Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆ. 21ರಿಂದ ಕಾಸರಗೋಡು ಜಿಲ್ಲೆಯಲ್ಲಿ...

ಸೆ. 21ರಿಂದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಸಡಿಲಿಕೆ

ಕಾಸರಗೋಡು - ಮಂಗಳೂರು ನಡುವೆ ಬಸ್ ಸಂಚಾರಕ್ಕೂ ಹಸಿರು ನಿಶಾನೆ

ವಾರ್ತಾಭಾರತಿವಾರ್ತಾಭಾರತಿ11 Sept 2020 10:51 PM IST
share

ಕಾಸರಗೋಡು, ಸೆ.11 : ಕೋವಿಡ್ ಪ್ರತಿರೋಧ ಕಟ್ಟಿನಿಟ್ಟುಗಳಲ್ಲಿ ಸೆ. 21ರಿಂದ ಕಾಸರಗೋಡು ಜಿಲ್ಲೆಯಲ್ಲಿ ಹೆಚ್ಚುವರಿ ಸಡಿಲಿಕೆ ಮಂಜೂರಾತಿ ನೀಡಬಹುದು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದರು.

ಶುಕ್ರವಾರ ನಡೆದ ಕೋರ್ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ವಿವಾಹ, ಮರಣ ಸಂಬಂಧ ಸಹಿತ ಸಾರ್ವಜನಿಕ-ಖಾಸಗಿ ಸಮಾರಂಭಗಳಲ್ಲಿ ಗರಿಷ್ಠ 100 ಮಂದಿ ಭಾಗವಹಿಸಬಹುದು. ಆದರೆ ರಾಜಕೀಯ ಪಕ್ಷಗಳ ಸಮಾರಂಭಗಳು, ಸಾರ್ವಜನಿಕ ಸಭೆಗಳು ನಡೆಸಬೇಕಿದ್ದರೆ ಕಂದಾಯ ಸಚಿವ ಇ.ಚಂದ್ರಶೇಖರನ್ ಅವರ ಅಧ್ಯಕ್ಷತೆಯಲ್ಲಿ ರಾಜಕೀಯ ಪಕ್ಷಗಳ ಮತ್ತು ಜನಪ್ರತಿನಿಧಿಗಳ ಸಭೆ ನಡೆಸಿ ನಿರ್ಧಾರ ಕೈಗೊಳ್ಳಬೇಕಿದೆ ಎಂದವರು ನುಡಿದರು.

ಬೇಕಲ ಕೋಟೆ ಸೆ.21ರಿಂದ ಪ್ರವಾಸಿಗರಿಗಾಗಿ ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಕೋವಿಡ್ ಪ್ರತಿರೋಧ ಸಂಹಿತೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಏಕಕಾಲಕ್ಕೆ 100 ಮಂದಿಗೆ ಮಾತ್ರ ಪ್ರವೇಶ, ಪಳ್ಳಿಕ್ಕರೆ ಬೀಚ್ ಮತ್ತು ರಾಣಿಪುರಂ ಕೂಡ 21ರಂದು ಪ್ರವಾಸಿ ಗರಿಗಾಗಿ ಈ ಕಡ್ಡಾಯಗಳ ಸಹಿತ ತೆರೆಯಲಾಗುವುದು. ಬಿ.ಆರ್.ಡಿ.ಸಿ.ಯ ರೆಸಾರ್ಟ್ ಗಳು , ಹೋ ಸ್ಟೇಗಳು 21ರಿಂದ ತೆರೆದು ಕಾರ್ಯಾಚಲು ಅನುಮತಿ ನೀಡಲಾಗುವುದು. ಇಲ್ಲಿಗೆ ವಸತಿಗಾಗಿ ಆಗಮಿಸುವ ಪ್ರವಾಸಿಗರು ಆಂಟಿಜೆನ್ ಟೆಸ್ಟ್ ಗೆ ಕಡ್ಡಾಯವಾಗಿ ಒಳಗಾಗಬೇಕು. ಜೊತೆಗೆ ಥರ್ಮಲ್ ತಪಾಸಣೆಯೂ ಇರುವುದು. ಇದೇ ಕಟ್ಟುನಿಟ್ಟುಗಳೊಂದಿಗೆ ಹೌಸ್ ಬೋಟ್ ಗಳ ಸರ್ವೀಸ್ ನಡೆಸಬಹುದು.

