Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಲಾಂ ನಬಿ ಆಝಾದ್, ಖರ್ಗೆ ಕೈತಪ್ಪಿದ...

ಗುಲಾಂ ನಬಿ ಆಝಾದ್, ಖರ್ಗೆ ಕೈತಪ್ಪಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆ

ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಪ್ರಾಧಿಕಾರಕ್ಕೆ ಕೃಷ್ಣ ಭೈರೇಗೌಡ ನೇಮಕ

ವಾರ್ತಾಭಾರತಿವಾರ್ತಾಭಾರತಿ11 Sept 2020 11:10 PM IST
share
ಗುಲಾಂ ನಬಿ ಆಝಾದ್, ಖರ್ಗೆ ಕೈತಪ್ಪಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆ

ಹೊಸದಿಲ್ಲಿ, ಸೆ.11: ಗುರುವಾರ ನಡೆದ ಕಾಂಗ್ರೆಸ್ ಪದಾಧಿಕಾರಿಗಳ ಪುನರ್ರಚನೆ ಪ್ರಕ್ರಿಯೆಯಲ್ಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಪ್ರಶ್ನಿಸಿ ಪತ್ರ ಬರೆದಿದ್ದ ಹಿರಿಯ ಮುಖಂಡರಲ್ಲಿ ಒಬ್ಬರಾಗಿದ್ದ ಗುಲಾಂ ನಬಿ ಆಝಾದ್ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಐವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡಲಾಗಿದೆ ಹಾಗೂ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ನೇಮಿಸಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ವೀರಪ್ಪ ಮೊಯ್ಲಿ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಿಂದ ಹೊರಗಿಡಲಾಗಿದೆ.

ನಿರ್ಗಮನ ಪ್ರಧಾನ ಕಾರ್ಯದರ್ಶಿಗಳಾದ ಗುಲಾಂ ನಬಿ ಆಝಾದ್, ಮೋತಿಲಾಲ್ ವೋರ, ಮಲ್ಲಿಕಾರ್ಜುನ ಖರ್ಗೆ, ಅಂಬಿಕಾ ಸೋನಿ ಮತ್ತು ಲುಝಿನ್ಹೊ ಫಲೇರಿಯೊ ಅವರು ನೀಡಿರುವ ಕೊಡುಗೆಯನ್ನು ಪಕ್ಷ ಹೃತ್ಪೂರ್ವಕವಾಗಿ ಶ್ಲಾಘಿಸುತ್ತದೆ ಎಂದು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಸಹಿ ಹಾಕಿರುವ ಪತ್ರದಲ್ಲಿ ತಿಳಿಸಲಾಗಿದೆ. ಆದರೆ ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಝಾದ್ರನ್ನು ಮುಂದುವರಿಸಲಾಗಿದೆ.
ಅಧ್ಯಕ್ಷತೆಯನ್ನು ಪ್ರಶ್ನಿಸಿ ಪತ್ರ ಬರೆದಿದ್ದ ಮತ್ತೊಬ್ಬ ಹಿರಿಯ ಮುಖಂಡ ಜಿತಿನ್ ಪ್ರಸಾದ್ರನ್ನು ಕಾರ್ಯಕಾರಿ ಸಮಿತಿಯ ಖಾಯಂ ಆಹ್ವಾನಿತರನ್ನಾಗಿ ನೇಮಿಸಲಾಗಿದೆ. ಉತ್ತರಪ್ರದೇಶ ಕಾಂಗ್ರೆಸ್ ಉಸ್ತುವಾರಿಯೂ ಆಗಿದ್ದ ಜಿತಿನ್ ಪ್ರಸಾದ್ರನ್ನು ಪಶ್ಚಿಮ ಬಂಗಾಳ ಕಾಂಗ್ರೆಸ್ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದ ಉಸ್ತುವಾರಿಯ ಜೊತೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುತ್ತಾರೆ. ಪತ್ರ ಬರೆದಿದ್ದ ಮತ್ತೊಬ್ಬ ಮುಖಂಡ ಮುಕುಲ್ ವಾಸ್ನಿಕ್ರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೊತೆಗೆ ಮಧ್ಯಪ್ರದೇಶದ ಉಸ್ತುವಾರಿಯಾಗಿ ನೇಮಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷೆಗೆ ಸಂಘಟನೆ ಮತ್ತು ಕಾರ್ಯನಿರ್ವಹಣೆಯಲ್ಲಿ ಸಹಾಯ ಮಾಡುವ ಆರು ಸದಸ್ಯರಲ್ಲಿ ವಾಸ್ನಿಕ್ ಸಹಿತ ಎಕೆ ಆ್ಯಂಟನಿ, ಅಹ್ಮದ್ ಪಟೇಲ್, ಅಂಬಿಕಾ ಸೋನಿ, ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದ್ದಾರೆ. ರಣದೀಪ್ ಸುರ್ಜೆವಾಲಾರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯ ಜೊತೆಗೆ ಕರ್ನಾಟಕದ ಉಸ್ತುವಾರಿಯಾಗಿಯೂ ನೇಮಿಸಲಾಗಿದೆ.
ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಪ್ರಾಧಿಕಾರಕ್ಕೆ ಕೃಷ್ಣ ಭೈರೇಗೌಡ ನೇಮಕ
ಕಾಂಗ್ರೆಸ್ ಪಕ್ಷದ ಮಧುಸೂದನ ಮಿಸ್ತ್ರಿ ನೇತೃತ್ವದ ಕೇಂದ್ರೀಯ ಚುನಾವಣಾ ಪ್ರಾಧಿಕಾರದ ಸದಸ್ಯರಾಗಿ ಕೃಷ್ಣ ಸಿ. ಭೈರೇಗೌಡ ಅವರನ್ನು ನೇಮಿಸಲಾಗಿದೆ.
 ಇದೇ ವೇಳೆ ಕಾಂಗ್ರೆಸ್ನ ಸಾಂಸ್ಥಿಕ ಹಾಗೂ ಕಾರ್ಯನಿರ್ವಹಣಾ ವಿಷಯಗಳಲ್ಲಿ ನೆರವಾಗಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರು ಮಂದಿ ಸದಸ್ಯರ ವಿಶೇಷ ಸಮಿತಿಯನ್ನು ಶುಕ್ರವಾರ ನೇಮಕ ಮಾಡಿದ್ದಾರೆ. ಎ.ಕೆ. ಆ್ಯಂಟನಿ, ಅಹ್ಮದ್ ಪಟೇಲ್, ಅಂಬಿಕಾ ಸೋನಿ, ಕೆ.ಸಿ. ವೇಣಿಗೋಪಾಲ್, ಮುಕುಲ್ ವಾಸ್ನಿಕ್ ಹಾಗೂ ರಣದೀಪ್ಸಿಂಗ್ ಸುರ್ಜೆವಾಲಾ ಸಮಿತಿಯ ಸದಸ್ಯರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X