Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಾಂಜಾ ವಿಚಾರದಲ್ಲಿ ಇಡೀ ರೈತ...

ಗಾಂಜಾ ವಿಚಾರದಲ್ಲಿ ಇಡೀ ರೈತ ಸಮುದಾಯವನ್ನು ದೂಷಿಸುವುದು ಸಲ್ಲ: ಕೃಷಿ ಸಚಿವ ಬಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ12 Sept 2020 7:03 PM IST
share
ಗಾಂಜಾ ವಿಚಾರದಲ್ಲಿ ಇಡೀ ರೈತ ಸಮುದಾಯವನ್ನು ದೂಷಿಸುವುದು ಸಲ್ಲ: ಕೃಷಿ ಸಚಿವ ಬಿ.ಸಿ.ಪಾಟೀಲ್

ಹಾವೇರಿ, ಸೆ. 12: ಯಾರೋ ಒಬ್ಬರು ತಮ್ಮ ಜಮೀನಿನಲ್ಲಿ ಗಾಂಜಾ ಬೆಳೆದು ತಪ್ಪು ಮಾಡಿದರು ಎಂದ ಮಾತ್ರಕ್ಕೆ ಅನ್ನಕೊಡುವ ಇಡೀ ರೈತ ