Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ಯ ಸಮಾಜದ ನಾಯಕ, ಹಿರಿಯ ಸಾಮಾಜಿಕ...

ಆರ್ಯ ಸಮಾಜದ ನಾಯಕ, ಹಿರಿಯ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ

ವಾರ್ತಾಭಾರತಿವಾರ್ತಾಭಾರತಿ11 Sept 2020 7:51 PM IST
share
ಆರ್ಯ ಸಮಾಜದ ನಾಯಕ, ಹಿರಿಯ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಇನ್ನಿಲ್ಲ

 ಹೊಸದಿಲ್ಲಿ, ಸೆ. 11: ಆರ್ಯಸಮಾಜದ ಮುಖಂಡ, ಕೋಮುವಾದ ವಿರೋಧಿ ಹೋರಾಟಗಾರ, ಜೀತದಾಳುಗಳ ವಿಮುಕ್ತಿಗಾಗಿ ಚಳವಳಿ ನಡೆಸಿದ ಸಾಮಾಜಿಕ ಚಿಂತಕ ಸ್ವಾಮಿ ಅಗ್ನಿವೇಶ್(80) ಶುಕ್ರವಾರ ನಿಧನರಾದರು.

ಬಹು ಅಂಗಾಂಗ ವೈಫಲ್ಯದ ಹಿನ್ನೆಲೆಯಲ್ಲಿ ಸ್ವಾಮಿ ಅಗ್ನಿವೇಶ್ ಅವರನ್ನು ಮಂಗಳವಾರ ಹೊಸದಿಲ್ಲಿಯ ಇನ್‌ಸ್ಟಿಟ್ಯೂಟ್ ಆಫ್ ಲಿವರ್ ಆ್ಯಂಡ್ ಬಿಲಿಯರಿ ಸಯನ್ಸಸ್‌ನಲ್ಲಿ ದಾಖಲಿಸಲಾಗಿತ್ತು. ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ವೆಂಟಿಲೇಟರ್‌ನಲ್ಲೇ ಇರಿಸಲಾಗಿತ್ತು. ಸ್ವಾಮಿ ಅಗ್ನಿವೇಶ್ ಅವರು ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ಬ್ರಾಹ್ಮಣ ಕುಟುಂಬವೊಂದರಲ್ಲಿ 1939 ಸೆಪ್ಟಂಬರ್ 21ರಂದು ಜನಿಸಿದರು. ಆಗ ಅವರಿಗೆ ವೇಪ ಶ್ಯಾಮ ರಾವ್ ಎಂದು ಹೆಸರು ಇರಿಸಲಾಗಿತ್ತು. ನಾಲ್ಕು ವರ್ಷದ ಬಾಲಕನಾಗಿರುವಾಗಲೇ ಅವರ ತಂದೆ ತೀರಿಕೊಂಡಿದ್ದರು. ಆನಂತರ ಅವರನ್ನು ಆಗ ಶಕ್ತಿ ರಾಜಸಂಸ್ಥಾನ (ಈಗ ಛತ್ತೀಸ್‌ಗಡ)ದ ದಿವಾನರಾಗಿದ್ದ ಅಜ್ಜ (ತಾಯಿಯ ತಂದೆ) ಸಾಕಿ, ಸಲಹಿದ್ದರು. ಕಾನೂನು ಹಾಗೂ ವಾಣಿಜ್ಯದಲ್ಲಿ ಪದವಿ ಪಡೆದ ಸ್ವಾಮಿ ಅಗ್ನಿವೇಶ್ ಅವರು ಕೋಲ್ಕೊತಾದ ಪ್ರತಿಷ್ಠಿತ ಸಂತ ಕ್ಸೇವಿಯರ್ ಕಾಲೇಜಿನಲ್ಲಿ ಮ್ಯಾನೇಜ್‌ಮೆಂಟ್ ಅಧ್ಯಾಪಕರಾಗಿ ಸೇವೆ ಸಲ್ಲಿಸಿದರು.

