Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೆವ್ವಗಳು ಇಂದು ಭಾರತವನ್ನು ಆಳ್ವಿಕೆ...

ದೆವ್ವಗಳು ಇಂದು ಭಾರತವನ್ನು ಆಳ್ವಿಕೆ ಮಾಡುತ್ತಿವೆ: ದೇವನೂರ ಮಹಾದೇವ

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯ ಮಟ್ಟದ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ5 Sept 2020 9:21 PM IST
share
ದೆವ್ವಗಳು ಇಂದು ಭಾರತವನ್ನು ಆಳ್ವಿಕೆ ಮಾಡುತ್ತಿವೆ: ದೇವನೂರ ಮಹಾದೇವ

ಮೈಸೂರು, ಸೆ.5: ದೇವರು ಏನೋ ಗೊತ್ತಿಲ್ಲ. ಆದರೆ ದೆವ್ವ ಭೂತಗಳಂತೂ ಇಂದು ಭಾರತವನ್ನು ಆಳ್ವಿಕೆ ಮಾಡುತ್ತಿವೆ ಎಂದು ಖ್ಯಾತ ಸಾಹಿತಿ ದೇವನೂರ ಮಹಾದೇವ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿದ್ದಾರ್ಥನಗರದಲ್ಲಿರುವ ಕನಕ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯರೈತ ಸಂಘ ಹಾಗೂ ಹಸಿರು ಸೇನೆ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಹಾಗೂ ಸ್ವರಾಜ್ ಇಂಡಿಯಾ, ಜನಾಂದೋಲನ ಮಹಾಮೈತ್ರಿ, ಜನಚೇತನ ಟ್ರಸ್ಟ್ ವತಿಯಿಂದ ‘ಭೂ ಸುಧಾರಣಾ ಕಾಯ್ದೆ ತಿದ್ದುಪಡಿ: ಖಾಸಗೀಕರಣ ನೀತಿಗಳು ಪರಿಣಾಮ ಮತ್ತು ಸವಾಲುಗಳು’ ಕುರಿತ ರಾಜ್ಯಮಟ್ಟದ ವಿಚಾರಗೋಷ್ಠಿ ಮತ್ತು ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕೊರೋನ ಎಂಬ ದೇವರ ಆಟದಿಂದ ರಾಜ್ಯಗಳ ಬಾಬ್ತು ನೀಡಲು ಆಗುತ್ತಿಲ್ಲ’ ಎನ್ನುವ ಅರ್ಥ ಸಚಿವರನ್ನು ಭಾರತ ಪಡೆದಿದೆ. ಭಾರತದ ಒಕ್ಕೂಟ ವ್ಯವಸ್ಥೆಯ ಬುಡವನ್ನೇ ಕಡಿದು ಹಾಕಿ, ರಾಜ್ಯಗಳ ಸ್ಥಾನವನ್ನು ದೈನೇಸಿ ಸ್ಥಾನಕ್ಕೆ ತಳ್ಳುವ ಜಿಎಸ್‌ಟಿ ತಂದು ದೆವ್ವದ ಆಟ ಆಡಿದವರು ಯಾರು ಎಂದು ಪ್ರಶ್ನಿಸಿದರು.

ಜನರಿಗೆ ಕನಸು ಕಾಣಿಸಿ ನೋಟ್ ಬ್ಯಾನ್ ತಂದು ಭಾರತದ ಬದುಕನ್ನು ದುಃಸ್ವಪ್ನ ಮಾಡಿದ ಭೂತದ ಆಟ ಆಡಿವರು ಯಾರು ಎಂದು ಪ್ರಶ್ನಿಸಿದರು. ದೇವರು ಏನೊ ಗೊತ್ತಿಲ್ಲ, ಆದರೆ ದೆವ್ವ ಭೂತಗಳಂತೂ ಇಂದು ಭಾರತವನ್ನು ಆಳ್ವಿಕೆ ಮಾಡುತ್ತಿವೆ ಎಂದೆನಿಸಿ ಬಿಡುತ್ತದೆ ಎಂದರು.

ಯಾಕೆಂದರೆ ಕೊರೋನ ಭೀಕರ ವಾತಾವರಣದಲ್ಲಿ ಜನ ಸಮುದಾಯ ಧ್ವನಿ ತೆಗೆಯಲು ಕಷ್ಟಕರವಾದ ಸನ್ನಿವೇಶವನ್ನೇ ದುರ್ಬಳಕೆ ಮಾಡಿಕೊಂಡು, ಖಾಸಗಿ ಮತ್ತು ಕಾರ್ಪೋರೇಟ್ ಕಂಪನಿಗಳಿಗೆ ಸರ್ವಸ್ವವನ್ನೂ ಧಾರೆ ಎರೆಯುವ ಕಾಯ್ದೆಗಳನ್ನು ಜಾರಿಗೆ ತರುತ್ತಿರುವುದನ್ನು ನೋಡುತ್ತಿದ್ದರೆ, The "most unkindest cut of all" ಎಂದೇ ಅನ್ನಿಸುತ್ತದೆ ಎಂದು ಹರಿಹಾಯ್ದರು.

