ಎಸ್ಡಿಪಿಐ ಪಾಂಡವರಕಲ್ಲು ವತಿಯಿಂದ 'ಕಾರ್ಯಕರ್ತರು-ಹಿತೈಷಿಗಳ ಸಮ್ಮಿಲನ
ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಾಂಡವರಕಲ್ಲು ವತಿಯಿಂದ ಪಕ್ಷದ ಕಾರ್ಯಕರ್ತರ ಸಮ್ಮಿಲನ ಮತ್ತು ಪಕ್ಷಕ್ಕೆ ಹೊಸ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ಇಂದು ಪಾಂಡವರಕಲ್ಲುವಿನ ಸಮುದಾಯ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಯೂಸುಫ್ ಆಲಡ್ಕ ವಹಿಸಿದ್ದರು. ಎಸ್ ಡಿ ಪಿ ಐ ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೋ, ದ.ಕ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಲ್ಲಾರೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸುಮಾರು 35 ಮಂದಿ ಪಕ್ಷದ ಸಿದ್ಧಾಂತವನ್ನು ಒಪ್ಪಿ ಸದಸ್ಯತ್ವವನ್ನು ಸ್ವೀಕರಿಸಿದರು.
ವೇದಿಕೆಯಲ್ಲಿ ಎಸ್ ಡಿ ಪಿ ಐ ಬಂಟ್ಬಾಳ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಉಬೈದುಲ್ಲಾ, ಸಮಿತಿ ಸದಸ್ಯರಾದ ಪೈಝಲ್ ಮಂಚಿ ಮತ್ತು ಇತರ ನಾಯಕರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಎಸ್ ಡಿ ಪಿ ಐ ಪಾಂಡವರಕಲ್ಲು ವಲಯಾಧ್ಯಕ್ಷ ಅಥಾವುಲ್ಲಾ ಕೆದಿಲೆ ಸ್ವಾಗತಿಸಿದರು. ಇಮ್ರಾನ್ ಪಾಂಡವರಕಲ್ಲು ನಿರೂಪಿಸಿ, ವಂದಿಸಿದರು.