Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಂತಕರ ಮರಣದಂಡನೆ ರದ್ದತಿ ನ್ಯಾಯಾಲಯದ...

ಹಂತಕರ ಮರಣದಂಡನೆ ರದ್ದತಿ ನ್ಯಾಯಾಲಯದ ಇನ್ನೊಂದು ಪ್ರಹಸನ: ಸೌದಿ ಪತ್ರಕರ್ತನ ಗೆಳತಿ

ವಾರ್ತಾಭಾರತಿವಾರ್ತಾಭಾರತಿ8 Sept 2020 11:27 PM IST
share
ಹಂತಕರ ಮರಣದಂಡನೆ ರದ್ದತಿ ನ್ಯಾಯಾಲಯದ ಇನ್ನೊಂದು ಪ್ರಹಸನ: ಸೌದಿ ಪತ್ರಕರ್ತನ ಗೆಳತಿ

ಇಸ್ತಾಂಬುಲ್ (ಟರ್ಕಿ), ಸೆ. 8: ಸೌದಿ ಅರೇಬಿಯದ ಭಿನ್ನಮತೀಯ ಪತ್ರಕರ್ತ ಜಮಾಲ್ ಖಶೋಗಿ ಹತ್ಯೆ ಪ್ರಕರಣದಲ್ಲಿ ಐವರಿಗೆ ನೀಡಲಾಗಿರುವ ಮರಣ ದಂಡನೆಗಳನ್ನು ಆ ದೇಶದ ನ್ಯಾಯಾಲಯವೊಂದು ರದ್ದುಪಡಿಸಿರುವುದು ಒಂದು ‘ಪ್ರಹಸನ’ವಾಗಿದೆ ಎಂದು ಖಶೋಗಿಯ ಗೆಳತಿ ಹಾತಿಸ್ ಸೆಂಗಿಝ್ ಹೇಳಿದ್ದಾರೆ.

‘‘ಸೌದಿ ಅರೇಬಿಯದಲ್ಲಿ ಇಂದು ನೀಡಲಾಗಿರುವ ತೀರ್ಪು ನ್ಯಾಯವನ್ನು ಮತ್ತೊಮ್ಮೆ ಅಣಕ ಮಾಡಿದಂತಾಗಿದೆ’’ ಎಂದು ಟರ್ಕಿ ಪ್ರಜೆಯಾಗಿರುವ ಸೆಂಗಿಝ್ ಸೋಮವಾರ ಟ್ವಿಟರ್‌ನಲ್ಲಿ ಹೇಳಿದ್ದಾರೆ.

‘‘ಈ ಪ್ರಹಸನವನ್ನು ಅಂತರ್‌ರಾಷ್ಟ್ರೀಯ ಸಮುದಾಯ ಸ್ವೀಕರಿಸುವುದಿಲ್ಲ’’ ಎಂದಿದ್ದಾರೆ.

ಖಶೋಗಿ ಹಂತಕರನ್ನು ನಾವು ಕ್ಷಮಿಸಿದ್ದೇವೆ ಎಂಬುದಾಗಿ ಅವರ ಪುತ್ರರು ಮೇ ತಿಂಗಳಲ್ಲಿ ಘೋಷಿಸಿದ ಬಳಿಕ ಸೌದಿ ಅರೇಬಿಯದ ನ್ಯಾಯಾಲಯವು ಐವರು ದೋಷಿಗಳ ಮರಣ ದಂಡನೆಗಳನ್ನು ಜೈಲು ಶಿಕ್ಷೆಯಾಗಿ ಪರಿವರ್ತಿಸಿ ತೀರ್ಪು ನೀಡಿದೆ.

ನ್ಯಾಯಾಲಯವು ತನ್ನ ಅಂತಿಮ ತೀರ್ಪಿನಲ್ಲಿ ಯಾವುದೇ ದೋಷಿಯ ಹೆಸರನ್ನು ಉಲ್ಲೇಖಿಸಿಲ್ಲ.

ಖಶೋಗಿಯನ್ನು 2018 ಅಕ್ಟೋಬರ್ 2ರಂದು ಟರ್ಕಿಯ ಇಸ್ತಾಂಬುಲ್ ನಗರದಲ್ಲಿರುವ ಸೌದಿ ಅರೇಬಿಯದ ಕೌನ್ಸುಲೇಟ್ ಕಚೇರಿಯಲ್ಲಿ ಸೌದಿ ಅರೇಬಿಯದ ಗುಪ್ತಚರ ಅಧಿಕಾರಿಗಳ ತಂಡವೊಂದು ಅಮಾನುಷವಾಗಿ ಕೊಂದಿದೆ ಎಂದು ಟರ್ಕಿ ಆರೋಪಿಸಿದೆ.

ಪಾರದರ್ಶಕತೆ, ಉತ್ತರದಾಯಿತ್ವ ನಿಗದಿಯ ಕೊರತೆ: ವಿಶ್ವಸಂಸ್ಥೆಯ ಮಾನವಹಕ್ಕುಗಳ ಕಚೇರಿ

ಭಿನ್ನಮತೀಯ ಪತ್ರಕರ್ತ ಜಮಾಲ್ ಖಶೋಗಿ ಹತ್ಯೆ ಬಗ್ಗೆ ಸೌದಿ ಅರೇಬಿಯ ನಡೆಸಿರುವ ವಿಚಾರಣೆಯಲ್ಲಿ ಪಾರದರ್ಶಕತೆಯ ಕೊರತೆಯಿದೆ ಹಾಗೂ ಅಪರಾಧಕ್ಕೆ ಉತ್ತರದಾಯಿತ್ವ ನಿಗದಿಪಡಿಸುವಲ್ಲಿ ಅದು ವಿಫಲವಾಗಿದೆ ಎಂದು ವಿಶ್ವಸಂಸ್ಥೆಯ ಮಾನವಹಕ್ಕುಗಳ ಕಚೇರಿ ಮಂಗಳವಾರ ಹೇಳಿದೆ.

ಮರಣ ದಂಡನೆಯನ್ನು ವಿಶ್ವಸಂಸ್ಥೆ ವಿರೋಧಿಸುತ್ತದೆ ಎಂದು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ ವಿಶ್ವಸಂಸ್ಥೆಯ ಮಾನವಹಕ್ಕುಗಳ ಕಚೇರಿಯ ವಕ್ತಾರ ರೂಪರ್ಟ್ ಕಾಲ್ವಿಲ್, ‘‘ಈ ಪ್ರಕರಣದ ವಿಚಾರಣೆಯಲ್ಲಿ ಸರಿಯಾದ ಪಾರದರ್ಶಕತೆಯಿರಲಿಲ್ಲ, ಹತ್ಯೆಗೆ ಕಾರಣರಾದವರನ್ನು ಶಿಕ್ಷಿಸಬೇಕು ಹಾಗೂ ಅವರ ಅಪರಾಧಕ್ಕೆ ತಕ್ಕ ಶಿಕ್ಷೆಯಾಗಬೇಕು’’ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X