Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ನಿದ್ರೆಯ ಕೊರತೆ ವಿದ್ಯಾರ್ಥಿಗಳಲ್ಲಿ...

ನಿದ್ರೆಯ ಕೊರತೆ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ

ವಾರ್ತಾಭಾರತಿವಾರ್ತಾಭಾರತಿ6 Sept 2020 11:59 PM IST
share
ನಿದ್ರೆಯ ಕೊರತೆ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ

ಸಮರ್ಪಕ ನಿದ್ರೆಯು ಆರೋಗ್ಯಕರ ಬದುಕಿಗೆ ಮೂಲಮಂತ್ರವಾಗಿದೆ. ಸಾಕಷ್ಟು ನಿದ್ರೆಯು ಶರೀರವು ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ ಮತ್ತು ಮರುದಿನವನ್ನು ಆರಂಭಿಸಲು ಅಗತ್ಯ ಶಕ್ತಿಯನ್ನು ಒದಗಿಸುತ್ತದೆ. ಸಾಕಷ್ಟು ನಿದ್ರೆಯು ದೊರೆಯದಿದ್ದರೆ ಅದರ ಪ್ರತಿಕೂಲ ಪರಿಣಾಮಗಳನ್ನು ಈ ಹಿಂದೆ ಹಲವಾರು ಅಧ್ಯಯನಗಳು ತೋರಿಸಿವೆ. ಹೊಸ ಅಧ್ಯಯನವೊಂದು ನಿದ್ರೆಯ ಕೊರತೆಯು ವಿದ್ಯಾರ್ಥಿಗಳ ಬೀರುವ ಕೆಟ್ಟ ಪರಿಣಾಮಗಳನ್ನು ಪ್ರಮುಖವಾಗಿ ಬಿಂಬಿಸಿದೆ.

‘ಸ್ಲೀಪ್’ ಜರ್ನಲ್‌ನಲ್ಲಿ ಪ್ರಕಟವಾಗಿರುವ ಅಧ್ಯಯನ ವರದಿಯು ನಿದ್ರೆಯ ಕೊರತೆಯು ವಿದ್ಯಾರ್ಥಿಗಳಲ್ಲಿ ಉದ್ವೇಗ,ಸ್ವ-ಹಾನಿ ಮತ್ತು ಆತ್ಮಹತ್ಯೆ ಮಾಡಿಕೊಳ್ಳುವ ಯೋಚನೆಗಳಂತಹ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಿಸುತ್ತದೆ ಎಂದು ಹೇಳಿದೆ.

ಸಂಶೋಧಕರು 110,496 ವಿದ್ಯಾರ್ಥಿಗಳನ್ನು ಅಧ್ಯಯನಕ್ಕೊಳಪಡಿಸಿದ್ದು,ಈ ಪೈಕಿ 8,462 ಕ್ರೀಡಾಪಟುಗಳಿದ್ದರು. ಅಧ್ಯಯನದ ಬಳಿಕ ಸಂಶೋಧಕರು,ಸಾಕಷ್ಟು ನಿದ್ರೆಯ ಕೊರತೆಯು ಮಾನಸಿಕ ಅಸ್ವಸ್ಥತೆ ಸ್ಥಿತಿಗಳ ಲಕ್ಷಣಗಳನ್ನು ಶೇ.20ರಷ್ಟು ಹೆಚ್ಚಿಸುತ್ತದೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.