ರಾಜ್ಯ ಸರ್ಕಾರ ಜೂನ್ 2020 ರಂದು ಭೂಸುಧಾರಣೆ ಕಾಯ್ದೆಗೆ ಹೊರಡಿಸಿರುವ ಸುಗ್ರೀವಾಜ್ಞೆ ಕೂಡ ರೈತರ ಏಳ್ಗೆಗಾಗಿ ಎನ್ನುತ್ತಲೇ ಅವರ ಬದುಕನ್ನೇ ಎತ್ತಂಗಡಿಯಾಗಿಸುತ್ತದೆ. ಇದರ ಮೂಲ ಹುಡುಕಿದರೆ ಕಾಂಗ್ರೆಸ್ ನೇತೃತ್ವದ ಯುಪಿಎ ಕೇಂದ್ರ ಸರ್ಕಾರದ ಪ್ರಗತಿಪರವಾದ 2013 ರ ಭೂಸ್ವಾಧೀನ ಕಾಯ್ದೆಗೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ 2015 ರಲ್ಲಿ ಸುಗ್ರೀವಾಜ್ಞೆ ತಂದು ಭೂಸುಧಾರಣೆಯ ಬುಡವನ್ನೇ ಕತ್ತರಿಸಿ ಧ್ವಂಸ ಮಾಡಲು ಹವಣಿಸಿತ್ತು ಎಂದು ಕಿಡಿಕಾರಿದರು.

ರೈತಾಪಿ ಹಿತ ಕಾಪಾಡುವ ದೇವರಾಜ್ ಅರಸು ಅವರ 1974ರ ಕಾಯ್ದೆಗಳನ್ನೆಲ್ಲಾ ನಿರ್ದಯವಾಗಿ ಈ ಸುಗ್ರೀವಾಜ್ಞೆ ಕತ್ತರಿಸಿ ಹಾಕಿದೆ. ಈ ಬಗ್ಗೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಮನಮುಟ್ಟುವಂತೆ ಮಾತನಾಡಿದ್ದಾರೆ. ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಗಂಭೀರವಾದ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಹಾಗೆ ಶಿವಸುಂದರ್ ಚಿಕಿತ್ಸಕ ನೋಟ ಬೀರಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ದಸಂಸರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಚಾಮರಸ ಮಾಲೀ ಪಾಟಿಲ್, ಆಲಗೂಡು ಶಿವಕುಮಾರ್, ಎನ್.ಮುನಿಸ್ವಾಮಿ, ಎನ್.ವೆಂಕಟೇಶ್, ಬೆಟ್ಟಯ್ಯಕೋಟೆ, ಚೋರನಹಳ್ಳೀ ಶಿವಣ್ಣ, ಕೆ.ವಿ.ದೇವೇಂದ್ರ, ಕಾರ್ಯ ಬಸವಣ್ಣ,ಕಲ್ಲಹಳ್ಳಿ ಕುಮಾರ್, ಹೊಸಕೋಟೆ ಬಸವರಾಜು, ಪಿ.ಮರಂಕಯ್ಯ, ವಕೀಲ ಪುನೀತ್, ಜನಾರ್ಧನ್‌ಜನ್ನಿ, ಟಿ.ಎನ್.ವೀರನಸಂಗಯ್ಯ, ಕುಮಾರ್, ಸಿದ್ದರಾಜು, ಕರುಣಾಕರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಈ ಬಾರಿ ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಅಂಗೀಕರಿಸದಂತೆ ಸರಕಾರಕ್ಕೆ ಎಚ್ಚರಿಕೆ ನೀಡುವ ಅಗತ್ಯವಿದ್ದು, ರಾಜ್ಯದ ಎಲ್ಲ ರೈತ, ದಲಿತ, ಕಾರ್ಮಿಕ ಪರ ಸಂಘಟನೆಗಳೊಡಗೂಡಿ ಚರ್ಚಿಸಿ ಮುಂದಿನ ಹೋರಾಟ ಮತ್ತು ಈ ಮಸೂದೆ ತಡೆಯಲು ಬೇಕಾಗುವ ಎಲ್ಲ ಹಂತದ ಕಾರ್ಯಕ್ರಮಗಳನ್ನು ರೂಪಿಸಲಾಗುವುದು.
-ಬಡಗಲಪುರ ನಾಗೇಂದ್ರ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X