Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೊಲೀಸರ ಬಾಕಿ ಭತ್ಯೆ ತಿಂಗಳೊಳಗೆ ಪಾವತಿ:...

ಪೊಲೀಸರ ಬಾಕಿ ಭತ್ಯೆ ತಿಂಗಳೊಳಗೆ ಪಾವತಿ: ಡಿಜಿಪಿ ಪ್ರವೀಣ್ ಸೂದ್

ವಾರ್ತಾಭಾರತಿವಾರ್ತಾಭಾರತಿ8 Sept 2020 7:40 PM IST
share
ಪೊಲೀಸರ ಬಾಕಿ ಭತ್ಯೆ ತಿಂಗಳೊಳಗೆ ಪಾವತಿ: ಡಿಜಿಪಿ ಪ್ರವೀಣ್ ಸೂದ್

‌ಉಡುಪಿ, ಸೆ.8: ಕೊರೋನದಿಂದ ಬಾಕಿಯಾಗಿರುವ ಪೊಲೀಸರ ಪ್ರಯಾಣ ಮತ್ತು ತುಟಿ ಭತ್ಯೆಯನ್ನು ಪಾವತಿಸಲು ನಿರ್ದೇಶನ ನೀಡಲಾಗಿದ್ದು, ಈ ಸಂಬಂಧ ಅನುದಾನ ಕೂಡ ಬಿಡುಗಡೆ ಮಾಡುತ್ತಿದ್ದೇನೆ. ಇದರಿಂದ ಕಳೆದ ಎಪ್ರಿಲ್‌ನಿಂದ ಆಗಸ್ಟ್‌ವರೆಗೆ ಬಾಕಿ ಇರುವ ಭತ್ಯೆಯನ್ನು ತಿಂಗಳೊಳಗೆ ಪಾವತಿಸ ಲಾಗುವುದು. ಇನ್ನು ಮುಂದೆ ಈ ವಿಚಾರದಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿನಿಂದ ಪ್ರತಿಯೊಂದು ಜಿಲ್ಲೆಗೆ ಭೇಟಿ ನೀಡಿ, ಅಲ್ಲಿನ ಸಮಸ್ಯೆ, ಕೆಲಸ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇನೆ. ಕಾನ್‌ಸ್ಟೇಬಲ್ ನಿಂದ ಎಸ್ಪಿವರೆಗಿನ ಎಲ್ಲ ಅಧಿಕಾರಿಗಳು ಕೋವಿಡ್ ಸಮಯದಲ್ಲಿ ಉತ್ತಮ ವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅದಕ್ಕಾಗಿ ಅವರಿಗೆಲ್ಲ ಅಭಿನಂದನೆ ಹೇಳಲು ಜಿಲ್ಲೆಗೆ ಭೇಟಿ ನೀಡಿದ್ದೇನೆ ಎಂದರು.

ಜಿಲ್ಲೆಯ ಆಡಳಿತಾತ್ಮಕ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಮುಕ್ತ ಚರ್ಚೆ ಮಾಡಲಾಗಿದೆ. ಕೋವಿಡ್-19 ಸಂದರ್ಭದಲ್ಲಿ ಬಳಕೆ ಮಾಡಿರುವಂತೆ ಮುಂದೆಯೂ ಹೆಚ್ಚು ಹೆಚ್ಚು ತಂತ್ರಜ್ಞಾನವನ್ನು ಉಪಯೋಗಿಸಲಾಗುವುದು. ದೈಹಿಕ ಭೇಟಿಯ ಬದಲು ವಿಡಿಯೋ ಕಾನ್ಫೆರೆನ್ಸ್ ಮೂಲಕ ಚರ್ಚೆಯನ್ನು ನಡೆಸಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಕಾರ್ಯಗತಗೊಳಿಸಲಾಗಿರುವ ಎಲ್ಲ ಸಮಸ್ಯೆಗಳಿಗೆ ಒಂದೇ ದೂರವಾಣಿ ಸಂಖ್ಯೆ 112ನ್ನು ರಾಜ್ಯಾದ್ಯಂತ ಅನುಷ್ಠಾನಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಪಾಸ್‌ಪೋರ್ಟ್, ಮೊಬೈಲ್ ಕಳವು ಸೇರಿದಂತೆ ಸಣ್ಣ ಸಣ್ಣ ವಿಚಾರಗಳಿಗೂ ಪೊಲೀಸ್ ಠಾಣೆಗೆ ಬರುವ ಬದಲು ಆ್ಯಪ್ ಮೂಲಕ ದೂರು ದಾಖಲಿಸುವ ತಂತ್ರಜ್ಞಾನವನ್ನು ಇಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ರಕ್ಷಾ ಸಾವಿನ ಪ್ರಕರಣ: ಸಿಓಡಿ ತನಿಖೆ ಆರಂಭಖಾಸಗಿ ಆಸ್ಪತ್ರೆಯ ಚಿಕಿತ್ಸೆಯಿಂದ ಅನುಮಾನಾಸ್ಪದವಾಗಿ ಮೃತಪಟ್ಟ ರಕ್ಷಾ ಸಾವಿನ ಪ್ರಕರಣದ ತನಿಖೆಯನ್ನು ಸಿಓಡಿ ಪೊಲೀಸರು ಈಗಾಗಲೇ ಆರಂಭಿಸಿದ್ದಾರೆ. ತನಿಖೆ ನಡೆಯುವ ಸಂದರ್ಭ ಈ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಪ್ರವೀಣ್ ಸೂದ್ ತಿಳಿಸಿದರು.

ಜೇಷ್ಠತೆ ಆಧಾರದಲ್ಲಿ ಭಡ್ತಿಯಲ್ಲಿ ಪುರುಷ ಪೊಲೀಸರಿಗೆ ಅನ್ಯಾಯ ಆಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತು ನ್ಯಾಯಾಲಯ ನೀಡಿದ ತೀರ್ಪಿನಂತೆ ಕ್ರಮ ತೆಗೆದುಕೊಳ್ಳಲಾಗುವುದು. ನಮ್ಮಲ್ಲಿ ಮಹಿಳೆ ಮತ್ತು ಪುರುಷರು ಎಂಬ ಯಾವುದೇ ವ್ಯತ್ಯಾಸ ಇಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X