Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಿಜೆ ಹಳ್ಳಿ ಗಲಭೆ ಪ್ರಕರಣ: ನ್ಯಾಯಾಂಗ...

ಡಿಜೆ ಹಳ್ಳಿ ಗಲಭೆ ಪ್ರಕರಣ: ನ್ಯಾಯಾಂಗ ತನಿಖೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Sept 2020 6:38 PM IST
share
ಡಿಜೆ ಹಳ್ಳಿ ಗಲಭೆ ಪ್ರಕರಣ: ನ್ಯಾಯಾಂಗ ತನಿಖೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಸೆ.2: ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಸತ್ಯಗಳು ಹೊರಗೆ ಬರಬೇಕಾದರೆ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ನ್ಯಾಯಾಂಗ ಆಯೋಗದ ಮೂಲಕ ತನಿಖೆ ನಡೆಸಲು ಸರಕಾರ ಮುಂದಾಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬುಧವಾರ ಕಾವಲ್ ಭೈರಸಂದ್ರದಲ್ಲಿ ದುಷ್ಕರ್ಮಿಗಳ ದಾಳಿಗೆ ಸುಟ್ಟು ಹೋಗಿರುವ ಶಾಸಕ ಆರ್.ಶ್ರೀನಿವಾಸಮೂರ್ತಿ ಮನೆ, ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಘಟನೆ ನಡೆದಾಗ ನಾನು ಕೋವಿಡ್ ಸೋಂಕು ತಗಲಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿದ್ದೆ. ಆನಂತರ ಕ್ವಾರಂಟೈನ್‍ಗೆ ಒಳಗಾಗಿದ್ದೆ. ಆದುದರಿಂದ, ಇಲ್ಲಿಗೆ ಇವತ್ತು ಬಂದಿದ್ದೇನೆ. ಈ ಘಟನೆ ನಡೆದು 20 ದಿನ ಆಗಿದೆ. ನಾಲ್ವರು ಸತ್ತಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿರುವುದರಿಂದ ಹೆಚ್ಚು ಮಾತನಾಡಲು ಹೋಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ನವೀನ್ ಎಂಬಾತ ಅಂದು ಸಂಜೆ 6.30ರ ಸುಮಾರಿಗೆ ಪ್ರವಾದಿ ಬಗ್ಗೆ ಅವಹೇಳನಕಾರಿ, ಅವಮಾನಕಾರಿಯಾದ ಪೋಸ್ಟ್ ಮಾಡಿದ್ದ. 7.45ಕ್ಕೆ ಕೆಲವರು ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದಾರೆ. ಎಫ್‍ಐಆರ್ ದಾಖಲು ಮಾಡಲಾಗಿತ್ತು. 8.30-8.45ರ ಸುಮಾರಿಗೆ ಡಿಸಿಪಿ ಪೊಲೀಸ್ ಠಾಣೆಗೆ ಬಂದಿದ್ದಾರೆ. ಶಾಸಕ ರಿಝ್ವಾನ್ ಅರ್ಶದ್‍ಗೆ ಅವರು ಕರೆ ಮಾಡಿ ರಾತ್ರಿ 10.30ಕ್ಕೆ ಕರೆಸಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.

