Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ಯಾರಿ ಭಾಷೆಯ 'ಬ್ಯಾರಿ ಲಿಪಿ'...

ಬ್ಯಾರಿ ಭಾಷೆಯ 'ಬ್ಯಾರಿ ಲಿಪಿ' ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ11 Sept 2020 5:49 PM IST
share
ಬ್ಯಾರಿ ಭಾಷೆಯ ಬ್ಯಾರಿ ಲಿಪಿ ಲೋಕಾರ್ಪಣೆ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಅಸ್ತಿತ್ವಕ್ಕೆ ಬಂದ 13 ವರ್ಷಗಳ ಬಳಿಕ ರಚಿಸಲಾದ ಬ್ಯಾರಿ ಭಾಷೆಯ ಸ್ವಂತ ಲಿಪಿಯನ್ನು ಶುಕ್ರವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಲೋಕಾರ್ಪಣೆಗೊಳಿಸಿದರು. 

ಬಳಿಕ ಮಾತನಾಡಿದ ಅವರು ದ್ರಾವಿಡ ಭಾಷೆಯಾದ ಬ್ಯಾರಿ ಭಾಷೆಯು ಕಳೆದ ಹಲವು ಶತಮಾನಗಳಿಂದ ಕರಾವಳಿ ಕರ್ನಾಟಕ ಮತ್ತು ಉತ್ತರ ಕೇರಳದ ಕರಾವಳಿ ಪ್ರದೇಶಗಳಲ್ಲಿ ಸುಮಾರು ಇಪ್ಪತ್ತು ಲಕ್ಷದಷ್ಟು ಜನರ ಮಾತೃ ಭಾಷೆಯಾಗಿ ಹಾಗೂ ವ್ಯಾವಹಾರಿಕ ಭಾಷೆಯಾಗಿ ತನ್ನ ಅನನ್ಯತೆ, ವಿಶಿಷ್ಟತೆ ಮತ್ತು ಸರಳ ಪದವಿನ್ಯಾಸಗಳಿಂದ ಜನರ ನಡುವಿನ ಸಂಪರ್ಕಕೊಂಡಿಯಾಗಿ ಅಚ್ಚಳಿಯದೆ ಉಳಿದಿದೆ. ತನ್ನದೇ ಆದ ಧ್ವನಿ ವ್ಯವಸ್ಥೆ ಹೊಂದಿರುವ ಬ್ಯಾರಿ ಭಾಷೆ ತುಳು, ಮಲಯಾಳಂ, ಕನ್ನಡ, ಕೊಂಕಣಿ, ಕೊಡವ ಮೊದಲಾದ ಭಾಷೆಗಳೊಂದಿಗೆ ಭಾಷಾ ಸಾಮರಸ್ಯದ ಕೊಂಡಿಯಾಗಿಯೂ ಹಲವು ಶತಮಾನಗಳಿಂದ ಸಂಬಂಧವನ್ನು ಹೊಂದಿದೆ. ವಿಶಿಷ್ಟ ಪದಬಳಕೆ, ಸುಲಲಿತ ಮನವರಿಕೆಯ ಗುಣಗಳಿಂದಾಗಿ ಆಂಗ್ಲಭಾಷಾ ಮಾಧ್ಯಮ ಕಲಿಕಾಸಕ್ತಿಯ ನಡುವೆಯೂ ಮನೆ ಮತ್ತು ವ್ಯವಹಾರಗಳಲ್ಲಿ ಇಂದಿಗೂ ಬಹುದೊಡ್ಡ ಸಂಖ್ಯೆಯ ಬ್ಯಾರಿ ಮತ್ತು ಬ್ಯಾರಿಯೇತರ ಜನರ ದಿನನಿತ್ಯದ ಆಡುಭಾಷೆಯಾಗಿ ಅಸ್ತಿತ್ವವನ್ನು ಉಳಿಸಿಕೊಂಡಿರುವ ಬ್ಯಾರಿ ಭಾಷೆಯಲ್ಲಿ ಇಂದು ವಿಪುಲ ಸಾಹಿತ್ಯ ಚಟುವಟಿಕೆ ನಡೆಯುತ್ತಿವೆ ಎಂದರು.

