Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಪ್ರಜಾಪ್ರಭುತ್ವವನ್ನು ರಕ್ಷಿಸಿದ...

ಭಾರತದ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಎಡನೀರು ಸ್ವಾಮೀಜಿಯ ಒಂದು ಅಪೀಲು

ವಾರ್ತಾಭಾರತಿವಾರ್ತಾಭಾರತಿ7 Sept 2020 2:38 PM IST
share
ಭಾರತದ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಎಡನೀರು ಸ್ವಾಮೀಜಿಯ ಒಂದು ಅಪೀಲು

ಹೊಸದಿಲ್ಲಿ: ಧಾರ್ಮಿಕ ಸ್ಥಳಗಳ ನಿರ್ವಹಣೆಯನ್ನು ನಿಯಂತ್ರಿಸುವ ಸಲುವಾಗಿ 1969 ಹಾಗೂ 1970ರ ಕೇರಳ ಭೂಸುಧಾರಣಾ ಕಾಯಿದೆಗಳ ಜಾರಿಯನ್ನು ವಿರೋಧಿಸಿ ಆಗ ಕೇವಲ 30 ವರ್ಷದವರಾಗಿದ್ದ ಎಡನೀರು ಮಠದ ಶ್ರೀ ಕೇಶವಾನಂದ ಭಾರತ ಸ್ವಾಮೀಜಿ 1970ರಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದರಿಂದಾಗಿ ಸಂವಿಧಾನವನ್ನು ತಿದ್ದುಪಡಿಗೊಳಿಸಲು ಸಂಸತ್ತಿಗೆ ಇರುವ ಹಕ್ಕನ್ನು ಮೊಟಕುಗೊಳಿಸುವ ಹಾಗೂ ಯಾವುದೇ ತಿದ್ದುಪಡಿಯನ್ನು ಪರಾಮರ್ಶಿಸುವ ಅಧಿಕಾರವನ್ನು ನ್ಯಾಯಾಂಗಕ್ಕೆ ಒದಗಿಸುವ ಮೂಲ ಸ್ವರೂಪ ಸಿದ್ಧಾಂತ ಅಸ್ತಿತ್ವಕ್ಕೆ ಬಂದಿತ್ತು.

ಈ ಪ್ರಕರಣಕ್ಕೆ ಹಲವು ಪ್ರಥಮಗಳ ಶ್ರೇಯವಿದೆ. ಹದಿಮೂರು ಮಂದಿ ನ್ಯಾಯಾಧೀಶರುಗಳಿದ್ದ ಸುಪ್ರೀಂ ಕೋರ್ಟಿನ ಅತ್ಯಂತ ವಿಸ್ತೃತ ಪೀಠ ಗರಿಷ್ಠ 68 ದಿನಗಳ ಕಾಲ ವಿಚಾರಣೆ ನಡೆಸಿ 703 ಪುಟಗಳ ತೀರ್ಪು ನೀಡಿತ್ತು. ಅಕ್ಟೋಬರ್ 31, 1972ರಂದು ಆರಂಭಗೊಂಡ ವಿಚಾರಣೆ ಮಾರ್ಚ್ 23, 1973ರಂದು ಅಂತ್ಯಗೊಂಡಿತ್ತು.

ಸಂವಿಧಾನದ ಯಾವುದೇ ಅಂಶವನ್ನು ತಿದ್ದುಪಡಿಗೊಳಿಸುವ ಅಧಿಕಾರ ಸಂಸತ್ತಿಗಿದೆ ಎಂಬ ಸಿದ್ಧಾಂತವು ಅತ್ಯಂತ ಕನಿಷ್ಠ ಬಹುಮತ 7:6 ಆಧಾರದಲ್ಲಿ ಅಂತ್ಯಗೊಂಡಿತ್ತು. ಈ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ಎಸ್ ಎಂ ಸಿಖ್ರಿ ಹಾಗೂ ನ್ಯಾಯಮೂರ್ತಿ ಎಚ್ ಆರ್ ಖನ್ನಾ ನೇತೃತ್ವದ ಪೀಠ ನೀಡಿತ್ತು.