ನೌಕರಿ ತರಬೇತಿ ಆರಂಭಿಸಬಹುದು 

ಕೋವಿಡ್ ಸಂಹಿತೆಗಳನ್ನು ಕಡ್ಡಾಯವಾಗಿ ಪಾಲಿಸಿ ಆರ್ ಸೆಟ್ಟಿ ವೆಳ್ಳಿಕೋತ್ ಇನ್ಸ್ ಸ್ಟಿಟ್ಯೂಟ್ ನಲ್ಲಿ ನೌಕರಿ ತರಬೇತಿ ತರಗತಿಗಳು ಪುನರಾ ರಂಭಿಸಲು ಜಿಲ್ಲಾ ಮಟ್ಟದ ಕೊರೋನಾ ಕೋರ್ ಸಮಿತಿ ಸಭೆ ಮಂಜೂರಾತಿ ನೀಡಿದೆ. ಶೇ 50 ಸಿಟುಗಳಲ್ಲಿ ತರಬೇತಿ ನೀಡಬಹುದಾಗಿದೆ ಎಂದು ತಿಳಿಸಲಾಗಿದೆ.

1562 ಮಂದಿ ಕೋವಿಡ್ ರೋಗಿಗಳಿಗೆ ಸ್ವಗೃಹಗಳಲ್ಲಿ ಚಿಕಿತ್ಸೆ 

ಯಾವುದೇ ರೋಗ ಲಕ್ಷಣಗಳಿಲ್ಲದೆ ಕೋವಿಡ್ ಸೋಂಕು ಖಚಿತವಾದ ಮಂದಿಗೆ ಸ್ವ ಗೃಹಗಳಲ್ಲೇ ಚಿಕಿತ್ಸೆ ನೀಡುವ ವಿನೂತನ ಯೋಜನೆ ಕಾಸರಗೋಡು ಜಿಲ್ಲೆಯಲ್ಲಿ ಯಶಸ್ವಿಯಾಗಿ ಮುಂದುವರಿಯುತ್ತಿದೆ ಎಂದು ಕೊರೋನಾ ಕೋರ್ ಸಮಿತಿ ಸಭೆ ಅವಲೋಖನ ನಡೆಸಿದೆ. ಈ ವರೆಗೆ 1562 ಮಂದಿ ಸ್ವಗೃಹಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇವರಲ್ಲಿ 702 ಮಂದಿ ಈಗಲೂ ದಾಖಲಾತಿ ಚಿಕಿತ್ಸೆಯಲ್ಲಿ ಮುಂದುವರಿಯುತ್ತಿದ್ದಾರೆ.

ಎಲ್ಲ ಸ್ಥಳೀಯಾಡಳಿತ ಸಂಸ್ಥೆಗಳೂ ತಮ್ಮ ವ್ಯಾಪ್ತಿಯ ಕೋವಿಡ್ ರೋಗಿಗಳಿಗೆ ಅಗತ್ಯದ ಓಕ್ಸಿ ಮೀಟರ್ ಒದಗಿಸಬೇಕು ಎಂದು ಪಂಚಾಯತ್ ಡೆಪ್ಯುಟಿ ಡೈರೆಕ್ಟರ್ ಅವರಿಗೆ ಜಿಲ್ಲಾಧಿಕಾರಿ ಆದೇಶ ನೀಡಿದರು.

ಅಜಾನೂರು-ಕೋಟಿಕುಳಂ ವಲಯಗಳ ಮನೆಗಳಲ್ಲಿ ಸ್ವಗೃಹಗಳಲ್ಲಿ ಚಿಕಿತ್ಸೆಗೆ ಸೌಲಭ್ಯಗಳಿಲ್ಲದೇ ಇರುವ ಕಾರಣ ಸಿ.ಎಫ್.ಎಲ್.ಟಿ.ಸಿ. ಗಾಗಿ ಪತ್ತೆ ಮಾಡಿರುವ ನೂತನ ಕಟ್ಟಡವನ್ನು ಈ ನಿಟ್ಟಿನಲ್ಲಿ ಬಳಸಬೇಕು ಎಂದು ಜಿಲ್ಲಾಧಿಕಾರಿ ನುಡಿದರು.

