Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮ ಪಂಚಾಯತ್ ಚುನಾವಣೆ: ಕೋವಿಡ್-19...

ಗ್ರಾಮ ಪಂಚಾಯತ್ ಚುನಾವಣೆ: ಕೋವಿಡ್-19 ಮಾರ್ಗಸೂಚಿ ಪ್ರಕಟಿಸಿದ ಚು.ಆಯೋಗ

ವಾರ್ತಾಭಾರತಿವಾರ್ತಾಭಾರತಿ3 Sept 2020 8:34 PM IST
share
ಗ್ರಾಮ ಪಂಚಾಯತ್ ಚುನಾವಣೆ: ಕೋವಿಡ್-19 ಮಾರ್ಗಸೂಚಿ ಪ್ರಕಟಿಸಿದ ಚು.ಆಯೋಗ

ಬೆಂಗಳೂರು, ಸೆ.3: ಕೋವಿಡ್-19 ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್‍ಗಳ ಸಾರ್ವತ್ರಿಕ ಚುನಾವಣೆ ನಡೆಸುವ ವೇಳೆ ಅನುಸರಿಸಬೇಕಾದ ಮನ್ನೆಚ್ಚರಿಕಾ ಕ್ರಮಗಳನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.

ಚುನಾವಣಾ ಕಾರ್ಯದಲ್ಲಿ ನಿರತರಾಗಿರುವ ಪ್ರತಿಯೊಬ್ಬರು ಮಾಸ್ಕ್ ಧರಿಸಿರಬೇಕು. ಚುನಾವಣಾ ಕೊಠಡಿಗಳಿಗೆ ಪ್ರವೇಶಿಸುವ ಮುನ್ನ ಪ್ರತಿಯೊಬ್ಬರು ಸ್ಯಾನಿಟೈಸರ್ ಬಳಕೆ ಕಡ್ಡಾಯ. ಚುನಾವಣೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ಸೋಂಕು ನಿವಾರಕ ಕೊಠಡಿಯಲ್ಲಿಡಬೇಕು.

ಚುನಾವಣಾಧಿಕಾರಿಗಳು ಅಭ್ಯರ್ಥಿಗಳ ನಾಮಪತ್ರ ಸ್ವೀಕರಿಸುವಾಗ ತಮ್ಮ ಕೈಗಳನ್ನು ಸ್ಯಾನಿಟೈಸರ್ ನಿಂದ ಶುಚಿಗೊಳಿಸಬೇಕು ಹಾಗೂ ಮುಖಕ್ಕೆ ಮಾಸ್ಕ್ ಧರಿಸಿರಬೇಕು. ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಸುರಕ್ಷಿತ ಅಂತರ ಕಾಯ್ದುಕೊಂಡು ಒಬ್ಬೊಬ್ಬರಾಗಿ ನಾಮಪತ್ರ ಸಲ್ಲಿಸಬೇಕಾಗುತ್ತದೆ. ಹಾಗೂ ಕೋವಿಡ್ ಸೋಂಕಿತ ವ್ಯಕ್ತಿ ನಾಮಪತ್ರ ಸಲ್ಲಿಸಬೇಕಾದರೆ ಸೂಚಕರ ಮೂಲಕ ನಾಮಪತ್ರ ಸಲ್ಲಿಸಬೇಕು.

ಚುನಾವಣಾ ಪ್ರಚಾರ: ಚುನಾವಣಾ ಪ್ರಚಾರದ ವೇಳೆ ಅಭ್ಯರ್ಥಿಗಳು ಸುರಕ್ಷಿತ ಅಂತರವನ್ನು ಕಾಯ್ದುಕೊಂಡು ಮನೆ ಮನೆ ಭೇಟಿ ನೀಡಿ ಪ್ರಚಾರ ಮಾಡಬಹುದಾಗಿದೆ. ಪ್ರಚಾರದ ವೇಳೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ ಹಾಗೂ ಗುಂಪು ಗುಂಪಾಗಿ ತೆರಳಿ ಪ್ರಚಾರ ಮಾಡುವಂತಿಲ್ಲವೆಂದು ಚುನಾವಣಾ ಆಯೋಗ ಪ್ರಕಟನೆಯಲ್ಲಿ ತಿಳಿಸಿದೆ.

-ಕೋವಿಡ್ ಸೋಂಕಿತ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪ್ರಚಾರ ಮಾಡಬಹುದಾಗಿದೆ. ಖುದ್ದಾಗಿ ಸಾಮಾನ್ಯ ಜನರೊಂದಿಗೆ ಇಲ್ಲವೇ ಸಮುದಾಯದಲ್ಲಿ ಪ್ರಚಾರ ಮಾಡಲು ಅವಕಾಶವಿಲ್ಲ.

-ಕೋವಿಡ್-19 ಹಿನ್ನೆಲೆಯಲ್ಲಿ ಮತಗಟ್ಟೆಗೆ ಗರಿಷ್ಟ 1000 ಮತದಾರರು ಮಾತ್ರ ಇರುವಂತೆ ಮತಗಟ್ಟೆಗಳನ್ನು ಗುರುತಿಸುವುದು.

-ಮತದಾನಕ್ಕೆ ನಿಗದಿಪಡಿಸಿದ ಕೊಠಡಿಯನ್ನು ಹಾಗೂ ಅಕ್ಕಪಕ್ಕದ ಕೊಠಡಿಗಳನ್ನು ಶೇ.1ಸೋಡಿಯಂ ಹೈಪೋಕ್ಲೋರೈಡ್ ದ್ರಾವಣವನ್ನು ಸಿಂಪಡಿಸಿ ಸಿದ್ಧಗೊಳಿಸುವುದು.

-ಮಾಸ್ಟರಿಂಗ್ ದಿನ ಸಂಜೆ ಮತದಾನ ಸಿಬ್ಬಂದಿಗೆ ಉಳಿದುಕೊಳ್ಳಲು ಸ್ಯಾನಿಟೈಸ್ ಮಾಡಿದ ಪಕ್ಕದ ಕೊಠಡಿಗಳನ್ನು ನೀಡಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X