ಬ್ಯಾರಿ ಭಾಷೆಯ ಸಾಹಿತ್ಯ, ಶೈಕ್ಷಣಿಕ ಬೆಳವಣಿಗೆಗಾಗಿ ಆರಂಭವಾದ 90ರ ದಶಕದ ಬ್ಯಾರಿ ಆಂದೋಲನಗಳು, ಸಾಹಿತ್ಯ ಸಮ್ಮೇಳನ ಗಳಿಂದಾಗಿ, ಬ್ಯಾರಿ ಭಾಷೆಯನ್ನು ಹೊರ ಜಗತ್ತು ಗುರುತಿಸುವಂತಾಯಿತು. ಕರ್ನಾಟಕ ಸರಕಾರ 2007ರಲ್ಲಿ ಈ ಭಾಷೆಯ ಅನನ್ಯತೆಯನ್ನು ಮನಗಂಡು ನೀಡಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಬ್ಯಾರಿ ಭಾಷೆಯ ಬೆಳವಣಿಗೆಗೆ ಅಪೂರ್ವ ಅವಕಾಶವನ್ನು ನೀಡಿತು. ಈ ನಡುವೆ ನೂರಾರು ಬರಹಗಾರರು ಬ್ಯಾರಿ ಭಾಷೆಯಲ್ಲಿ ಗದ್ಯ, ಪದ್ಯಗಳನ್ನು, ಕನ್ನಡ ಲಿಪಿಯ ಮೂಲಕ ರಚಿಸಿ ಬ್ಯಾರಿ ಭಾಷೆಯನ್ನು ಶ್ರೀಮಂತ ಗೊಳಿಸಿದರು. ಬ್ಯಾರಿ ಸಾಹಿತ್ಯ ಅಕಾಡಮಿಯು ಈ ಹಿಂದಿನ ಅವಧಿಗಳಲ್ಲಿ ಬ್ಯಾರಿ ಭಾಷಾನಿಘಂಟು, ಬ್ಯಾರಿಭಾಷಾ ವ್ಯಾಕರಣ ಗ್ರಂಥಗಳನ್ನು ರಚಿಸುವ ಮೂಲಕ ಈ ಭಾಷೆಗೆ ಶೈಕ್ಷಣಿಕ (ಅಕಾಡಮಿಕ್) ಮತ್ತು ಸಾಹಿತ್ಯಿಕ ಮಹತ್ವ ಸಿಗುವಂತೆ ಮಾಡಿದೆ. ಬ್ಯಾರಿ ಭಾಷೆಯನ್ನು ರಾಜ್ಯದ ವಿದ್ಯಾರ್ಥಿಗಳು ತೃತೀಯ ಭಾಷೆಯಾಗಿ ಐಚ್ಚಿಕವಾಗಿ ಕಲಿಯಲು ಅವಕಾಶ ಮಾಡಿಕೊಡುವ ಪ್ರಯತ್ನವೂ ಸಾಗಿದೆ. ಇದೀಗ ಈ ಬ್ಯಾರಿ ಭಾಷೆಗೆ ತನ್ನದೇ ಆದ ಲಿಪಿ ಇಲ್ಲ ಎಂಬ ಕೊರತೆಯನ್ನು ನೀಗಿಸಿ ಈ ಭಾಷೆಯನ್ನು ಭಾಷಾ ಜಗತ್ತಿಗೆ ಸ್ವತಂತ್ರ ಮತ್ತು ಅನನ್ಯತೆಯ ಅಸ್ಮಿತೆಯೊಂದಿಗೆ ಪರಿಚಯಿಸುವ ಸಲುವಾಗಿ ಬ್ಯಾರಿ ಭಾಷೆಗೆ ಸ್ವತಂತ್ರವಾದ ಲಿಪಿಯನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ರಚಿಸಿದ್ದು ಈ ಮೂಲಕ ಭಾಷಾಜಗತ್ತಿಗೆ ಬ್ಯಾರಿ ಭಾಷಾ ಲಿಪಿಯನ್ನು ಈ ದಿನ ಸಮರ್ಪಿಸುತ್ತಿದ್ದೇವೆ ಎಂದು‌ ರಹೀಂ ಉಚ್ಚಿಲ್ ಹೇಳಿದರು.

ಅಬ್ದುಲ್ ಸಮದ್ ಬಾವಾ ಪುತ್ತೂರು, ಡಾ. ಮುಹಮ್ಮದ್ ಫೌಝೀದ್ ಕಲ್ಲಿಕೋಟೆ ಇವರು ಲಿಪಿ ರಚನೆಯ ಬಗ್ಗೆ ಆಸಕ್ತಿ ಹೊಂದಿದ್ದು ಅದನ್ನು ಅಕಾಡಮಿ ಮೂಲಕ ಪರಿಚಯಿಸುವ ಪ್ರಯತ್ನ ಮಾಡಿದ್ದರು.