21 ರಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಆನ್ ಡಿಮಾಂಡ್ 

ಸೆ.21ರಿಂದ ಕೆ.ಎಸ್.ಆರ್.ಟಿ.ಸಿ. ಬಸ್ ಆನ್ ಡಿಮಾಂಡ್ ಸೇವೆ ನಡೆಸಲಿವೆ. ಕಾಸರಗೋಡು-ಮಂಗಳೂರು, ಕಾಸರಗೋಡು-ಪಂಜಿಕ್ಕಲ್ಲು ರಸ್ತೆಯಲ್ಲಿ ಈ ಸೇವೆ ಲಭ್ಯವಿರುವುದು. ಈ ಪ್ರಕಾರದ ಸೇವೆ ಲಭ್ಯತೆಗೆ ಕೆ.ಎಸ್.ಆರ್.ಟಿ.ಸಿ. ಆನ್ ಲೈನ್ ಬುಕ್ಕಿಂಗ್ ಸೌಲಭ್ಯ ಬಳಸಿ ಬುಕ್ಕಿಂಗ್ ನಡೆಸಬೇಕು. ಒಂದು ರೂಟ್ ನಲ್ಲಿ ಒಂದೇ ಬಸ್ ನಲ್ಲಿ 40 ಮಂದಿ ಬುಕ್ಕಿಂಗ್ ನಡೆಸಿದರೆ ಸಂಚಾರ ಆರಂಭಿಸಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಗಿದೆ.

ಮಾಸ್ಟರ್ ಯೋಜನೆ: ತಡೆಮಾಡಿದರೆ ಶಿಕ್ಷೆ

ಮಾಸ್ಟರ್ ಯೋಜನೆ ಪ್ರಕಾರ ಹೊಣೆಯಲ್ಲಿರುವ ಶಿಕ್ಷಕರ ಔದ್ಯೋಗಿಕ ಕರ್ತವ್ಯಕ್ಕೆ ತಡೆಯುಂಟು ಮಾಡಿದರೆ ಆರೋಪಿಯ ವಿರುದ್ಧ ಜಾಮೀನು ರಹಿತ ಕೇಸು ದಾಖಲಿಸಲಾಗುವುದು. ಭಾರತೀಯ ದಂಡ ಸಂಹಿತೆ 353 ಪ್ರಕಾರ ಈ ಕೇಸು ದಾಖಲಾಗಿದೆ. ಇದೇ ವೇಳೆ ಕೇರಳ ಅಂಟುರೋಗ ನಿಯಂತ್ರಣ ಕಾಯಿದೆಗಳ ಪ್ರಕಾರ ಈ ಮೂಲಕ 5 ವರ್ಷದ ಕಠಿಣ ಸಜೆಯೂ ದೊರೆಯಲಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕೋವಿಡ್  ನಿಯಂತ್ರಣ  ಚಟುವಟಿಕೆಯಲ್ಲಿ ಮಾಸ್ಟರ್ ಯೋಜನೆ ಕಾಸರಗೋಡು ಜಿಲ್ಲೆಯಲ್ಲಿ ಯಶಸ್ವಿಯಾಗಿದೆ ಎಂದು ಸಭೆ ಅವಲೋಕನ ನಡೆಸಿದೆ. ಈ ನಿಟ್ಟಿನಲ್ಲಿ ಶಿಕ್ಷಕರಿಗೆ ಹೆಚ್ಚುವರಿ ಅಧಿಕಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಬ್ರೇಕ್ ದ ಚೈನ್ ಖಚಿತಪಡಿಸುವುದು ಶಿಕ್ಷಕರ ಗುರಿಯಾಗಿರುವುದು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅಧ್ಯಕ್ಷತೆರ ವಹಿಸಿದ್ದರು. ಉಪ ಜಿಲ್ಲಾಧಿಕಾರಿ ಡಿ.ಆರ್. ಮೇಘಶ್ರೀ, ಹೆಚ್ಚುವರಿ ದಂಡನಾಧಿಕಾರಿ ಎನ್.ದೇವಿದಾಸ್, ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್, ವಲಯ ಕಂದಾಯಾಧಿಕಾರಿ ಷಂಸುದ್ದೀನ್, ಡಿ.ವೈ.ಎಸ್.ಪಿಗಳಾದ ಬಾಲಕೃಷ್ಣನ್ ನಾಯರ್, ವಿನೋದ್ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ಮಧುಸೂದನನ್ ಎಂ. ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X