Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಧ್ಯಮ ಜಾಗತಿಕವಾಗಬೇಕಿದೆ: ಪ್ರಧಾನಿ

ಮಾಧ್ಯಮ ಜಾಗತಿಕವಾಗಬೇಕಿದೆ: ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ8 Sept 2020 11:28 PM IST
share
ಮಾಧ್ಯಮ ಜಾಗತಿಕವಾಗಬೇಕಿದೆ: ಪ್ರಧಾನಿ

ಹೊಸದಿಲ್ಲಿ, ಸೆ. 8: ಭಾರತದ ಧ್ವನಿ ಹಾಗೂ ಸ್ಥಳೀಯ ಉತ್ಪನ್ನ ಜಾಗತಿಕ ಮಟ್ಟಕ್ಕೆ ಏರುತ್ತಿರುವ ಇಂದಿನ ದಿನಗಳಲ್ಲಿ ದೇಶದ ಮಾಧ್ಯಮ ಕೂಡ ಜಾಗತಿಕ ಮಟ್ಟಕ್ಕೆ ಏರುವ ಅಗತ್ಯ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ಜೈಪುರದಲ್ಲಿ ಪತ್ರಿಕಾ ಗೇಟ್ ಉದ್ಘಾಟಿಸಿ ಹಾಗೂ ಪತ್ರಿಕಾ ಸಮೂಹದ ಅಧ್ಯಕ್ಷ ಗುಲಾಬ್ ಕೊಠಾರಿ ಅವರ ಎರಡು ಪುಸ್ತಕಗಳನ್ನು ವೀಡಿಯೊ ಕಾನ್ಫೆರನ್ಸ್ ಮೂಲಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಭಾರತದ ಸ್ಥಳೀಯ ಉತ್ಪನ್ನ ಜಾಗತಿಕವಾಗುತ್ತಿದೆ. ಭಾರತದ ಧ್ವನಿ ಕೂಡ ಇನ್ನಷ್ಟು ಜಾಗತಿಕವಾಗುತ್ತಿದೆ. ಜಗತ್ತು ಭಾರತವನ್ನು ತೀವ್ರವಾಗಿ ಆಲಿಸುತ್ತಿದೆ. ಪ್ರತಿಯೊಂದು ಅಂತಾರಾಷ್ಟ್ರೀಯ ಸಂಸ್ಥೆಗಳಲ್ಲಿ ಭಾರತ ಪ್ರಬಲ ಉಪಸ್ಥಿತಿ ಹೊಂದಿದೆ. ಇಂತಹ ಸಂದರ್ಭದಲ್ಲಿ ಭಾರತದ ಮಾಧ್ಯಮ ಕೂಡ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕಾದ ಅಗತ್ಯ ಇದೆ ಎಂದು ಅವರು ಹೇಳಿದರು.

ನಮ್ಮ ದಿನಪತ್ರಿಕೆ ಹಾಗೂ ಮ್ಯಾಗಝಿನ್‌ಗಳು ಜಾಗತಿಕ ಖ್ಯಾತಿ ಹೊಂದಬೇಕು. ಡಿಜಿಟಿಲ್ ಯುಗದಲ್ಲಿ ನಾವು ಜಗತ್ತಿನಾದ್ಯಂತ ಡಿಜಿಟಲ್ ಆಗಿ ತಲುಪಬೇಕು. ಜಗತ್ತಿನ ವಿವಿಧ ಭಾಗಗಳಲ್ಲಿ ನೀಡುವಂತೆ ನಾವು ಕೂಡ ಸಾಹಿತ್ಯಕ ಪ್ರಶಸ್ತಿಗಳನ್ನು ನೀಡಬೇಕು. ಇದು ದೇಶದ ಇಂದಿನ ಅಗತ್ಯ ಎಂದು ಅವರು ಹೇಳಿದರು. ಕೊರೋನ ಸಾಂಕ್ರಾಮಿಕ ರೋಗದ ಬಗ್ಗೆ ಜಾಗೃತಿ ಮೂಡಿಸುವ, ಸರಕಾರಿ ಕಾರ್ಯಕ್ರಮಗಳನ್ನು ವಿಶ್ಲೇಷಿಸುವ ಹಾಗೂ ನ್ಯೂನತೆಗಳನ್ನು ಎತ್ತಿ ತೋರಿಸುವ ಮೂಲಕ ದೇಶದ ಮಾಧ್ಯಮ ಜನರಿಗೆ ಅಭೂತಪೂರ್ವ ಸೇವೆ ಸಲ್ಲಿಸುತ್ತಿದೆ ಎಂದು ಪ್ರಧಾನಿ ಅವರು ತಿಳಿಸಿದರು. ಸಾಮಾಜಿಕ ಮಾಧ್ಯಮ ಪ್ರಮುಖವಾಗಿರುವ ಈ ಯುಗದಲ್ಲಿ ಕೆಲವೊಮ್ಮೆ ಪತ್ರಿಕೆಗಳನ್ನು ಕೂಡ ಟೀಕಿಸಲಾಗುತ್ತಿದೆ. ವಿಮರ್ಶೆಯಿಂದ ಪ್ರತಿಯೊಬ್ಬರೂ ಕಲಿಯುವ ಅಗತ್ಯ ಇದೆ. ಇದು ಭಾರತದ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ ಎಂದು ಅವರು ಹೇಳಿದರು.

ಶೌಚಾಲಯ ನಿರ್ಮಾಣ ಅಭಿಯಾನ, ಸ್ವಚ್ಚ ಭಾರತ್ ಅಭಿಯಾನ, ಉಜ್ವಲ ಯೋಜನೆ, ಬಡ ಮಹಿಳೆಯರಿಗೆ ಅಡುಗೆ ಅನಿಲದ ಸಿಲಿಂಡರ್ ನೀಡುವ ಯೋಜನೆ ಅಥವಾ ನಳ್ಳಿ ನೀರು ಪೂರೈಸುವ ಯೋಜನೆ ಯಾವುದೇ ಆಗಿರಲಿ ಮಾಧ್ಯಮಗಳು ಜಾಗೃತಿ ಮೂಡಿಸುವಲ್ಲಿ ಉತ್ತಮ ಕೆಲಸ ಮಾಡಿವೆ ಎಂದು ಪ್ರಧಾನಿ ತಿಳಿಸಿದರು.

‘ಸಂವಾದ ಉಪನಿಷದ್’ ಹಾಗೂ ‘ಅಕ್ಷರ ಯಾತ್ರೆ’ ಕೃತಿಗಳ ಮೂಲಕ ಭಾರತದ ಸಂಸ್ಕೃತಿ, ಸಂಪ್ರದಾಯ ಹಾಗೂ ತತ್ವಶಾಸ್ತ್ರವನ್ನು ಸಂರಕ್ಷಿಸುವ ಹಾಗೂ ಪ್ರೇರೇಪಿಸುವ ಕೊಠಾರಿ ಅವರ ಪ್ರಯತ್ನವನ್ನು ಶ್ಲಾಘಿಸಿದ ಪ್ರಧಾನಿ, ಪ್ರಸಕ್ತ ತಲೆಮಾರಿನ ಓದು ಗೂಗಲ್ ಗುರುವನ್ನು ಅವಲಂಬಿಸಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X