Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದ ಪಾಲಿನ ಜಿಎಸ್‍ಟಿ ಪಾಲು ನೀಡದೆ...

ರಾಜ್ಯದ ಪಾಲಿನ ಜಿಎಸ್‍ಟಿ ಪಾಲು ನೀಡದೆ ಕೇಂದ್ರ ಸರಕಾರದ ವಂಚನೆ: ಆಮ್ ಆದ್ಮಿ ಪಕ್ಷ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ3 Sept 2020 8:21 PM IST
share
ರಾಜ್ಯದ ಪಾಲಿನ ಜಿಎಸ್‍ಟಿ ಪಾಲು ನೀಡದೆ ಕೇಂದ್ರ ಸರಕಾರದ ವಂಚನೆ: ಆಮ್ ಆದ್ಮಿ ಪಕ್ಷ ಆಕ್ರೋಶ

ಬೆಂಗಳೂರು, ಸೆ.3: ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಯಿತು ಎಂದು ಬಿಜೆಪಿ ತೊರೆದು ಕೆಜೆಪಿ ಕಟ್ಟಿದ ನೀವು ಹೈಕಮಾಂಡ್ ಸಂಸ್ಕೃತಿಯ ವಿರುದ್ಧ ತೊಡೆ ತಟ್ಟಿದವರು. ಕುರ್ಚಿ ಉಳಿಸಿಕೊಳ್ಳಲು ಆಗ ರಾಜೀನಾಮೆ ಎಸೆದಿರಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ ಸ್ಮರಿಸಿದ್ದಾರೆ,

ಆದರೆ, ಇಂದು ಇಡೀ ರಾಜ್ಯ ಸಂಕಷ್ಟದಲ್ಲಿದೆ ಕೇಂದ್ರ ಸರಕಾರವು ರಾಜ್ಯದ ಪಾಲಿಗೆ ಬರಬೇಕಿರುವ ಜಿಎಸ್‍ಟಿ ಪಾಲನ್ನು ಕೊಡದೇ ಮೋಸ ಮಾಡಿದೆ. ಈ ಅನ್ಯಾಯವನ್ನು ಪ್ರತಿಭಟಿಸದೆ ಕೇಂದ್ರದ ತಾಳಕ್ಕೆ ಕುಣಿಯುತ್ತಿರುವ ನಿಮಗೆ ಕೊಂಚವೂ ಸ್ವಾಭಿಮಾನ ಇಲ್ಲವೇ. ಈಗ ಸ್ವಾಭಿಮಾನ ಎನ್ನುವುದು ಕಿಂಚಿತ್ತಾದರೂ ಇದ್ದರೆ ರಾಜೀನಾಮೆ ನೀಡಿ ಇಡೀ ದೇಶಕ್ಕೆ ಮಾದರಿ ಆಗಿ ಎಂದು ಅವರು ಸವಾಲು ಹಾಕಿದ್ದಾರೆ.

ದಕ್ಷಿಣದ ಇತರೆ ರಾಜ್ಯಗಳು ಕೇಂದ್ರ ಸರಕಾರವೆ ಆರ್‍ಬಿಐನಿಂದ ಸಾಲ ಪಡೆದು ರಾಜ್ಯಗಳಿಗೆ ಹಂಚಲಿ ಎಂದು ತಾಕೀತು ಮಾಡಿವೆ, ಆದರೆ ತಾವು ಮಾತ್ರ ಸಾಲ ಮಾಡಲು ಹೊರಟಿದ್ದೀರಿ. ಅನ್ಯಾಯವನ್ನು ಪ್ರತಿಭಟಿಸಲಾಗದ ಅಸಹಾಯಕ ಸ್ಥಿತಿಗೆ ತಲುಪಿರುವ ನಿಮ್ಮ ಬಗ್ಗೆ ಆಮ್ ಆದ್ಮಿ ಪಕ್ಷ ಕನಿಕರ ವ್ಯಕ್ತಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಯಡಿಯೂರಪ್ಪ, ಕರ್ನಾಟಕ ಇಷ್ಟೆಲ್ಲಾ ಸಂಕಷ್ಟದಲ್ಲಿ ಇದ್ದರೂ ಅನವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕಲಾಗದ ಸ್ಥಿತಿಗೆ ತಲುಪಿದ್ದಾರೆ. ಪ್ರಭಾವಿ ಸಚಿವರ ಹಿಡಿತಕ್ಕೆ ಸಿಲುಕಿರುವ ಅವರು ಪ್ರಭಾವಿಗಳ ಇಲಾಖೆಗಳಿಗೆ ಮಾಡಿರುವ ಹಣ ಮಂಜೂರಾತಿ ಸೇರಿದಂತೆ ಅನಗತ್ಯ ಕಾಮಗಾರಿಗಳನ್ನು ನಿಲ್ಲಿಸಿ ಅಗತ್ಯವಿರುವ ಕಡೆ ಮಾತ್ರ ಹಣಕಾಸನ್ನು ಬಳಸಬೇಕು ಎಂದು ಜಗದೀಶ್ ಒತ್ತಾಯಿಸಿದ್ದಾರೆ.