ವಿದ್ವಾಂಸ ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ, ಸಹ ಪ್ರಾಧ್ಯಾಪಕ ಡಾ. ಅಬೂಬಕ್ಕರ್ ಸಿದ್ದೀಕ್, ಸಹಾಯಕ ಪ್ರಾಧ್ಯಾಪಕ ಹೈದರ್ ಅಲಿ, ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ, ಸಂಪಾದಕ ಎ.ಕೆ ಕುಕ್ಕಿಲ, ಡಾ. ಮುಹಮ್ಮದ್ ಫೌಝೀದ್ ಕಲ್ಲಿಕೋಟೆ, ಅಬ್ದುಲ್ ಸಮದ್ ಬಾವಾ ಪುತ್ತೂರು, ಸಾಹಿತಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು, ಪತ್ರಕರ್ತ ಹಂಝ ಮಲಾರ್ ಇವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಯಿತು.

ಬ್ಯಾರಿ ಲಿಪಿಯ ಬಳಕೆ, ವೈಶಿಷ್ಟ್ಯತೆ : ಬ್ಯಾರಿ ಲಿಪಿಯಲ್ಲಿ 13 ಸ್ವರಾಕ್ಷರಗಳು, 25 ವರ್ಗೀಯ ವ್ಯಂಜನಗಳು, 8 ಅವರ್ಗೀಯ ವ್ಯಂಜನಾಕ್ಷರಗಳು ಸೇರಿದಂತೆ ಒಟ್ಟು 46 ಅಕ್ಷರಗಳು ಇದೆ. ಬ್ಯಾರಿ ಸ್ವರಾಕ್ಷರಗಳಲ್ಲಿ ದೀರ್ಘಸ್ವರಗಳನ್ನು ಒಂದು ಸರಳ ಸಂಕೇತದ ಮೂಲಕ ಬಳಸಲಾಗುತ್ತಿದೆ. ಬ್ಯಾರಿ ಭಾಷೆಯಲ್ಲಿ ಮಹಾಪ್ರಾಣಗಳ ಬಳಕೆ ಇರುವುದಿಲ್ಲ. ಆದಾಗ್ಯೂ ಕನ್ನಡ ಮತ್ತು ಇತರ ಭಾಷೆಗಳಿಂದ ಬರಹವನ್ನು ಯಥಾವತ್ತಾಗಿ ಬ್ಯಾರಿ ಭಾಷೆಗೆ ತರಬೇಕಾದಲ್ಲಿ ಮಹಾಪ್ರಾಣ ಅಗತ್ಯವಾಗಿರುವುದರಿಂದ ಬ್ಯಾರಿ ಲಿಪಿಯಲ್ಲಿ ಮಹಾಪ್ರಾಣಗಳನ್ನು ಸರಳವಾಗಿ ಎರಡು ಚುಕ್ಕಿ ಚಿಹ್ನೆಗಳ ಮೂಲಕ ಗುರುತಿಸಬಹುದಾಗಿದೆ.

ಸುದ್ದಿಗೋಷ್ಠಿಯಲ್ಲಿ ಅಕಾಡಮಿಯ ರಿಜಿಸ್ಟ್ರಾರ್ ಪೂರ್ಣಿಮಾ, ಬ್ಯಾರಿ ಲಿಪಿ ರಚನಾ ಸಮಿತಿಯ ಸದಸ್ಯರಾದ ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ, ಡಾ. ಅಬೂಬಕ್ಕರ್ ಸಿದ್ದೀಕ್ , ಹೈದರ್ ಅಲಿ, ಅಬ್ದುಲ್ ರಝಾಕ್ ಅನಂತಾಡಿ, ಎ.ಕೆ. ಕುಕ್ಕಿಲ, ಅಬ್ದುಲ್ ರಹಿಮಾನ್ ಕುತ್ತೆತ್ತೂರು,  ಅಬ್ದುಲ್ ಸಮದ್ ಬಾವ, ಹಂಝ ಮಲಾರ್ ಉಪಸ್ಥಿತರಿದ್ದರು.

ಅಕಾಡಮಿಯ ಸದಸ್ಯರಾದ ರೂಪಾ ವರ್ಕಾಡಿ, ಸಂಶೀರ್ ಬುಡೋಳಿ ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X