Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಫೀಲ್ ಖಾನ್ ಭಾಷಣದಲ್ಲಿ ದ್ವೇಷ ಹರಡಿಲ್ಲ,...

ಕಫೀಲ್ ಖಾನ್ ಭಾಷಣದಲ್ಲಿ ದ್ವೇಷ ಹರಡಿಲ್ಲ, ರಾಷ್ಟ್ರೀಯ ಏಕತೆಗೆ ಕರೆ ನೀಡಿದ್ದಾರೆ: ಅಲಹಾಬಾದ್ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ1 Sept 2020 9:52 PM IST
share
ಕಫೀಲ್ ಖಾನ್ ಭಾಷಣದಲ್ಲಿ ದ್ವೇಷ ಹರಡಿಲ್ಲ, ರಾಷ್ಟ್ರೀಯ ಏಕತೆಗೆ ಕರೆ ನೀಡಿದ್ದಾರೆ: ಅಲಹಾಬಾದ್ ಹೈಕೋರ್ಟ್

ಲಕ್ನೊ, ಸೆ.1: ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಷಣ ಮಾಡಿದ್ದಕ್ಕಾಗಿ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ(ಎನ್‌ಎಸ್‌ಎ)ಅಡಿ ಉತ್ತರಪ್ರದೇಶದ ವೈದ್ಯ ಡಾ.ಕಫೀಲ್ ಖಾನ್‌ ರನ್ನು ಬಂಧಿಸಿರುವುದು 'ಕಾನೂನುಬಾಹಿರ' ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದ್ದು, ತಕ್ಷಣವೇ ಅವರನ್ನು ಬಿಡುಗಡೆಗೊಳಿಸಬೇಕು ಎಂದು ತೀರ್ಪಿತ್ತಿದೆ.

ಕಳೆದ ವರ್ಷಾಂತ್ಯದಲ್ಲಿ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಸಿಎಎ ವಿರುದ್ಧ ಭಾಷಣ ಮಾಡಿದ್ದ ಡಾ.ಖಾನ್ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು. ಜನವರಿ 29ರಂದು ಕಫೀಲ್ ಖಾನ್‌ ರನ್ನು ಬಂಧಿಸಲಾಗಿದ್ದು, ಅವರನ್ನು ಆಲಿಗಢದ ಜೈಲಿನಲ್ಲಿ ಇರಿಸಲಾಗಿದೆ.

ಡಾ.ಖಾನ್ ಅವರ ಭಾಷಣವು ಪ್ರಚೋದನಕಾರಿಯಾಗಿರಲಿಲ್ಲ ಮತ್ತು ಅವರ ಬಂಧನಕ್ಕೆ ಸಾಕಷ್ಟು ಕಾರಣಗಳಿರಲಿಲ್ಲ ಎಂದು ಮಂಗಳವಾರದ ವಿಚಾರಣೆ ಸಂದರ್ಭದಲ್ಲಿ ಅಲಹಾಬಾದ್ ಉಚ್ಚ ನ್ಯಾಯಾಲಯವು ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ನ್ಯಾಯಾಲಯ ಹೇಳಿದ್ದೇನು ?

ದ್ವೇಷ ಅಥವಾ ಅಶಾಂತಿಯನ್ನು ಉತ್ತೇಜಿಸುವ ಯಾವುದೇ ಅಂಶಗಳು ಡಾ.ಖಾನ್ ಭಾಷಣದಲ್ಲಿರಲಿಲ್ಲ ಎಂದು ಹೇಳಿದ ಮುಖ್ಯ ನ್ಯಾಯಾಧೀಶ ಗೋವಿಂದ ಮಾಥುರ್ ಮತ್ತು ಸೌಮಿತ್ರ ದಯಾಳ ಸಿಂಗ್ ಅವರ ಪೀಠವು, ಭಾಷಣವು ಅಲಿಗಢದ ಶಾಂತಿ ಮತ್ತು ನೆಮ್ಮದಿಯನ್ನು ಕೆಡಿಸಿರಲಿಲ್ಲ. ಅದು ರಾಷ್ಟ್ರೀಯ ಸಮಗ್ರತೆ ಮತ್ತು ಪ್ರಜೆಗಳ ನಡುವೆ ಏಕತೆಗೆ ಕರೆ ನೀಡಿತ್ತು ಎಂದು ಹೇಳಿದೆ.

“ದ್ವೇಷ ಮತ್ತು ಹಿಂಸೆಯನ್ನು ಪ್ರಚೋದಿಸುವ ಯಾವುದೇ ಅಂಶಗಳು ಭಾಷಣದಲ್ಲಿ ಕಂಡು ಬಂದಿಲ್ಲ. ಭಾಷಣವು ಆಲಿಗಢದ ಶಾಂತಿ ಮತ್ತು ನೆಮ್ಮದಿಯನ್ನು ಕೆಡಿಸುವಂತಿದೆ ಎನಿಸುತ್ತಿಲ್ಲ. ಭಾಷಣದಲ್ಲಿ ರಾಷ್ಟ್ರೀಯ ಸಮಗ್ರತೆ ಮತ್ತು ಪ್ರಜೆಗಳ ನಡುವೆ ಏಕತೆಗೆ ಕರೆ ನೀಡಲಾಗಿದೆ. ಯಾವುದೇ ರೀತಿಯ ಹಿಂಸೆಯನ್ನು ಕೂಡ ಭಾಷಣವು ವಿರೋಧಿಸುತ್ತದೆ. ಭಾಷಣದ ನೈಜ ಉದ್ದೇಶವನ್ನು ನಿರ್ಲಕ್ಷಿಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಭಾಷಣದ ಕೆಲವೊಂದು ವಾಕ್ಯಗಳನ್ನು ಮಾತ್ರ ನೋಡಿದ್ದಾರೆ ಎಂದೆನಿಸುತ್ತಿದೆ” ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.

ಸಿಎಎ ವಿರೋಧಿ ಪ್ರತಿಭಟನೆಗಳ ಸಂದರ್ಭ 2019, ಡಿ.10ರಂದು ಅಲಿಗಡ್ ಮುಸ್ಲಿಂ ವಿವಿಯಲ್ಲಿ ಭಾಷಣವನ್ನು ಮಾಡಿದ ಬಳಿಕ ಜನವರಿಯಿಂದಲೂ ಡಾ.ಖಾನ್ ಜೈಲಿನಲ್ಲಿದ್ದಾರೆ. ಫೆ.13ರಂದು ಉತ್ತರ ಪ್ರದೇಶ ಸರಕಾರವು ಅವರ ವಿರುದ್ಧ ಎನ್‌ಎಸ್‌ಎ ಹೇರಿತ್ತು. ಆ.16ರಂದು ಎನ್‌ಎಸ್‌ಎ ಅಡಿ ಬಂಧನದ ಅವಧಿಯನ್ನು ಎರಡನೇ ಬಾರಿಗೆ ಮೂರು ತಿಂಗಳು ವಿಸ್ತರಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X