Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ಯಮಸ್ನೇಹಿ ರಾಜ್ಯಗಳ ಶ್ರೇಯಾಂಕ ಪಟ್ಟಿ:...

ಉದ್ಯಮಸ್ನೇಹಿ ರಾಜ್ಯಗಳ ಶ್ರೇಯಾಂಕ ಪಟ್ಟಿ: ಅಗ್ರಸ್ಥಾನ ಕಾಯ್ದುಕೊಂಡ ಆಂಧ್ರ ಪ್ರದೇಶ

ಕೇಂದ್ರಾಡಳಿತ ಪ್ರದೇಶಗಳಲ್ಲಿ ದಿಲ್ಲಿಗೆ ಅಗ್ರಸ್ಥಾನ

ವಾರ್ತಾಭಾರತಿವಾರ್ತಾಭಾರತಿ5 Sept 2020 10:49 PM IST
share

ಹೊಸದಿಲ್ಲಿ, ಸೆ.5: ಉದ್ಯಮಸ್ನೇಹಿ ವಾತಾವರಣ ಕಲ್ಪಿಸಿರುವ ರಾಜ್ಯಗಳ ಪಟ್ಟಿಯಲ್ಲಿ ಸತತ ದ್ವಿತೀಯ ಬಾರಿಗೆ ಆಂಧ್ರಪ್ರದೇಶ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದರೆ, ಕೇಂದ್ರಾಡಳಿತ ಪ್ರದೇಶಗಳ ಶ್ರೇಯಾಂಕ ಪಟ್ಟಿಯಲ್ಲಿ ಈ ಗೌರವ ದಿಲ್ಲಿಗೆ ಸಂದಿದೆ.

ಉದ್ಯಮ ಮತ್ತು ಆಂತರಿಕ ವ್ಯಾಪಾರ ಉತ್ತೇಜನಾ ಇಲಾಖೆ(ಡಿಪಿಐಐಟಿ) ಸಿದ್ಧಪಡಿಸಿರುವ ‘ರಾಜ್ಯ ವ್ಯಾಪಾರ ಸುಧಾರಣೆ ಕ್ರಿಯಾ ಯೋಜನೆ’ ಶ್ರೇಯಾಂಕ ಪಟ್ಟಿಯನ್ನು ಹೊಸದಿಲ್ಲಿಯಲ್ಲಿ ಶನಿವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವೀಡಿಯೊ ಕಾನ್ಫರೆನ್ಸ್ ಮೂಲಕ ಬಿಡುಗಡೆಗೊಳಿಸಿದರು. ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಹರ್ದೀಪ್‌ಸಿಂಗ್ ಪುರಿ, ಡಿಪಿಐಐಟಿ ಕಾರ್ಯದರ್ಶಿ ಗುರುಪ್ರಸಾದ್ ಮೊಹಾಪಾತ್ರ ಪಾಲ್ಗೊಂಡಿದ್ದರು. ರಾಜ್ಯಗಳ ಪಟ್ಟಿಯಲ್ಲಿ ಆಂಧ್ರ ಪ್ರಥಮ, ಉತ್ತರಪ್ರದೇಶ ದ್ವಿತೀಯ ಮತ್ತು ತೆಲಂಗಾಣ ತೃತೀಯ ಸ್ಥಾನ ಪಡೆದಿದೆ.

ಮಧ್ಯಪ್ರದೇಶ, ಜಾರ್ಖಂಡ್, ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ರಾಜಸ್ತಾನ, ಪಶ್ಚಿಮ ಬಂಗಾಳ ಮತ್ತು ಗುಜರಾತ್ ಕ್ರಮವಾಗಿ 4ರಿಂದ 10ರವರೆಗಿನ ಸ್ಥಾನ ಪಡೆದಿದೆ. ವ್ಯಾಪಾರ ಸುಧಾರಣೆ ಕ್ರಿಯಾ ಯೋಜನೆಯ ಸಮರ್ಪಕ ಜಾರಿ, ನಿರ್ಮಾಣ ಪರವಾನಿಗೆ, ಕಾರ್ಮಿಕರ ನಿಯಂತ್ರಣ, ಪರಿಸರ ನೋಂದಣಿ, ಮಾಹಿತಿ ಅವಕಾಶ, ಜಮೀನಿನ ಲಭ್ಯತೆ, ಏಕ ಗವಾಕ್ಷಿ ವ್ಯವಸ್ಥೆ- ಈ ಮಾನದಂಡಗಳ ಆಧಾರದಲ್ಲಿ ಶ್ರೇಯಾಂಕ ಪಟ್ಟಿ ರೂಪಿಸಲಾಗಿದೆ.

 ವಿಶ್ವಬ್ಯಾಂಕ್‌ನ ಉದ್ಯಮಸ್ನೇಹಿ ವಾತಾವರಣವಿರುವ ದೇಶಗಳ ಪಟ್ಟಿಯಲ್ಲಿ ಭಾರತ 2014ರಲ್ಲಿ 142ನೇ ಸ್ಥಾನದಲ್ಲಿದ್ದರೆ 2019ರಲ್ಲಿ 63ನೇ ಸ್ಥಾನಕ್ಕೆ ಮೇಲೇರಿದೆ. ಈಗ ಬಿಡುಗಡೆಯಾಗಿರುವ ಉದ್ಯಮಸ್ನೇಹೀ ರಾಜ್ಯಗಳ ಪಟ್ಟಿಯು, ನಾವು ಯಾವ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಬೇಕಿದೆ ಎಂಬುದನ್ನು ಗುರುತಿಸುತ್ತದೆ. ಜಾಗತಿಕವಾಗಿ ನಮ್ಮ ಸಾಧನೆ ಹೆಚ್ಚಿಸಲು ಇದು ಪೂರಕವಾಗಲಿದೆ ಎಂದು ಸಚಿವ ಗೋಯಲ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X