ರಮೇಶ್ ರಾಮದೊರೈ, ಎಸ್‍ಆರ್‍ಇಐ ಅಧ್ಯಕ್ಷ ಹೇಮಂತ್ ಕನೊರಿಯಾ, ಎಕ್ವಿಫ್ಯಾಕ್ಸ್ ನ ವ್ಯವಸ್ಥಾಪಕ ನಿರ್ದೇಶಕ ಕೆ. ನಾಣಯ್ಯ, ಟ್ರೂ ನಾರ್ತ್ ಪಾರ್ಟನರ್ಸ್ ನ ವಾಸುದೇವ್ ಎಸ್. ಗವಾಸ್ಕರ್, ಕ್ಸೈಲೆಮ್ ಎಜಿಎಂ ನಿತಿನ್ ಭಾಟೆ, ವಿಎಂವೇರ್ ನ ವ್ಯವಸ್ಥಾಪಕ ನಿರ್ದೇಶಕ ರಾಮ್‍ಕುಮಾರ್ ನಾರಾಯಣ್, ಕ್ಯಾಟಲಿಸ್ಟ್ ಸಿಇಓ ರಾಹುಲ್ ಶಾ, ಐಬಿಎಂನ ವಿವೇಕ್ ವಸಿಷ್ಠ, ಮೈಕ್ರೋಸಾಫ್ಟ್ ನ ನೀಲಿಮಾ ದ್ವಿವೇದಿ ಸಭೆಯಲ್ಲಿ ಭಾಗವಹಿಸಿದ್ದರು.

ದೇಶದ ಅತ್ಯಂತ ಪ್ರಗತಿಪರ ಮತ್ತು ಉದ್ಯಮಶೀಲ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕ ಹೂಡಿಕೆ, ವ್ಯಾಪಾರ, ವಾಣಿಜ್ಯ ಮತ್ತು ಕೈಗಾರಿಕೆಗಳಿಗೆ ಅಗತ್ಯವಾದ ಆರ್ಥಿಕ ಮತ್ತು ಸಾಮಾಜಿಕ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿದೆ. ಕರ್ನಾಟಕ ಮತ್ತು ಅಮೆರಿಕ ಪರಸ್ಪರ ಲಾಭದಾಯಕ ಆರ್ಥಿಕ ಸಹಭಾಗಿತ್ವವನ್ನು ರೂಪಿಸುವ ವಿಶ್ವಾಸವಿದೆ
-ಗೌರವ್ ಗುಪ್ತ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ

ದೇಶದ ಜ್ಞಾನ ಕೇಂದ್ರವಾಗಿರುವ ರಾಜ್ಯ, ಆವಿಷ್ಕಾರದಲ್ಲಿ ಮುಂಚೂಣಿ ಸಾಧಿಸಿದೆ. ಅಮೆರಿಕ ಮತ್ತು ಕರ್ನಾಟಕದ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸಿ, ಅದನ್ನು ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವಕ್ಕೆ ಪರಿವರ್ತಿಸಲು ಈಗ ಸುವರ್ಣಾವಕಾಶ ಒದಗಿದೆ
-ಗುಂಜನ್ ಕೃಷ್ಣ, ಕೈಗಾರಿಕಾಭಿವೃದ್ದಿ ಆಯುಕ್ತೆ

ಹೊಸ ಮಾರುಕಟ್ಟೆ ವಿಸ್ತರಣೆಗೆ ಅವಕಾಶ ಇರುವ ಕರ್ನಾಟಕ, ಜಾಗತಿಕ ವ್ಯಾಪಾರ ಕೇಂದ್ರವಾಗಿ ಮಾರ್ಪಟ್ಟಿದೆ. ಮುಖ್ಯಮಂತ್ರಿ ಯಡಿಯುರಪ್ಪ, ಅಮೆರಿಕದಲ್ಲಿನ ಭಾರತದ ರಾಯಭಾರಿ ತರಣ್‍ಜೀತ್ ಸಿಂಗ್ ಸಂಧು, ಯುಎಸ್‍ಬಿಸಿ ಮಂಡಳಿ ಸದಸ್ಯೆ ಕಿರಣ್ ಮಜುಂದಾರ್ ಶಾ ಮತ್ತು ಉದ್ಯಮದ ಇತರ ಮುಖಂಡರು ಹೂಡಿಕೆಗೆ ಕರ್ನಾಟಕದಲ್ಲಿರುವ ಅವಕಾಶಗಳ ಬಗ್ಗೆ ಗಮನ ಸೆಳೆದಿದ್ದಾರೆ
-ನಿಶಾ ಬಿಸ್ವಾಲ್, ಯುಎಸ್‍ಐಬಿಸಿ ಅಧ್ಯಕ್ಷೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X