Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ನೆಲೆಯತ್ತ ಬರಲು ಪ್ರಯತ್ನಿಸಿದ್ದ...

ಭಾರತೀಯ ನೆಲೆಯತ್ತ ಬರಲು ಪ್ರಯತ್ನಿಸಿದ್ದ ಚೀನಿ ಸೈನಿಕರಿಂದ ಗಾಳಿಯಲ್ಲಿ ಗುಂಡು: ಭಾರತ

ವಾರ್ತಾಭಾರತಿವಾರ್ತಾಭಾರತಿ8 Sept 2020 11:39 PM IST
share
ಭಾರತೀಯ ನೆಲೆಯತ್ತ ಬರಲು ಪ್ರಯತ್ನಿಸಿದ್ದ ಚೀನಿ ಸೈನಿಕರಿಂದ ಗಾಳಿಯಲ್ಲಿ ಗುಂಡು: ಭಾರತ

 ಹೊಸದಿಲ್ಲಿ,ಸೆ.8: ಪೂರ್ವ ಲಡಾಖ್‌ನ ಮುಂಚೂಣಿ ನೆಲೆಯಲ್ಲಿನ ಭಾರತೀಯ ಯೋಧರನ್ನು ಹೆದರಿಸುವ ಪ್ರಯತ್ನವಾಗಿ ಚೀನಿ ಸೈನಿಕರು ಸೋಮವಾರ ಸಂಜೆ ಗಾಳಿಯಲ್ಲಿ ಗುಂಡು ಹಾರಿಸಿದ್ದರು ಎಂದು ಮಂಗಳವಾರ ಸ್ಪಷ್ಟವಾಗಿ ಹೇಳಿರುವ ಭಾರತವು,ಇದಕ್ಕೂ ಮುನ್ನ ಚೀನಾದ ಜನತಾ ವಿಮೋಚನಾ ಸೇನೆ (ಪಿಎಲ್‌ಎ) ಮಾಡಿದ್ದ ಇಂತಹುದೇ ಆರೋಪವನ್ನು ತಿರಸ್ಕರಿಸಿದೆ.

ಯಾವುದೇ ಹಂತದಲ್ಲಿಯೂ ಭಾರತೀಯ ಯೋಧರು ಎಲ್‌ಎಸಿಯನ್ನು ಅತಿಕ್ರಮಿಸಿಲ್ಲ ಅಥವಾ ಗುಂಡು ಹಾರಾಟ ಸೇರಿದಂತೆ ಯಾವುದೇ ಆಕ್ರಮಣಕಾರಿ ಕ್ರಮಗಳಿಗೆ ಮುಂದಾಗಿಲ್ಲ. ಮಿಲಿಟರಿ, ರಾಜತಾಂತ್ರಿಕ ಮತ್ತು ರಾಜಕೀಯ ಮಟ್ಟಗಳಲ್ಲಿ ಮಾತುಕತೆಗಳು ಪ್ರಗತಿಯಲ್ಲಿರುವಾಗಲೇ ಚೀನಿ ಸೇನೆಯು ಒಪ್ಪಂದಗಳನ್ನು ರಾಜಾರೋಷವಾಗಿ ಉಲ್ಲಂಘಿಸುತ್ತಿದೆ ಮತ್ತು ಆಕ್ರಮಣಕಾರಿ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಭಾರತೀಯ ಸೇನೆಯು ಹೇಳಿದೆ.

 ಕಳೆದ 45 ವರ್ಷಗಳಲ್ಲಿ 3,488 ಕಿ.ಮೀ.ಉದ್ದದ ಎಲ್‌ಎಸಿಯಲ್ಲಿ ಭಾರತ ಅಥವಾ ಚೀನಾ ಒಂದೇ ಒಂದು ಗುಂಡನ್ನು ಹಾರಿಸಿಲ್ಲ ಮತ್ತು ಸೋಮವಾರ ಗುಂಡಿನ ಹಾರಾಟ ನಡೆದಿರುವುದು ಕಳೆದ ಮೇ ತಿಂಗಳಲ್ಲಿ ಪೂರ್ವ ಲಡಾಖ್‌ನಲ್ಲಿ ಮಿಲಿಟರಿ ಸಂಘರ್ಷ ಆರಂಭಗೊಂಡಾಗಿನಿಂದ ಉದ್ವಿಗ್ನತೆ ಉಲ್ಬಣಿಸಿರುವುದನ್ನು ಬೆಟ್ಟು ಮಾಡಿದೆ. 20 ಭಾರತೀಯ ಮತ್ತು ಅನಿರ್ದಿಷ್ಟ ಸಂಖ್ಯೆಯ ಚೀನಿ ಸೈನಿಕರು ಸಾವನ್ನಪ್ಪಿದ್ದ ಜೂ.15ರ ಗಲ್ವಾನ್ ಘರ್ಷಣೆಗಳ ಸಂದರ್ಭದಲ್ಲಿಯೂ ಗುಂಡುಗಳ ಹಾರಾಟ ನಡೆದಿರಲಿಲ್ಲ.

ಸೋಮವಾರ ಸಂಜೆ 6:15ರ ಸುಮಾರಿಗೆ ಎಲ್‌ಎಸಿಯ ವಿಶಾಲ ಚುಷುಲ್ ಪ್ರದೇಶದಲ್ಲಿಯ ಮುಖಪಾರಿ ಶೃಂಗ ಮತ್ತು ರೆಕಿನ್ ಲಾ ಸಮೀಪಿಸಲು ಚೀನಿ ಸೈನಿಕರ ಪ್ರಯತ್ನವನ್ನು ಗಮನಿಸಿದ ಬಳಿಕ ಭಾರತೀಯ ಯೋಧರು ಕೆಲವು ಎಚ್ಚರಿಕೆ ಗುಂಡುಗಳನ್ನು ಹಾರಿಸಿದ್ದು,ಇದು ಚೀನಿ ಸೈನಿಕರು ತಮ್ಮ ನೆಲೆಗಳಿಗೆ ಮರಳುವಂತೆ ಮಾಡಿತ್ತು ಎಂದು ಕೆಲವು ವರದಿಗಳು ಹೇಳಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X