Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸವರ್ಣೀಯರಿಂದ ಹಕ್ಕಿಪಿಕ್ಕಿ ಜನಾಂಗದವರ...

ಸವರ್ಣೀಯರಿಂದ ಹಕ್ಕಿಪಿಕ್ಕಿ ಜನಾಂಗದವರ ಮೇಲೆ ಹಲ್ಲೆ: ಆರೋಪ

ಕೊಲೆ ಬೆದರಿಕೆ : ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ5 Sept 2020 8:48 PM IST
share
ಸವರ್ಣೀಯರಿಂದ ಹಕ್ಕಿಪಿಕ್ಕಿ ಜನಾಂಗದವರ ಮೇಲೆ ಹಲ್ಲೆ: ಆರೋಪ

ಬಾಗೇಪಲ್ಲಿ, ಸೆ.5: ತಾಲೂಕಿನ ಹೊರವಲಯದಲ್ಲಿ ವಾಸವಿದ್ದ ಹಕ್ಕಿಪಿಕ್ಕಿ ಜನಾಂಗದವರ ಜಾತಿ ನಿಂದನೆ ಮತ್ತು ಮಹಿಳೆಯರ ಮೇಲೆ ಪೊಲೀಸರ ಸಮ್ಮುಕದಲ್ಲೇ ಹಲ್ಲೆ ನಡೆಸಿದ್ದಾರೆ ಎನ್ನಲಾದ ಘಟನೆ ಇತ್ತೀಚೆಗೆ ನಡೆದಿದೆ.

ಪಟ್ಟಣದಿಂದ ಸುಮಾರು ಒಂದು ಕಿಮೀ ದೂರವಿರುವ ಗೂಳೂರು ರಸ್ತೆಯ ಪಾತಬಾಗೇಪಲ್ಲಿ ರಘುರಾಮರೆಡ್ಡಿ ಅವರ ಜಮೀನು ಪಕ್ಕದ ಸರ್ವೇ ನಂ.4ರ ಸರಕಾರಿ ಜಮೀನಿನಲ್ಲಿ ಹಕ್ಕಿಪಿಕ್ಕಿ ಜನಾಂಗಕ್ಕೆ ಸೇರಿದ ವಡಿಗಿರಿವಾರಪಲ್ಲಿ ಗ್ರಾಮದ ಅಂಜಿನಪ್ಪ ಎಂಬವರು ಐದು ವರ್ಷಗಳಿಂದ ತನ್ನ 4 ಹೆಂಡತಿಯರ ಜೊತೆ ವಾಸವಾಗಿದ್ದರು. ಸೆ.1ರಂದು ಬೆಳಗ್ಗೆ ಪಾತಬಾಗೇಪಲ್ಲಿ ಗ್ರಾಮದ ರಘುರಾಮರೆಡ್ಡಿ ಎಂಬವರು ಆಗಮಿಸಿ ‘ಇದು ನನ್ನ ಜಮೀನು, ಕೂಡಲೇ ನೀವು ಇಲ್ಲಿಂದ ಜಾಗ ಖಾಲಿ ಮಾಡಬೇಕು’ ಎಂದು ಮನೆಯಲ್ಲಿ ಇದ್ದ ಆಹಾರ ಸಾಮಾಗ್ರಿಗಳು ಮತ್ತು ವಸ್ತುಗಳನ್ನು ಹೊರಗೆ ಹಾಕಿದರು. ಅಂಜಿನಪ್ಪರ ಹೆಂಡತಿಯರಾದ ರತ್ನಮ್ಮ ಮತ್ತು ಲಕ್ಷ್ಮೀದೇವಮ್ಮ ಅವರನ್ನು ಎಳೆದಾಡಿ, ಕೀಳು ಜಾತಿಯವರು ಎಂದು ಜಾತಿ ನಿಂದನೆ ಮಾಡಿದ್ದಲ್ಲದೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಅಂಜಿನಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ಪೊಲೀಸರು ಆರೋಪಿಯ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು ಮಾಡಿದ್ದಾರೆ. ಒಂದೇ ಕುಟುಂಬದ 8 ಜನರು ಬೀದಿಪಾಲಾಗಿದ್ದಾರೆ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸರು ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಅಂಜಿನಪ್ಪ ಅವರು ದೂರು ನೀಡಿದ ಕೂಡಲೇ ರಘುರಾಮರೆಡ್ಡಿಯ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು ಮಾಡಲಾಗಿದೆ. ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ. ಕಾನೂನನ್ನು ಯಾರು ಗೌರವಿಸುತ್ತಾರೋ ಅವರಿಗೆ ನಾವು ನ್ಯಾಯ ದೊರಕಿಸಲು ಸಿದ್ಧರಿರುತ್ತೇವೆ.
ನಯಾಜ್ ಬೇಗ್, ಆರಕ್ಷಕ ವೃತ್ತ ನಿರೀಕ್ಷಕ

ಸೆ.1ರಂದು ನಾನು ಕೂಲಿ ಕೆಲಸಕ್ಕೆ ಹೊರಗೆ ಹೋಗಿದ್ದೆ. ಪ್ರಭಾವಿ ಮುಖಂಡ ರಘುರಾಮರೆಡ್ಡಿ ನಮ್ಮ ಮನೆಗೆ ನುಗ್ಗಿ, ನನ್ನ ಹೆಂಡತಿಯರನ್ನು ಹಿಗ್ಗಾ ಮುಗ್ಗಾ ಬೈದು, ಜಾತಿ ನಿಂದನೆ ಮಾಡಿದ್ದಾನೆ. ನಮ್ಮ ಮನೆಯನ್ನು ಧ್ವಂಸ ಮಾಡುವ ಮೂಲಕ ನಮ್ಮನ್ನು ಬೀದಿ ಪಾಲು ಮಾಡಿದ್ದಾನೆ. ರಕ್ಷಣೆ ಮಾಡಬೇಕಾದ ಪೊಲೀಸರ ಎದುರಿನಲ್ಲೇ ಈ ಘಟನೆ ನಡೆದಿದ್ದು, ಯಾರೊಬ್ಬರೂ ರಕ್ಷಣೆಗೆ ಮುಂದಾಗಿಲ್ಲ. ಅಲ್ಲದೆ, ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ. ನಮಗೆ ನ್ಯಾಯ ಸಿಗದಿದ್ದರೆ ನಾವು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೇವೆ ಎಂದು ದೂರುದಾರ ಅಂಜಿನಪ್ಪ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X