Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಗೌರವ...

ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಗೌರವ ಗುಪ್ತ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ11 Sept 2020 5:30 PM IST
share
ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಗೌರವ ಗುಪ್ತ ಅಧಿಕಾರ ಸ್ವೀಕಾರ

ಬೆಂಗಳೂರು, ಸೆ.11: ಪಾಲಿಕೆ ಸದಸ್ಯರ ಅವಧಿ ಮುಕ್ತಾಯವಾದ ಬಳಿಕ ಸರಕಾರದ ಆದೇಶದಂತೆ ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಐಎಎಸ್ ಹಿರಿಯ ಅಧಿಕಾರಿ ಗೌರವ ಗುಪ್ತ ಅಧಿಕಾರ ಸ್ವೀಕರಿಸಿದರು. ಗೌರವ ಗುಪ್ತ ಅವರನ್ನು ಆಯುಕ್ತ ಎನ್. ಮಂಜುನಾಥ ಪ್ರಸಾದ್ ಬರ ಮಾಡಿಕೊಂಡರು.

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಗೌರವ್ ಗುಪ್ತ, ಕೋವಿಡ್ ವಿಷಯವನ್ನು ಪಾಲಿಕೆ ಗಂಭೀರವಾಗಿ ಪರಿಗಣಿಸಿ ನಿಯಂತ್ರಣಕ್ಕಾಗಿ ಸಾಕಷ್ಟು ಕೆಲಸ ಮಾಡಿದೆ. ಆಗಿರುವ ಕೆಲಸದ ಬಗ್ಗೆ ಸಮೀಕ್ಷೆ ನಡೆಸಿ ಮುಂದೆ ಆಗಬೇಕಿರುವ ಕೆಲಸಗಳ ಬಗ್ಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜತೆ ಚರ್ಚೆ ನಡೆಸುತ್ತೇನೆ ಎಂದರು.

ಸರಕಾರದ ಆದೇಶದ ನಿಮಿತ್ತ ಈಗಾಗಲೇ ಅಧಿಕಾರ ಸ್ವೀಕರಿಸಿದ್ದೇನೆ. ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿ, ಕೋವಿಡ್, ಮಳೆ ಪರಿಸ್ಥಿತಿಯ ಬಗ್ಗೆ ಚರ್ಚೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಸರಕಾರದ ನೆರವು ಇರಲಿದೆ. ಹಾಗೆಯೇ ಬಿಬಿಎಂಪಿಯನ್ನು ಆರ್ಥಿಕವಾಗಿ ಸದೃಢಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆದಾಯದ ಮೂಲಗಳನ್ನು ಬಲಪಡಿಸಿ, ಕ್ರೋಡೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಆಸ್ತಿ ತೆರಿಗೆ ಹೆಚ್ಚಳದ ಬಗ್ಗೆಯೂ ಸರಕಾರದ ಗಮನಕ್ಕೆ ಈಗಾಗಲೇ ಪ್ರಸ್ತಾವನೆ ಹೋಗಿದ್ದರೆ ಅದನ್ನೂ ಸಮರ್ಪಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

ವಾರ್ಡ್ ಮಟ್ಟದಲ್ಲಿ ಜನರೊಟ್ಟಿಗಿದ್ದು ಕೆಲಸ ಮಾಡುತ್ತಿದ್ದ ಪಾಲಿಕೆ ಸದಸ್ಯರ ಅವಧಿ ಮುಗಿದಿದ್ದರೂ ಎಲ್ಲರ ಸಹಕಾರ ಪಡೆದು ಕಾರ್ಯನಿರ್ವಹಿಸುತ್ತೇವೆ. ಜನಪರವಾದ ಆಡಳಿತಕ್ಕೆ ಜನರ ಮತ್ತು ಜನಪ್ರತಿನಿಧಿಗಳ ಸಹಕಾರ ಮುಖ್ಯ ಎಂದು ಹೇಳಿದರು.

ಚುನಾಯಿತ ಜನಪ್ರತಿನಿಧಿಗಳ ಅಧಿಕಾರ ಅವಧಿ ಮುಕ್ತಾಯ ಆದ ಬಳಿಕ ಎಲ್ಲಾ ಹಂತದ ಅಧಿಕಾರಿಗಳ ಜವಾಬ್ದಾರಿ ಹೆಚ್ಚಾಗಿದೆ. ಪ್ರತಿಯೊಬ್ಬರು, ಜನರ ಸಂಪರ್ಕದಲ್ಲಿರಬೇಕು, ಜನರಿಗೆ ಏನೇ ಕುಂದುಕೊರತೆಗಳಿದ್ದರೂ, ಬಗೆಹರಿಸಲು, ಸಮಸ್ಯೆಗಳಿಗೆ ಸ್ಪಂದಿಸಲು ಪ್ರಯತ್ನಿಸಬೇಕು. ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರಕಾರ ಏನೆಲ್ಲಾ ಮಾರ್ಗಸೂಚಿ, ಟಾರ್ಗೆಟ್‍ಗಳನ್ನು ನೀಡಿದೆಯೋ ಅದನ್ನು ಪಾಲಿಸಲಾಗುವುದು ಎಂದು ತಿಳಿಸಿದರು.

ಜನಪ್ರತಿನಿಧಿಗಳ ಅಧಿಕಾರ ಅವಧಿ ಮುಗಿದಿರುವುದರಿಂದ ಮುಂದಿನ ಚುನಾವಣೆವರೆಗೆ ಮಾತ್ರ ಸ್ವಲ್ಪ ಸಮಯದ ಅವಧಿ ಇದೆ. ಆದುದರಿಂದ ಯಾವುದೇ ಹೊಸ ಯೋಜನೆ ಇಲ್ಲದೆ ಇರುವ ಯೋಜನೆಗಳನ್ನೇ ಸಮರ್ಪಕವಾಗಿ ಮುಂದುವರಿಸಲಾಗುವುದು. ಆಡಳಿತಾಧಿಕಾರಿ ಸೇರಿದಂತೆ ಪ್ರತಿಯೊಬ್ಬ ಅಧಿಕಾರಿಗಳೂ ಜನರ ಸೇವೆಗೆ ಲಭ್ಯವಾಗಬೇಕು. ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಆನ್‍ಲೈನ್ ಮೂಲಕವೂ ಸ್ಪಂದಿಸಲಾಗುವುದು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X