Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಉಡುಪಿ: ಶ್ರದ್ದೆಯ ತೆನಹಬ್ಬ, ಮೊಂತಿ...

​ಉಡುಪಿ: ಶ್ರದ್ದೆಯ ತೆನಹಬ್ಬ, ಮೊಂತಿ ಫೆಸ್

ವಾರ್ತಾಭಾರತಿವಾರ್ತಾಭಾರತಿ8 Sept 2020 4:15 PM IST
share
​ಉಡುಪಿ: ಶ್ರದ್ದೆಯ ತೆನಹಬ್ಬ, ಮೊಂತಿ ಫೆಸ್

ಉಡುಪಿ:  ಅತ್ಯಂತ ಶ್ರದ್ದೆಯ ಹಬ್ಬ ತೆನಹಬ್ಬ ಹಾಗೂ  ಕನ್ಯಾಮರಿಯಮ್ಮನವರ ಜನ್ಮದಿನ (ಮೊಂತಿ ಫೆಸ್ಟ್) ವನ್ನು ಕೊರೋನ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸರಳ ರೀತಿಯಲ್ಲಿ ಮಂಗಳವಾರ ಆಚರಿಸಲಾಯಿತು.

ಕೊರೋನ ಹಿನ್ನಲೆಯಲ್ಲಿ ಜಿಲ್ಲಾಡಳಿತದ ಸೂಚನೆಯಂತೆ ಸಾಮೂಹಿಕ ಆಚರಣೆಗೆ ನಿಷೇಧವಿದ್ದ ಹಿನ್ನಲೆಯಲ್ಲಿ ಹಾಗೂ ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಕನ್ಯಾಮರಿಯಮ್ಮನವರ ಮೂರ್ತಿಗೆ ಹೂಗಳ ಸಮರ್ಪಣೆ ಹಾಗೂ ಮೆರವಣಿಗೆಗಳನ್ನು ರದ್ದುಗೊಳಿಸಲಾಗಿತ್ತು.

ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಭತ್ತದ ತೆನೆಯನ್ನು ಆರ್ಶಿವ ದಿಸಿ ಬಲಿಪೂಜೆಗಳನ್ನು ನೆರವೇರಿಸಲಾಯಿತು. ಪ್ರತಿ ಚರ್ಚುಗಳಲ್ಲಿ ಸೀಮಿತ ಸಂಖ್ಯೆಯ  ಭಕ್ತರಿಗೆ ಮಾತ್ರ ಅವಕಾಶ ಕಲ್ಪಿಸಿದ ಹಿನ್ನಲೆಯಲ್ಲಿ  ಹೆಚ್ಚುವರಿಯಾಗಿ ಬಲಿಪೂಜೆಗಳನ್ನು ಆಯೋಜಿಸಿಲಾಗಿತ್ತು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ ಉಡುಪಿ ಶೋಕ ಮಾತಾ ಇಗರ್ಜಿಯಲ್ಲಿ ಹೊಸ ತೆನೆಗಳನ್ನು ಆಶೀರ್ವದಿಸಿ  ಬಲಿಪೂಜೆಯನ್ನು ನೆರವೇರಿಸಿ ಸರ್ವ ಜನರ ಉತ್ತಮ ಆರೋಗ್ಯಕ್ಕಾಗಿ  ಪ್ರಾರ್ಥಿಸಿದರು.

ಬಲಿಪೂಜೆಗಳಿಗೆ ಮಕ್ಕಳು ಹಾಗೂ ಹಿರಿಯ ನಾಗರಿಕರಿಗೆ ಪ್ರವೇಶ ನಿಷೇಧಿಸಿದ್ದು ಆಯ್ದ ಭಕ್ತರು ಚರ್ಚಿನೊಳಗೆ ಆಗಮಿಸುವ ಮುನ್ನ ಕಡ್ಡಾಯ ವಾಗಿ ಸ್ಯಾನಿಟೈಸ್ ಮಾಡಿಸಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಂಡು ಬಲಿಪೂಜೆಯಲ್ಲಿ ಭಾಗವಹಿಸಿದರು. ಪೂಜೆಗೆ ಆಗಮಿಸುವ ಪ್ರತಿ ಯೊಬ್ಬ ಭಕ್ತರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿತ್ತು. ಪವಿತ್ರ ಬಲಿಪೂಜೆಯಲ್ಲಿ ಧರ್ಮಗುರುಗುಳು ಕುಟುಂಬ ಜೀವನ ಹಾಗೂ ಸಮಾಜದಲ್ಲಿ ಮಹಿಳೆಯ ಸ್ಥಾನಮಾನದ ಕುರಿತು ಪ್ರವಚನ ನೀಡಿದರು.

