Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಡಿ ಉದ್ವಿಗ್ನತೆ ನಡುವೆ 5 ಅಂಶಗಳ...

ಗಡಿ ಉದ್ವಿಗ್ನತೆ ನಡುವೆ 5 ಅಂಶಗಳ ಯೋಜನೆಗೆ ಭಾರತ-ಚೀನಾ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ11 Sept 2020 11:20 PM IST
share
ಗಡಿ ಉದ್ವಿಗ್ನತೆ ನಡುವೆ 5 ಅಂಶಗಳ ಯೋಜನೆಗೆ ಭಾರತ-ಚೀನಾ ಒಪ್ಪಿಗೆ

ಹೊಸದಿಲ್ಲಿ, ಸೆ. 11: ಭಾರತ-ಚೀನಾ ಗಡಿ ಪ್ರದೇಶಗಳಲ್ಲಿನ ಬೆಳವಣಿಗೆಗಳು ಹಾಗೂ ಭಾರತ-ಚೀನಾ ಸಂಬಂಧಗಳ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹಾಗೂ ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವ ವಾಂಗ್ ಯಿ ಮಾಸ್ಕೊದಲ್ಲಿ ಗುರುವಾರ ಸಂಜೆ ಸ್ಪಷ್ಟ ಹಾಗೂ ರಚನಾತ್ಮಕ ಮಾತುಕತೆ ನಡೆಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯಗಳ ಜಂಟಿ ಹೇಳಿಕೆ ತಿಳಿಸಿದೆ. ಶಾಂಘಾ ಕೊ-ಆಪರೇಶನ್ ಆರ್ಗನೈಸೇಶನ್ (ಎಸ್‌ಸಿಒ) ಸಭೆಯ ನೇಪಥ್ಯದಲ್ಲಿ ಇಬ್ಬರು ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಚೀನಾದ ರಕ್ಷಣಾ ಸಚಿವ ವೈ ಫೆಂಗಿ ಮಾಸ್ಕೊದಲ್ಲಿ ಬೇಟಿಯಾಗಿ ಮಾತುಕತೆ ನಡೆಸಿದ ಸುಮಾರು ಒಂದು ವಾರಗಳ ಬಳಿಕ ಈ ಮಾತುಕತೆ ನಡೆದಿದೆ. ಭಿನ್ನಾಭಿಪ್ರಾಯಗಳು ವಿವಾದವಾಗಲು ಅವಕಾಶ ನೀಡದಿರುವುದು ಸೇರಿದಂತೆ ಭಾರತ-ಚೀನಾ ಸಂಬಂಧ ಅಭಿವೃದ್ಧಿಗೆ ನಾಯಕರ ಸರಣಿ ಒಮ್ಮತದಿಂದ ಉಭಯ ದೇಶಗಳು ಮಾರ್ಗದರ್ಶನ ಪಡೆಯಲು ಇಬ್ಬರು ಸಚಿವರು ಒಪ್ಪಿಕೊಂಡರು.

