ಸೆ.13 : ಕೆಪಿಸಿಸಿ ಕಾರ್ಯಾಧ್ಯಕ್ಷರು ಉಡುಪಿಗೆ
ಉಡುಪಿ, ಸೆ.9: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಸೆ.13ರ ರವಿವಾ ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅಪರಾಹ್ನ 3 ಕ್ಕೆ ಕಾಂಗ್ರೆಸ್ ಭವನದಲ್ಲಿ ನಡೆಯುವ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಭಾಗವಹಿಸಲಿರುವರು. ಸಭೆಯಲ್ಲಿ ಮಾಜಿ ಸಚಿವರು, ಮಾಜಿ ಶಾಸಕರು, ಮಾಜಿ ಜಿಲ್ಲಾಧ್ಯಕ್ಷರು, ಕೆಪಿಸಿಸಿ ಸದಸ್ಯರು, ಬ್ಲಾಕ್ ಅಧ್ಯಕ್ಷರು, ಕೆಪಿಸಿಸಿ ಸಂಯೋಜಕರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿ ಗಳು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರಸಭಾ ಸದಸ್ಯರು, ಮುಂಚೂಣಿ ಘಟಕಗಳ ಜಿಲ್ಲಾಧ್ಯಕ್ಷರು ಭಾಗವಹಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story