ಪ್ರತಿ ವರ್ಷ ವಾಡಿಕೆಯಂತೆ ಹಬ್ಬದ 9 ದಿನ ಮುಂಚಿತವಾಗಿ ಅಂದರೆ ಅಗಸ್ಟ್ 30ರಿಂದ ಚರ್ಚುಗಳಲ್ಲಿ ವಿಶೇಷವಾಗಿ ನೊವೇನಾ ಪ್ರಾರ್ಥನೆ ಸಲ್ಲಿಸುವುದರೊಂದಿ ಮೊಂತಿ ಹಬ್ಬದ ಆಚರಣೆಗೆ ನಾಂದಿಯಾಗುತ್ತದೆ ಆದರೆ ಈ ಬಾರಿ 9 ದಿನಗಳ ನೊವೆನಾವನ್ನು ಕೇವಲ ಸಾಂಕೇತಿಕವಾಗಿ ನೆರವೇರಿಸಿದ್ದು ಮಕ್ಕಳ ತಮ್ಮ ಮನೆಗಳಲ್ಲಿಯೇ ಕುಟುಂಬದೊಡನೆ ಸೇರಿ ಮೇರಿ ಮಾತೆಗೆ ಹೂಗಳನ್ನು ಸಮರ್ಪಿಸಲು ಸೂಚಿಸಲಾಗಿತ್ತು
ಬಲಿಪೂಜೆಯ ಬಳಿಕ ಧರ್ಮಗುರುಗಳು ಪ್ರತಿ ಕುಟುಂಬಕ್ಕೆ ಆಶೀರ್ವದಿಸಿದ ಹೊಸ ಭತ್ತದ ತೆನೆಯನ್ನು ವಾಳೆಯ ಗುರಿಕಾರರು ಮತ್ತು ಪ್ರತಿನಿಧಿಗಳ ಮೂಲಕ ನೀಡಿ ಹರಸಿದರು. ಇದೇ ವೇಳೆ ಚಿಕ್ಕ ಮಕ್ಕಳಿಗೆ ಸಿಹಿತಿಂಡಿ, ಕಬ್ಬುಗಳನ್ನು ಸಹ ಪ್ರತಿ ವಾಳೆಯ ಗುರಿಕಾರರು ಪ್ರತಿನಿಧಿಗಳ ಮೂಲಕ ಕಳುಹಿಸಿಕೊಡುವ ವ್ಯವಸ್ಥೆ ಕೂಡ ಮಾಡಲಾಗಿತ್ತು.

ಇಗರ್ಜಿಯಿಂದ ಭಕ್ತಿಯಿಂದ ಕೊಂಡು ಬಂದ ಭತ್ತದ ತೆನೆಯನ್ನು ಕುಟುಂಬದ ಹಿರಿಯರು ಮನೆಗೆ ತಂದು ದೇವರ ಪೀಠದ ಮೇಲಿಟ್ಟು ಪ್ರಾರ್ಥನೆ ಸಲ್ಲಿಸಿ, ಹೊಸ ಭತ್ತದ ತೆನೆಗಳನ್ನು ಸುಲಿದು ಕುಟುಂಬದ ಸದಸ್ಯರೊಂದಿಗೆ ಪಾಯಸ ಅಥವಾ ಹಾಲಿನೊಂದಿಗೆ ಸೇವಿಸಿದರು. ಅಲ್ಲದೆ ಮನೆಗಳಲ್ಲಿ ಸಂಪೂರ್ಣ ಸಸ್ಯಹಾರದ ಭೋಜನವನ್ನು ತಯಾರಿಸುವುದು ವಿಶೇಷವಾಗಿದ್ದು  ಕನಿಷ್ಟ 3 ಅಥವಾ 5 ಅಥವಾ 7 ಬಗೆಯ ಸಸ್ಯಾ ಹಾರಿ ಖಾದ್ಯಗಳಾದರೂ ಇರಬೇಕಾಗುತ್ತದೆ. ಅದರಲ್ಲೂ ಕೆಸುವಿನ ದಂಟು, ಹರಿವೆ ದಂಟು, ಹೀರೆ, ಬೆಂಡೆಕಾಯಿಗೆ ಹೆಚ್ಚಿನ ಆದ್ಯತೆ. ಪಾಯಸ ಈ ಭೋಜನದ ಅವಿಭಾಜ್ಯ ಅಂಗ. ಸಂಪೂರ್ಣ ಸಸ್ಯಹಾರದ ಭೋಜನವನ್ನು ತಯಾರಿಸಿ ಕುಟುಂಬದ ಎಲ್ಲಾ ಸದಸ್ಯರು ನೆಲದ ಮೇಲೆ ಕುಳಿತು ಬಾಳೆ ಎಲೆಯಲ್ಲಿ ಸೇವಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X