ಈ ಘಟನೆಯಲ್ಲಿ ಶ್ರೀನಿವಾಸಮೂರ್ತಿ ಮನೆಗೆ, ವಾಹನಗಳಿಗೆಲ್ಲ ಬೆಂಕಿ ಹಚ್ಚಿದ್ದಾರೆ. ನವೀನ್‍ನನ್ನು ಕೂಡಲೆ ಬಂಧಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದರು. ಪೊಲೀಸರು ಹೇಳುವ ಪ್ರಕಾರ ಅಂದು ಆತನನ್ನು ಬಂಧಿಸಲಾಗಿತ್ತು. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಜನ ಗುಂಪು ಸೇರಿದ್ದರಿಂದ ಹೊರಗಡೆ ತರಲು ಸಾಧ್ಯವಾಗಲಿಲ್ಲ. ರಾತ್ರಿ 3 ಗಂಟೆಗೆ ಆತನನ್ನು ಕರೆ ತಂದೆವು ಎಂದು ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ದೂರು ಸ್ವೀಕಾರ ಹಾಗೂ ನವೀನ್ ಬಂಧನದ ನಡುವೆ 6 ಗಂಟೆಗಳ ಅಂತರ ಇತ್ತು. ಕೂಡಲೆ ಆತನನ್ನು ಬಂಧಿಸಿ, ಈ ವಿಚಾರವನ್ನು ಅಲ್ಲಿದ್ದವರ ಗಮನಕ್ಕೆ ತಂದಿದ್ದರೆ ಇಷ್ಟೊಂದು ಗಲಾಟೆ ನಡೆಯುತ್ತಿರಲಿಲ್ಲವೇನೋ ಅನ್ನಿಸುತ್ತದೆ. ತನಿಖೆ ನಡೆಯುತ್ತಿದೆ. ಯಾರೇ ತಪ್ಪು ಮಾಡಿರಲಿ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಯಾವ ಪಕ್ಷದವರೇ ಇರಲಿ, ಎಷ್ಟೇ ಶಕ್ತಿಗಳು ಇರಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಅವರು ಒತ್ತಾಯಿಸಿದರು.

ಬಂಧಿಸಲ್ಪಟ್ಟಿರುವ ಸುಮಾರು 380 ಜನರಲ್ಲಿ ಕೆಲವರು ಅಮಾಯಕರು ಇದ್ದಾರೆ ಎಂದು ಹೇಳಲಾಗುತ್ತಿದೆ. ತನಿಖೆ ಮಾಡುವಾಗ ಅಂತಹವರ ವಿರುದ್ಧ ಯಾವುದೆ ಸಾಕ್ಷ್ಯಾಧಾರಗಳು ಇಲ್ಲದಿದ್ದರೆ ಕೂಡಲೆ ಅಮಾಯಕರನ್ನು ಬಿಡುಗಡೆ ಮಾಡಬೇಕು. ತಪ್ಪಿತಸ್ಥರಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಶ್ರೀನಿವಾಸಮೂರ್ತಿಗೆ ಸರಕಾರ ಭದ್ರತೆ ನೀಡಬೇಕು. ಆದಷ್ಟು ಬೇಗ ನಿಷ್ಪಕ್ಷಪಾತವಾಗಿ ತನಿಖೆಯನ್ನು ಪೂರ್ಣಗೊಳಿಸಬೇಕು. ನಾಲ್ವರು ಸತ್ತಿರುವಂತಹ ಈ ಘಟನೆಯಲ್ಲಿ ಎಲ್ಲ ಸತ್ಯಗಳು ಹೊರಗೆ ಬರಬೇಕಾದರೆ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಬೇಕು ಎಂದು ಅವರು ಹೇಳಿದರು.

ಸದನದಲ್ಲಿಯೂ ಈ ವಿಷಯವನ್ನು ಪ್ರಸ್ತಾಪಿಸಲಾಗುವುದು. ಯಾವುದೆ ಪಕ್ಷದ ಬಗ್ಗೆ, ಯಾವ ಮುಖಂಡರ ಬಗ್ಗೆಯೂ ನಾನು ಈಗ ಮಾತನಾಡಲ್ಲ. ಪ್ರಾಥಮಿಕ ಹಂತದಲ್ಲೆ ಬಿಜೆಪಿಯವರ ರೀತಿ ಹೇಳಿಕೆಗಳನ್ನು ನೀಡಲು ಸಾಧ್ಯವಿಲ್ಲ. ಸಾಕ್ಷ್ಯಾಧಾರಗಳಿಲ್ಲದೆ ಯಾವುದೇ ಆರೋಪ ಮಾಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ನಸೀರ್ ಅಹ್ಮದ್, ವೆಂಕಟರಮಣಪ್ಪ, ಶಾಸಕ ರಿಝ್ವಾನ್ ಅರ್ಶದ್, ಡಿಸಿಪಿ ಶರಣಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X