ಸಂಸತ್ತಿಗೆ 368ನೇ ವಿಧಿ ಅನ್ವಯ ಸಂವಿಧಾನ ತಿದ್ದುಪಡಿಗೊಳಿಸುವ ಅಧಿಕಾರವಿದೆಯಾದರೂ ಅದರ ಮೂಲ ಸ್ವರೂಪವನ್ನು ಬದಲಾಯಿಸುವ ಅಧಿಕಾರವಿಲ್ಲವೆಂದು ಈ ತೀರ್ಪು ಹೇಳಿತ್ತು. ಸಂವಿಧಾನದ ಎಲ್ಲಾ ನಿಬಂಧನೆಗಳನ್ನು ತಿದ್ದುಪಡಿಗೊಳಿಸಬಹುದಾದರೂ ಸಂವಿಧಾನದ ಮೂಲಸ್ವರೂಪಕ್ಕೆ ಯಾವುದೇ ಧಕ್ಕೆಯಾಗಿಲ್ಲ ಎಂಬುದನ್ನು ಪರಾಮರ್ಶಿಸಲು ನ್ಯಾಯಾಲಯ ತಿದ್ದುಪಡಿಯನ್ನು ಪರಿಶೀಲಿಸಬಹುದು ಎಂದು ತೀರ್ಪು ಹೇಳಿತ್ತು.

ಕೇಶವಾನಂದ ಭಾರತಿ ಸ್ವಾಮಿ ಪರ ಈ ಪ್ರಕರಣದಲ್ಲಿ ಖ್ಯಾತ ವಕೀಲರಾದ ನಾನಿ ಪಾಲ್ಖಿವಾಲ ವಾದಿಸಿದ್ದರು.

13 ಮಂದಿ ನ್ಯಾಯಾಧೀಶರ ಪೀಠ 11 ಪ್ರತ್ಯೇಕ ತೀರ್ಪುಗಳನ್ನು ನೀಡಿತ್ತಲ್ಲದೆ, ಕೆಲವು ಅಂಶಗಳಲ್ಲಿ ಸಹಮತ ಹೊಂದಿದ್ದರೆ ಇನ್ನು ಕೆಲವು ಅಂಶಗಳ ಬಗ್ಗೆ ಈ ನ್ಯಾಯಾಧೀಶರು ಸಹಮತ ಹೊಂದಿರಲಿಲ್ಲ.

ಆದರೆ ಮೂಲ ಸ್ವರೂಪ ಸಿದ್ಧಾಂತವನ್ನು 13 ನ್ಯಾಯಾಧೀಶರುಗಳ ಪೈಕಿ ಏಳು  ನ್ಯಾಯಾಧೀಶರು ಬೆಂಬಲಿಸಿದ್ದರು. ಇದು ಮುಂದೆ ಹಲವಾರು ಸಾಂವಿಧಾನಿಕ ತಿದ್ದುಪಡಿಗಳ ರದ್ದುಗೊಳಿಸುವಿಕೆಗೆ ಕಾರಣವಾಯಿತು. ತೀರಾ ಇತ್ತೀಚಿಗಿನ ಪ್ರಕರಣದಲ್ಲಿ ಉನ್ನತ ನ್ಯಾಯಾಂಗಕ್ಕೆ ನ್ಯಾಯಾಧೀಶರುಗಳ ನೇಮಕಕ್ಕಾಗಿ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ರಚಿಸಲು ಅನುವಾಗುವ ಸಾಂವಿಧಾನಿಕ ತಿದ್ದುಪಡಿಯನ್ನೂ ರದ್ದುಗೊಳಿಸಲಾಗಿರುವುದನ್ನು ಸ್ಮರಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X