ನಿದ್ರೆಯ ಕೊರತೆಯು ಖಿನ್ನತೆಯ ಅಪಾಯವನ್ನು ಶೇ.21ರಷ್ಟು,ಸಿಟ್ಟನ್ನು ಶೇ.24ರಷ್ಟು,ಉದ್ವೇಗವನ್ನು ಶೇ.25ರಷ್ಟು,ನಿರಾಶಾವಾದವನ್ನು ಶೇ.24ರಷ್ಟು,ಸ್ವ-ಹಾನಿ ಮಾಡಿಕೊಳ್ಳುವ ಬಯಕೆಯನ್ನು ಶೇ.26ರಷ್ಟು,ಕಾರ್ಯಾತ್ಮಕ ಸಮಸ್ಯೆಗಳನ್ನು ಶೇ.28ರಷ್ಟು ಮತ್ತು ಆತ್ಮಹತ್ಯೆ ಯೋಚನೆಗಳನ್ನು ಶೇ.28ರಷ್ಟು ಹೆಚ್ಚಿಸುತ್ತದೆ ಎಂದು ವರದಿಯು ವಿವರಿಸಿದೆ.

ಕಾಲೇಜು ವಿದ್ಯಾರ್ಥಿಗಳಲ್ಲಿ ನಿದ್ರೆಯ ಕೊರತೆಯು ಹಲವಾರು ಮಾನಸಿಕ ಸಮಸ್ಯೆಗಳ ಲಕ್ಷಣಗಳೊಂದಿಗೆ ಇಷ್ಟೊಂದು ಬಲವಾದ ನಂಟು ಹೊಂದಿರುವುದು ನಿಜಕ್ಕೂ ಅಚ್ಚರಿಯನ್ನುಂಟು ಮಾಡಿದೆ ಎಂದು ವರದಿಯ ಮುಖ್ಯಲೇಖಕಿಯಾಗಿರುವ ಅಮೆರಿಕದ ಅರಿರೆನಾ ವಿವಿಯ ಥಿಯಾ ರಾಮ್ಸೆ ಹೇಳಿದ್ದಾರೆ.

ಹೆಚ್ಚಿನ ಕಾಲೇಜು ವಿದ್ಯಾರ್ಥಿಗಳು ಸೂಕ್ತ ಆರೋಗ್ಯ ಮತ್ತು ಕ್ರಿಯಾತ್ಮಕ ಬದುಕಿಗೆ ಅಗತ್ಯವಾದಷ್ಟು ನಿದ್ರೆಯನ್ನು ಮಾಡುವುದಿಲ್ಲ,ಹೀಗಾಗಿ ನಿದ್ರೆಯ ಕೊರತೆಯು ಮಾನಸಿಕ ಆರೋಗ್ಯದೊಂದಿಗೆ ಬಲವಾದ ನಂಟು ಹೊಂದಿದೆ ಎನ್ನುವುದು ಮಹತ್ವವನ್ನು ಪಡೆದುಕೊಂಡಿದೆ ಎಂದು ಸಂಶೋಧಕರ ತಂಡದ ಸದಸ್ಯ ಮೈಕೆಲ್ ಗ್ರಾಂಡ್ನರ್ ಹೇಳಿದ್ದಾರೆ.

ನಿದ್ರಾ ಕೊರತೆಯ ಇತರ ಆರೋಗ್ಯ ಸಮಸ್ಯೆಗಳು

ನಿದ್ರೆಯ ಕೊರತೆಯು ಹಲವಾರು ಮಾನಸಿಕ ಅಸ್ವಸ್ಥತೆಗಳಿಗೆ ಕಾರಣವಾಗುವುದಲ್ಲದೆ, ಹಸಿವಿನ ಹಾರ್ಮೋನ್‌ನ್ನು ಪ್ರಚೋದಿಸುವ ಮೂಲಕ ದೇಹತೂಕವನ್ನು ಹೆಚ್ಚಿಸುತ್ತದೆ. ದಿನವಿಡೀ ಬಳಲಿಕೆ ಮತ್ತು ಆಯಾಸವನ್ನುಂಟು ಮಾಡುತ್ತದೆ. ಅದು ಹೃದಯನಾಳೀಯ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ ಮತ್ತು ಚರ್ಮದ ಆರೋಗ್ಯಕ್ಕೆ ಹಾನಿಯನ್ನುಂಟು ಮಾಡುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X