ಉಡುಪಿ : 168 ಮಂದಿಯಲ್ಲಿ ಕೊರೋನ ಪಾಸಿಟಿವ್, ಇಬ್ಬರು ಬಲಿ

ಉಡುಪಿ, ಸೆ.11: ಜಿಲ್ಲೆಯಲ್ಲಿ ಕೋವಿಡ್-19ಕ್ಕೆ ಶುಕ್ರವಾರ 168 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರಾದವರ ಒಟ್ಟು ಸಂಖ್ಯೆ 13743ಕ್ಕೇರಿದೆ. ಇದರೊಂದಿಗೆ ಶುಕ್ರವಾರ 1320 ಮಂದಿಯ ಗಂಟಲುದ್ರವದ ಪರೀಕ್ಷಾ ಫಲಿತಾಂಶ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಕೋವಿಡ್ ಪಾಸಿಟಿವ್ ದೃಢಪಟ್ಟ 168 ಮಂದಿಯಲ್ಲಿ ಉಡುಪಿ ತಾಲೂಕಿನ 96 ಮಂದಿ, ಕುಂದಾಪುರ ತಾಲೂಕಿನ 44 ಹಾಗೂ ಕಾರ್ಕಳ ತಾಲೂಕಿನ 26 ಮಂದಿ ಇದ್ದು, ಹೊರಜಿಲ್ಲೆಯಿಂದ ಉಡುಪಿಗೆ ಚಿಕಿತ್ಸೆಗೆಂದು ಬಂದ ಇಬ್ಬರಲ್ಲಿ ಸಹ ಕೊರೋನ ಪಾಸಿಟಿವ್ ಪತ್ತೆಯಾಗಿದೆ ಎಂದವರು ತಿಳಿಸಿದರು.
ದಿನದಲ್ಲಿ ಮಕ್ಕಳು ಸೇರಿದಂತೆ 102 ಮಂದಿ ಪುರುಷರು ಹಾಗೂ 66 ಮಂದಿ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ 40 ಪುರುಷರು ಹಾಗೂ 32 ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ಡಾ.ಸೂಡ ಹೇಳಿದರು.
ಪಾಸಿಟಿವ್ ದೃಢಗೊಂಡ 168 ಮಂದಿಯಲ್ಲಿ 107 ಮಂದಿ ಪಾಸಿಟಿವ್ ಬಂದವರ ಸಂಪರ್ಕದಿಂದ, 49 ಮಂದಿ ಶೀತಜ್ವರದಿಂದ ಹಾಗೂ ಒಬ್ಬರು ಉಸಿರಾಟದ ತೊಂದರೆಯಿಂದ ಬಳಲುತಿದ್ದು ಸೋಂಕು ಕಾಣಿಸಿಕೊಂಡಿದೆ. ಉಳಿದಂತೆ 11 ಮಂದಿಯ ಸೋಂಕಿನ ಸಂಪರ್ಕ ಇನ್ನೂ ಪತ್ತೆಯಾಗಬೇಕಿದೆ ಎಂದರು.
232 ಮಂದಿ ಬಿಡುಗಡೆ: ಜಿಲ್ಲೆಯಲ್ಲಿ ಇಂದು 232 ಮಂದಿ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇವರಲ್ಲಿ 63 ಮಂದಿ ಕೋವಿಡ್ ಆಸ್ಪತ್ರೆಗಳಿಂದ, 169 ಮಂದಿ ಹೋಮ್ ಐಸೋಲೇಷನ್ನಲ್ಲಿದ್ದು ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿ ನಿಂದ ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 11,784ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 1831 ಮಂದಿ ಇನ್ನೂ ಚಿಕಿತ್ಸೆಯಲ್ಲಿ ದ್ದಾರೆ. ಇವರಲ್ಲಿ 834 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಹಾಗೂ 997 ಮಂದಿ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆುುತಿದ್ದಾರೆ ಎಂದು ಡಿಎಚ್ಓ ಹೇಳಿದರು.
1584 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ಶುಕ್ರವಾರ ಒಟ್ಟು 1584 ಮಂದಿಯ ಗಂಟಲುದ್ರವದ ಸ್ಯಾಂಪಲ್ಗಳನ್ನು ಪಡೆಯ ಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 1435 ಮಂದಿ, ಕೋವಿಡ್ ಸಂಪರ್ಕಿತರು 68 ಮಂದಿ ಇದ್ದರೆ, ಉಸಿರಾಟ ತೊಂದರೆಯ 9, ಶೀತಜ್ವರ ದಿಂದ ಬಳಲುವ 54 ಮಂದಿ ಹಾಗೂ ವಿವಿಧ ಕೋವಿಡ್ ಹಾಟ್ಸ್ಪಾಟ್ಗಳಿಂದ ಆಗಮಿಸಿದ 18 ಮಂದಿಯ ಸ್ಯಾಂಪಲ್ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.
ಇಂದು ಪರೀಕ್ಷೆಗಾಗಿ ಪಡೆದ ಸ್ಯಾಂಪಲ್ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 82,948ಕ್ಕೇರಿದೆ. ಇವುಗಳಲ್ಲಿ ಈವರೆಗೆ 68,795 ನೆಗೆಟಿವ್, 13,743 ಪಾಸಿಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 128 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇನ್ನು ಒಟ್ಟು 410 ಸ್ಯಾಂಪಲ್ಗಳ ಪರೀಕ್ಷಾ ವರದಿ ಬರಬೇಕಿದೆ ಎಂದು ಡಾ.ಸೂಡ ವಿವರಿಸಿದರು.
ಇಬ್ಬರು ಬಲಿ: ಜಿಲ್ಲೆಯಲ್ಲಿ ಇಂದು ಇಬ್ಬರು ಕೋವಿಡ್ಗೆ ಬಲಿಯಾಗಿದ್ದಾರೆ. ಒಬ್ಬರು ಕುಂದಾಪುರದ 73 ವರ್ಷದ ವೃದ್ಧರಾದರೆ, ಮತ್ತೊಬ್ಬರು 60 ವರ್ಷ ಪ್ರಾಯದವರು. ಇಬ್ಬರೂ ಉಸಿರಾಟದ ತೊಂದರೆಯೊಂದಿಗೆ ಅಧಿಕ ರಕ್ತದೊತ್ತಡ, ಡಯಾಬಿಟೀಸ್ ಹಾಗೂ ಇತರ ಸಮಸ್ಯೆಗಳಿಂದ ನರಳುತಿದ್ದರು ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ ತಿಳಿಸಿದೆ.







