ಕೇಶವಾನಂದ ಭಾರತಿಯವರಿಗೆ ಕಾನೂನು ಕಾಲೇಜಿನಲ್ಲಿ ಶ್ರದ್ಧಾಂಜಲಿ
ಉಡುಪಿ, ಸೆ.8: ಇತ್ತೀಚೆಗೆ ದೈವಾಧೀನರಾದ ಎಡನೀರು ಮಠದ ಶ್ರೀ ಕೇಶವಾನಂದ ಭಾರತಿ ಅವರಿಗೆ ಕುಂಜಿಬೆಟ್ಟಿನಲ್ಲಿರುವ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ಡಾ.ನಿರ್ಮಲಾ ಹರಿಕೃಷ್ಣ, ಕೇಶವಾನಂದ ಭಾರತಿ ಈ ದೇಶ ಕಂಡ ಶ್ರೇಷ್ಟ ಸಂತರಲ್ಲೊಬ್ಬರಾಗಿದ್ದು ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ಸರ್ವೋಚ್ಚ ನ್ಯಾಯಾಲಯದಲ್ಲಿ ಕೂಡಾ ಹೋರಾಡಿ ಜಯಗಳಿಸಿದವರು ಹಾಗೂ ಆ ಮೂಲಕ ಸಂವಿಧಾನದ ಇತಿಹಾಸದಲ್ಲಿ ಒಂದು ಹೊಸ ಶಕೆಯನ್ನೇ ಪ್ರಾರಂಭಿಸಿದವರು ಎಂದರು.
ಮೃತರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನವನ್ನು ಆಚರಿಸಲಾಯಿತು.
Next Story