Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿಗು ಜಿಲ್ಲೆಯಾದ್ಯಂತ ‘ಕೈಲ್ ಪೊಳ್ದ್’...

ಕೊಡಗಿಗು ಜಿಲ್ಲೆಯಾದ್ಯಂತ ‘ಕೈಲ್ ಪೊಳ್ದ್’ ಹಬ್ಬದ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ3 Sept 2020 5:46 PM IST
share
ಕೊಡಗಿಗು ಜಿಲ್ಲೆಯಾದ್ಯಂತ ‘ಕೈಲ್ ಪೊಳ್ದ್’ ಹಬ್ಬದ ಸಂಭ್ರಮ

ಮಡಿಕೇರಿ ಸೆ.3 : ಕೊಡಗಿನ ಕೃಷಿ ಸಂಸ್ಕೃತಿಯ ಭಾಗವಾದ ‘ಕೈಲ್ ಪೊಳ್ದ್’ ಹಬ್ಬವನ್ನು ಶ್ರದ್ಧಾಭಕ್ತಿಗಳಿಂದ ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಭತ್ತದ ನಾಟಿ ಕಾರ್ಯದ ಬಳಿಕ ಬರುವ ಈ  ಕೈಲ್ ಪೊಳ್ದ್ ಹಬ್ಬ ಎನ್ನುವುದು ಕೊಡಗಿನ ರೈತಾಪಿ ವರ್ಗದಿಂದ ಆಚರಿಸಲ್ಪಡುವ ಆಯುಧ ಪೂಜೆಯೇ ಆಗಿದೆ. ಈ ಹಬ್ಬದಂದು ಆಯುಧಗಳಾದ ಕೋವಿ, ಕತ್ತಿ, ಕೃಷಿಯುಪಕರಣಗಳಿಗೆ ಕುಟುಂಬಸ್ಥರೆಲ್ಲ ಒಗ್ಗೂಡಿ ಪೂಜೆ ಸಲ್ಲಿಸಿ, ಮಾಂಸಾಹಾರವನ್ನು ಸೇವಿಸಿ ಸಂಭ್ರಮಿಸುವುದು ಈ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ.

ಚೆಟ್ಟಳ್ಳಿಯ ಪುತ್ತರಿರ ಕುಟುಂಬದ ಐನ್‍ಮನೆಯಲ್ಲಿ ಗುರುವಾರ  ಕೈಲ್‍ಪೊಳ್ದ್ ಹಬ್ಬವನ್ನು ಸಂಪ್ರದಾಯ ಬದ್ಧವಾಗಿ ಆಚರಿಸಲಾಯಿತು. ಬೆಳಗ್ಗೆ  ಕುಟುಂಬದ ಹಿರಿಯರು, ಪುರುಷರು, ಮಹಿಳೆಯರು ಹಾಗು ಮಕ್ಕಳೆಲ್ಲ ಐನ್‍ಮನೆಯಲ್ಲಿ ಸೇರಿ ನೆಲ್ಲಕ್ಕಿ ನಡುಬಾಡೆಯಲ್ಲಿ ದೇವರ ದೀಪಕ್ಕೆ ನಮಸ್ಕರಿಸಿ ಹಿರಿಯರ ಆಶೀರ್ವಾದ ಪಡೆದರು.

ಮದ್ಯಾಹ್ನ ನೆಲ್ಲಕ್ಕಿ ನಡುಬಾಡೆಯಲ್ಲಿ ಕೊಡವರ ಸಾಂಪ್ರದಾಯಿಕ ಆಯುಧಗಳಾದ ಕೋವಿ, ಒಡಿಕತ್ತಿ ಹಾಗು ಹಲವು ಆಯುಧಗಳನ್ನಿರಿಸಿ ತೋಕ್‍ಪೂ(ಗೌರಿ ಹೂ)ಗಳಿಂದ ಅಲಂಕರಿಸಿ, ಹಬ್ಬದ ಅಂಗವಾಗಿ ತಯಾರಿಸಿದ ವಿಶೇಷ ಖಾದ್ಯವನ್ನು ಇರಿಸಲಾಯಿತು. ಬಳಿಕ ಕುಟುಂಬದ ಹಿರಿಯರಾದ ಪುತ್ತರಿರ ಗಣೇಶ್ ಭೀಮಯ್ಯನವರು ಆಯುಧಗಳಿಗೆ ಕುಟುಂಬಸ್ಥರ ಸಮ್ಮುಖದಲ್ಲಿ ಪೂಜೆ ಸಲ್ಲಿಸಿದರು.

ಹಬ್ಬದೂಟದ ಬಳಿಕ ಹಿರಿಯರು ತೆಂಗಿಕಾಯಿಗೆ ಗುಂಡು ಹೊಡೆದ ನಂತರ ಪುರುಷರು, ಮಹಿಳೆಯರು ಹಾಗು ಮಕ್ಕಳು ಐನ್‍ಮನೆಯ ಮುಂದಿನ ಹಟ್ಟಿಯಲ್ಲಿ ತೆಂಗಿನಕಾಯಿಗೆ ಗುಂಡುಹೊಡೆದು ಸಂಭ್ರಮಿಸಿದರು.

ಈ ಸಂದರ್ಭ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಪುತ್ತರಿರ ಭೂಮಿಕ ಅಚ್ಚಯ್ಯ ಹಾಗು ಪುತ್ತರಿರ ರಿಶಾಂಕ್‍ನಂಜಪ್ಪರಿಗೆ ಪುತ್ತರಿರ ಹರೀಶ್ ಅಯ್ಯಪ್ಪನವರು ನೀಡಿರುವ ಗೌರವ ಬಹುಮಾನವನ್ನು ಕುಟುಂಬದ ಹಿರಿಯರಾದ ಪುತ್ತರಿರಭೀಮಯ್ಯ ಹಾಗು ಪುತ್ತರಿರ ಟಿಟ್ಟುಕಾರ್ಯಪ್ಪನವರು ನೀಡಿ ಗೌರವಿಸಿದರು.

ಇದೇ ರೀತಿ ಜಿಲ್ಲೆಯ ಪ್ರತಿ ಗ್ರಾಮ ಗ್ರಾಮಗಳ ಮನೆ ಮನೆ ಗಳಲ್ಲಿ ಹಬ್ಬವನ್ನು ಆಚರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X