ಗಡಿ ಪ್ರದೇಶದ ಪ್ರಸ್ತುತದ ಪರಿಸ್ಥಿತಿಗೆ ಉಭಯ ಕಡೆಯ ಹಿತಾಸಕ್ತಿ ಕಾರಣ ಅಲ್ಲ ಎಂಬುದನ್ನು ಇಬ್ಬರೂ ವಿದೇಶಾಂಗ ವ್ಯವಹಾರಗಳ ಸಚಿವರು ಒಪ್ಪಿಕೊಂಡರು. ಉಭಯ ಕಡೆಯ ಗಡಿ ಭದ್ರತಾ ಪಡೆಗಳು ತಮ್ಮ ಮಾತುಕತೆ ಮುಂದುವರಿಸಬೇಕು, ಸೇನೆ ಕೂಡಲೇ ಹಿಂದೆ ಸರಿಯಬೇಕು, ಉದ್ವಿಗ್ನತೆ ನಿವಾರಿಸಲು ಸೂಕ್ತ ಅಂತರ ಕಾಯ್ದುಕೊಳ್ಳಬೇಕು ಎಂಬುದಕ್ಕೆ ಅವರು ಒಪ್ಪಿಗೆ ಸೂಚಿಸಿದರು. ಚೀನಾ-ಭಾರತ ಗಡಿ ವ್ಯವಹಾರಗಳ ಅಸ್ತಿತ್ವದಲ್ಲಿರುವ ಎಲ್ಲ ಒಪ್ಪಂದ ಹಾಗೂ ನಿಯಮಾವಳಿಗಳನ್ನು ಎರಡೂ ಕಡೆಯವರು ಪಾಲಿಸಬೇಕು, ಗಡಿ ಪ್ರದೇಶದಲ್ಲಿ ಶಾಂತಿ ಹಾಗೂ ನೆಮ್ಮದಿ ಕಾಪಾಡಬೇಕು, ಬಿಕ್ಕಟ್ಟನ್ನು ಉಲ್ಭಣಗೊಳಿಸುವ ಯಾವುದೇ ಕ್ರಮವನ್ನು ತಪ್ಪಿಸಬೇಕು ಎಂಬುದಕ್ಕೆ ಉಭಯ ದೇಶಗಳ ಸಚಿವರು ಒಪ್ಪಿಕೊಂಡರು. ಭಾರತ-ಚೀನಾ ಗಡಿ ವಿವಾದದ ಕುರಿತು ವಿಶೇಷ ಪ್ರತಿನಿಧಿ ವ್ಯವಸ್ಥೆಯ ಮೂಲಕ ಮಾತುಕತೆ ಹಾಗೂ ಸಂವಹನವನ್ನು ಮುಂದುವರಿಸುವುದಕ್ಕೆ ಉಭಯ ಕಡೆಯ ಸಚಿವರು ಒಪ್ಪಿಕೊಂಡರು. ‘ಇಂಡಿಯಾ-ಚೀನಾ ಗಡಿ ವ್ಯವಹಾರಗಳ ಸಂಯೋಜನೆ ಹಾಗೂ ಸಮಾಲೋಚನೆಯ ಕಾರ್ಯಾನಿರ್ವಹಣಾ ವ್ಯವಸ್ಥೆ’ (ವರ್ಕಿಂಗ್ ಮೆಕಾನಿಸಂ ಫಾರ್ ಕನ್ಸಲ್ಟೇಶನ್ ಆ್ಯಂಡ್ ಕೋ-ಆರ್ಡಿನೇಶನ್ ಆನ್ ಇಂಡಿಯಾ-ಚೀನಾ ಬಾರ್ಡರ್ ಅಫೆಯರ್ಸ್‌ -ಡಬ್ಲ್ಯುಎಂಸಿಸಿ) ತನ್ನ ಮಾತುಕತೆಯನ್ನು ಮುಂದುವರಿಸುವುದಕ್ಕೆ ಕೂಡ ಅವರು ಈ ಸಂದರ್ಭ ಒಪ್ಪಿಗೆ ಸೂಚಿಸಿದರು. ಪರಿಸ್ಥಿತಿ ಸರಾಗವಾಗುತ್ತಿದ್ದಂತೆ ಉಭಯ ಕಡೆಯವರು ಗಡಿ ಪ್ರದೇಶಗಳಲ್ಲಿ ಶಾಂತಿ ಹಾಗೂ ನೆಮ್ಮದಿ ನಿರ್ವಹಿಸಲು ಹಾಗೂ ಹೆಚ್ಚಿಸಲು ನೂತನ ವಿಶ್ವಾಸಾರ್ಹತೆ ನಿರ್ಮಾಣ ಕ್ರಮಗಳನ್ನು ಪೂರ್ಣಗೊಳಿಸಲು ಎರಡೂ ಕಡೆಯವರು ತೀರ್ಮಾನಕ್ಕೆ ಬರಬೇಕು ಎಂಬುದನ್ನು ಉಭಯ ದೇಶಗಳ ಸಚಿವರು ಒಪ್ಪಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X