ಲಾಕ್‍ಡೌನ್ ಸಡಿಲ ಆದಾಗಿನಿಂದ ಬೆಂಗಳೂರು ನಗರ ಒಂದರಲ್ಲೇ ಉತ್ತಮವಾಗಿರುವ ಸುಮಾರು 20ಕ್ಕೂ ಹೆಚ್ಚು ಉದ್ಯಾನಗಳ ಅಭಿವೃದ್ಧಿ ಹೆಸರಿನಲ್ಲಿ ಹಣ ಖರ್ಚು ಮಾಡಲಾಗಿದೆ. ಹೊಸ ಉದ್ಯಾನಗಳು, ಜಿಗ್‍ಜಾಗ್ ರಸ್ತೆ, ರಾಜಕಾಲುವೆಗಳಿಗೆ ಕಾಂಕ್ರೀಟ್ ಹೀಗೆ ಅನವಶ್ಯಕ ಕಾಮಗಾರಿಗಳ ಪಟ್ಟಿಯೇ ಸಿಗುತ್ತದೆ. ವಾರಕ್ಕೊಮ್ಮೆ ಕಾಮಗಾರಿ ಪರಿಶೀಲನೆ ಎಂದು ನಗರ ಸುತ್ತಾಡುವ ಸಚಿವರು ಕಮಿಷನ್ ವಸೂಲಿಗೆ ಇಳಿದಿದ್ದಾರೆ. ಇಂತಹ ಅನವಶ್ಯಕ ಕಾಮಗಾರಿಗಳನ್ನು ನಿಲ್ಲಿಸಿ, ಅಗತ್ಯವಾದ ಕಡೆ ಬಳಸಿ ಎಂದು ಅವರು ಆಗ್ರಹಿಸಿದ್ದಾರೆ.

ಕಳೆದ ಮಾರ್ಚ್ ತಿಂಗಳಲ್ಲಿ ನೀರಾವರಿ ಇಲಾಖೆ ಒಂದಕ್ಕೆ ಸುಮಾರು 10 ಸಾವಿರ ಕೋಟಿ ರೂ.ಮಂಜೂರು ಮಾಡಿದ್ದೀರ, ಇದಲ್ಲದೇ ನಗರೋಥ್ಥಾನ, ನವ ನಗರ, ನೀರಿನ ಪೈಪ್ ಅಳವಡಿಕೆ, ವೈಟ್ ಟಾಪಿಂಗ್, ಬ್ಲಾಕ್ ಟಾಪಿಂಗ್ ಸೇರಿದಂತೆ ತೆರೆಮರೆಯಲ್ಲಿ ಕೋಟ್ಯಂತರ ರೂ.ಗಳನ್ನು ನೀರಿನಂತೆ ಖರ್ಚು ಮಾಡಿ, ಈಗ ಸಾಲ ಮಾಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿ. ಉರಿಯುವ ಮನೆಯಲ್ಲಿ ಗಳ ಇರಿಯುವ ಸಂಸ್ಕೃತಿ ಬಿಜೆಪಿಗೆ ಹೊಸದಲ್ಲ ಎಂದೇ ಹೇಳಬಹುದು ಎಂದು ಜಗದೀಶ್ ಟೀಕಿಸಿದ್ದಾರೆ.

ಕುಮಾರಸ್ವಾಮಿ ಜತೆ ಸೇರಿ 20-20 ಸರಕಾರ ರಚಿಸಿದಾಗ ಸುಮಾರು 3,545 ಕೋಟಿ, ಸ್ವಂತವಾಗಿ ಕುರ್ಚಿ ಹಿಡಿದಾಗ 25,653 ಕೋಟಿ, ಸದಾನಂದ ಗೌಡ 9,464 ಕೋಟಿ, ಜಗದೀಶ್ ಶೆಟ್ಟರ್ 13,464 ಕೋಟಿ ರೂ.ಸಾಲ ಮಾಡಿದ ಇತಿಹಾಸ ಇರುವ ನಿಮಗೆ ಸಾಲ ಮಾಡುವುದು ಹೊಸದೇನಲ್ಲ. ಡಬಲ್ ಎಂಜಿನ್ ಸರಕಾರ ಬಂದರೆ ‘ಸ್ವರ್ಗ’ ಮಾಡುವುದಾಗಿ ಹೇಳಿ ‘ಸಾಲ’ ಮಾಡುತ್ತಿರುವುದೇ ನಿಮ್ಮ ಸರಕಾರ ಇಷ್ಟು ವರ್ಷದಲ್ಲಿ ಮಾಡಿದ ಸಾಧನೆ ಎಂದು ಅವರು ಟೀಕಿಸಿದ್ದಾರೆ.

ಈಗಲಾದರೂ ಎಚ್ಚೆತ್ತುಕೊಂಡು ಸರಕಾರದ ಅನವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕಿ, ಸಾಲ ಮಾಡಬಾರದಾಗಿ ಆಮ್ ಆದ್ಮಿ ಪಕ್ಷ ಒತ್ತಾಯಿಸುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X