ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲ
ಮಂಗಳೂರು, ಸೆ. 3: ರಾಜ್ಯ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮದ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಆಂಗ್ಲೋ ಇಂಡಿಯನ್ ಹಾಗೂ ಪಾರ್ಸಿ ಜನಾಂಗದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು 2020-21ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ನಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ನಿಗಮದ ಅರಿವು ಸಾಲ ಯೋಜನೆಯಡಿ ಸಾಲ ಪಡೆಯಲು ಆನ್ಲೈನ್ kmdc.kar.nic.in/arivu2 ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನ. ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಪ್ರಿಂಟ್ಔಟನ್ನು ತೆಗೆದು ಕ್ಯೂಆರ್ ಕೋಡ್ ದಾಖಲಾತಿ ಗಳೊಂದಿಗೆ ನೇರವಾಗಿ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಅರ್ಜಿಯೊಂದಿಗೆ ಸಲ್ಲಿಸಬೆಕಾದ ದಾಖಲೆಗಳ ವಿವರ ಇಂತಿವೆ: ಆನ್ಲೈನ್ನಲ್ಲಿ ಸಲ್ಲಿಸಿದ ಅರ್ಜಿ ಕ್ಯೂಆರ್ ಕೋಡಿನೊಂದಿಗೆ ಪ್ರಸ್ತುತ ವರ್ಷದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ 6 ಲಕ್ಷ ರೂ. ಮಿತಿಯಲ್ಲಿರಬೇಕು, ಆಧಾರ್ ಕಾರ್ಡ್ ಮತ್ತು ರೇಶನ್ ಕಾರ್ಡ್ ಜೆರಾಕ್ಸ್ ಪ್ರತಿ, ಸಿಇಟಿ, ನೀಟ್ ಪರೀಕ್ಷೆ ಪ್ರವೇಶ ಪತ್ರ, ಎಸೆಸೆಲ್ಸಿ ಮತ್ತು ಪಿಯುಸಿ ಅಂಕಪಟ್ಟಿಯ ದೃಢೀಕೃತ ಪ್ರತಿ, 50 ರೂ.ಇ-ಸ್ಟ್ಯಾಂಪ್ನೊಂದಿಗೆ ಇಂಡಿಮ್ನಿಟಿ ಬಾಂಡ್, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ 2.
ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಮೌಲಾನಾ ಆಝಾದ್ ಭವನ, 2ನೆ ಮಹಡಿ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು, (ದೂ,.ಸಂ: 0824-2951644)ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.