Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಕೇತ್ ಗೋಖಲೆ, Thequint ಸೇರಿ ಹಲವರ...

ಸಾಕೇತ್ ಗೋಖಲೆ, Thequint ಸೇರಿ ಹಲವರ ವಿರುದ್ಧ ‘ದಿಲ್ಲಿ ರಯಟ್ಸ್’ ಲೇಖಕರಿಂದ ದೂರು

ವಾರ್ತಾಭಾರತಿವಾರ್ತಾಭಾರತಿ3 Sept 2020 9:57 PM IST
share
ಸಾಕೇತ್ ಗೋಖಲೆ, Thequint ಸೇರಿ ಹಲವರ ವಿರುದ್ಧ ‘ದಿಲ್ಲಿ ರಯಟ್ಸ್’ ಲೇಖಕರಿಂದ ದೂರು

 ಹೊಸದಿಲ್ಲಿ, ಸೆ. 3: ನಂಬಿಕೆ ದ್ರೋಹ, ವಂಚನೆ, ಕಿಡಿಗೇಡಿತನ ಹಾಗೂ ಆಸ್ತಿ ದುರಪಯೋಗ ಆರೋಪದಲ್ಲಿ ಹಲವು ವ್ಯಕ್ತಿಗಳು ಹಾಗೂ ಪ್ರಕಾಶನದ ವಿರುದ್ಧ ‘ದಿಲ್ಲಿ ರಯಟ್ಸ್ 2020: ದಿ ಅನ್‌ಟೋಲ್ಡ್ ಸ್ಟೋರಿ’ ಪುಸ್ತಕದ ಲೇಖಕರು ಗುರುವಾರ ಕ್ರಿಮಿನಲ್ ದೂರು ದಾಖಲಿಸಿದ್ದಾರೆ. ಪುಸ್ತಕ ಪ್ರಕಾಶನವನ್ನು ಹಿಂದೆಗೆದುಕೊಂಡ ಬ್ಲೂಮ್ಸ್‌ಬರಿ ಇಂಡಿಯಾ, ನ್ಯೂಸ್ ವೆಬ್‌ಸೈಟ್ಸ್‌ಗಳಾದ ‘Thequint’, ‘ನ್ಯೂಸ್‌ಲಾಂಡ್ರಿ’ ಹಾಗೂ ಶಿಕ್ಷಣ ತಜ್ಞೆ ನಂದಿನಿ ಸುಂದರ್, ಲೇಖಕ ಆಟಿಶ್ ತಸೀರ್, ಸಾಮಾಜಿಕ ಹೋರಾಟಗಾರ ಸಾಕೇತ್ ಗೋಖಲೆ, ಪತ್ರಕರ್ತ ಅರ್ಫಾ ಖಾನುಂ ಶೆರ್ವಾನಿ, ಲೇಖಕರಾದ ವಿಲಿಯಂ ಡಾಲ್ರಿಂಪ್ಲ್, ಮೀನಾ ಕಂದಸಾಮಿ ಹಾಗೂ ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಲೇಖಕರು ದಿಲ್ಲಿ ಪೊಲೀಸ್ ಆಯುಕ್ತ ಎಸ್.ಎನ್ ಶ್ರೀವಾತ್ಸವ ಹಾಗೂ ಸೈಬರ್ ಕ್ರೈಮ್ ಘಟಕದಲ್ಲಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಲೇಖಕಿ ಮೋನಿಕಾ ಅರೋರಾ, ಪ್ರಕಾಶನ ಸಂಸ್ಥೆ ಬ್ಲೂಮ್ಸ್‌ಬರಿ ಇಂಡಿಯಾ ತನ್ನ ಪುಸ್ತಕದ ಪಿಡಿಎಫ್ ಆವೃತ್ತಿಯನ್ನು ಸೋರಿಕೆ ಮಾಡಿದೆ. ಇದರಿಂದ ತನ್ನ ಪುಸ್ತಕದ ಭವಿಷ್ಯದ ಎಲ್ಲ ಮಾರಾಟಕ್ಕೆ ಅಡ್ಡಿ ಉಂಟಾಗುತ್ತದೆ ಎಂದು ಹೇಳಿದ್ದಾರೆ.

ನಂದಿನಿ ಸುಂದರ್, ‘the quint’ ಹಾಗೂ ‘ನ್ಯೂಸ್ ಲಾಂಡ್ರಿ’ ಕಾನೂನು ಬಾಹಿರವಾಗಿ ಪುಸ್ತಕವನ್ನು ಸ್ವೀಕರಿಸಿದ್ದಾರೆ ಹಾಗೂ ಕದ್ದ ಸೊತ್ತನ್ನು ಉಳಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಕ್ರಿಮಿನಲ್ ಬೆದರಿಕೆ, ಎರಡು ವರ್ಗಗಳ ನಡುವೆ ದ್ವೇಷ ಹಾಗೂ ಶತ್ರುತ್ವದ ಸೃಷ್ಟಿ, ಉತ್ತೇಜನಕಾರಿ ಹೇಳಿಕೆ ಹಾಗೂ ಪುಸ್ತಕ ಪ್ರಕಟನೆ ಹಿಂದೆಗೆಯುವಂತೆ ಪ್ರಕಾಶಕರಿಗೆ ಒತ್ತಡ ಹೇರಿರುವುದರಲ್ಲಿ ತಸೀರ್, ಗೋಖಲೆ, ಶೆರ್ವಾನಿ ಹಾಗೂ ಡಾಲ್ರಿಂಪ್ಲ್ ತೊಡಗಿಸಿಕೊಂಡಿದ್ದಾರೆ ಎಂದು ಅರೋರಾ ಆರೋಪಿಸಿದ್ದಾರೆ.

ಮೋನಿಕಾ ಅರೋರಾ, ಸೋನಾಲಿ ಚಿತಾಲ್ಕರ್ ಹಾಗೂ ಪ್ರೇರಣಾ ಮಲ್ಹೋತ್ರರ ‘ದಿಲ್ಲಿ ರಯಟ್ 2020: ದಿ ಅನ್‌ಟೋಲ್ಡ್ ಸ್ಟೋರಿ’ ಪುಸ್ತಕವನ್ನು ಬ್ಲೂಮ್‌ಬರಿ ಇಂಡಿಯಾ ಸೆಪ್ಟಂಬರ್‌ನಲ್ಲಿ ಬಿಡುಗಡೆಗೊಳಿಸಿತ್ತು. ಆದರೆ, ಈ ಪುಸ್ತಕದ ಬಿಡುಗಡೆ ಸಮಾರಂಭಕ್ಕೆ ಬಿಜೆಪಿಯ ನಾಯಕ ಕಪಿಲ್ ಮಿಶ್ರಾ ಅವರನ್ನು ಆಹ್ವಾನಿಸಿರುವುದರ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಬ್ಲೂಮ್‌ಬರಿ ಇಂಡಿಯಾದ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X