ರಾಜಧಾನಿಯಲ್ಲಿ 3,093 ಮಂದಿಗೆ ಕೊರೋನ ಸೋಂಕು ದೃಢ
3,226 ಮಂದಿ ಗುಣಮುಖ, 34 ಮಂದಿ ಮೃತ್ಯು
ಬೆಂಗಳೂರು, ಸೆ.3: ನಗರದಲ್ಲಿ ಶನಿವಾರದಂದು 3,093 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 3,226 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, 34 ಜನರು ಮೃತರಾಗಿದ್ದಾರೆ.
ನಗರದಲ್ಲಿ ಒಟ್ಟು 1,44,757 ಜನರಿಗೆ ಸೋಂಕು ದೃಢಪಟ್ಟಿದ್ದು, 2,125 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,01,152 ಜನರು ಇಲ್ಲಿಯವರೆಗೆ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಮತ್ತು ಆರೋಗ್ಯ ಹಾಗೂ ಆರೈಕೆ ಕೇಂದ್ರಗಳಲ್ಲಿ 41,479 ಕೊರೋನ ಸೋಂಕಿತರು ಸಕ್ರಿಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 1,91,864 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.
ಶುಕ್ರವಾರದ ಬಿಬಿಎಂಪಿ ಕೋವಿಡ್ ವರದಿಯಲ್ಲಿ ನಗರದಲ್ಲಿ ಒಟ್ಟು ಸಕ್ರಿಯ 14,448 ಕಂಟೈನ್ಮೆಂಟ್ ಝೋನ್ಗಳು ಇದುವರೆಗೂ 15,931 ಕಂಟೈನ್ಮೆಂಟ್ ಝೋನ್ಗಳನ್ನು ಗುರುತಿಸಲಾಗಿದೆ.
ನಗರದ 3,76,923 ಜನರನ್ನು ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿರನ್ನು 4,77,840 ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 9,78,563 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.14.48ರಷ್ಟಿದೆ. ಕೊರೋನ ಸೋಂಕಿಗೆ ಮೃತರಾಗುತ್ತಿರುವ ಪ್ರಮಾಣ ಶೇ.1.48ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.69.13ರಷ್ಟಿದೆ.
ಪೌರಕಾರ್ಮಿಕರಿಗೆ ಮಾತ್ರೆ ವಿತರಣೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ 1,200 ಮಂದಿ ಪೌರಕಾರ್ಮಿಕರು ಹಾಗೂ ಹೌಸ್ ಕೀಪಿಂಗ್ ಸಿಬ್ಬಂದಿಗೆ ಮೇಯರ್ ಗೌತಮ್ ಕುಮಾರ್ ಅವರು ಆಯುರ್ವೇದ ತಜ್ಞ ಡಾ. ಗಿರಿಧರ ಕಜೆ ಸಿದ್ಧಪಡಿಸಿರುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮಾತ್ರೆಗಳನ್ನು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಲಾಯಿತು. ಭವ್ಯ ಎಂಬ ಹೆಸರಿನ 60 ಮಾತ್ರೆ ಮತ್ತು ಸ್ವಾತ್ಮ್ಯ ಎಂಬ ಹೆಸರಿನ 30 ಮಾತ್ರೆ ಡಬ್ಬಿಯಲ್ಲಿದ್ದು, 2 ಭವ್ಯ ಹಾಗೂ 1 ಸಾತ್ಮ್ಯ ಮಾತ್ರೆಗಳನ್ನು ಪ್ರತಿನಿತ್ಯ ಮೂರು ಬಾರಿ ಊಟದ ಬಳಿಕ 10 ದಿನಗಳ ಕಾಲ ಸೇವಿಸಿದರೆ ರೋಗನಿರೋಧಕ ಶಕ್ತಿ ಹೆಚ್ಚಲಿದೆ. ಈ ಮಾತ್ರೆಗಳಿಂದ ಯಾರಿಗೂ ಯಾವುದೇ ತೊಂದರೆ ಆಗುವುದಿಲ್ಲ ಎಂದು ಡಾ. ಗಿರಿಧರ ಕಜೆ ಹೇಳಿದ್ದಾರೆ.