ಆನಂತರ ಸವ್ಯಸಾಚಿ ಮುಖರ್ಜಿ (ಸವ್ಯಸಾಚಿ ಮುಖರ್ಜಿ ಆನಂತರ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು) ಅವರಲ್ಲಿ ಕಾನೂನು ಅಭ್ಯಾಸ ಮಾಡಿದ್ದರು. 1968ರಲ್ಲಿ ಅಗ್ನಿವೇಶ್ ಅವರು ಹರ್ಯಾಣಕ್ಕೆ ತೆರಳಿ ಆರ್ಯ ಸಮಾಜಕ್ಕೆ ಸೇರಿದ್ದರು. ಆನಂತರ 1970 ಮಾರ್ಚ್ 25ರಂದು ಸನ್ಯಾಸ ಸ್ವೀಕರಿಸಿದ್ದರು. 1970ರಲ್ಲಿ ಅಗ್ನಿವೇಶ್ ಆರ್ಯ ಸಮಾಜದ ಸಿದ್ಧಾಂತ ಆಧಾರವಾಗಿ ಇರುವ ರಾಜಕೀಯ ಪಕ್ಷ ‘ಆರ್ಯ ಸಭಾ’ ಸ್ಥಾಪಿಸಿದರು. 1875ರಲ್ಲಿ ದಯಾನಂದ ಸರಸ್ವತಿ ಅವರು ಸ್ಥಾಪಿಸಿದ ಆರ್ಯ ಸಮಾಜದ ಅಂತರ್‌ರಾಷ್ಟ್ರೀಯ ಮಂಡಳಿಯ ಅಧ್ಯಕ್ಷ (2004-2014)ರಾಗಿ ಕೂಡ ಅವರು ಕಾರ್ಯನಿರ್ವಹಿಸಿದ್ದರು. ಜೀತಾದಾಳುಗಳ ವಿಮೋಚನೆಗೆ ಹೋರಾಡಲು ಅವರು 1981ರಲ್ಲಿ ಬಂಧು ಮುಕ್ತಿ ಮೋರ್ಚಾ (ಬಾಂಡೆಡ್ ಲೇಬರ್ ಲಿಬರೇಶನ್ ಫ್ರಂಟ್) ಅನ್ನು ಕೂಡ ಸ್ಥಾಪಿಸಿದ್ದರು. 1977ರಲ್ಲಿ ಅವರು ಹರ್ಯಾಣ ವಿಧಾನಸಭೆಯ ಶಾಸಕರಾಗಿದ್ದರು. ಆನಂತರ 1979ರಲ್ಲಿ ಶಿಕ್ಷಣ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಜೀತದಾಳುಗಳ ವಿರುದ್ಧ ಪ್ರತಿಭಟನೆ ನಡೆಸಿದ ಕಾರ್ಮಿಕರ ವಿರುದ್ಧ ಪೊಲೀಸರು ಗುಂಡು ಹಾರಿಸಿದ ಪ್ರಕರಣದಲ್ಲಿ ಹರ್ಯಾಣ ಸರಕಾರ ಯಾವುದೇ ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಆನಂತರ ವಿಧ್ವಂಸಕ ಚಟುವಟಿಕೆ ಹಾಗೂ ಹತ್ಯೆ ಆರೋಪದಲ್ಲಿ ಅವರನ್ನು ಎರಡು ಬಾರಿ ಬಂಧಿಸಲಾಗಿತ್ತು. ಬಳಿಕ ಬಿಡುಗಡೆಗೊಳಿಸಲಾಗಿತ್ತು. 2005ರಲ್ಲಿ ಹೆಣ್ಣು ಭ್ರೂಣ ಹತ್ಯೆಯ ವಿರುದ್ಧ ದೇಶಾದ್ಯಂತ ಎರಡು ವಾರಗಳ ಕಾಲ ಪ್ರಯಾಣಿಸಿ ಅಭಿಯಾನ ನಡೆಸಿದ್ದರು. ಅಲ್ಲದೆ ಮಹಿಳೆಯರ ವಿಮೋಚನೆಗೆ ಹಾಗೂ ರೈತರು ಹಾಗೂ ಬುಡಕಟ್ಟು ಜನರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X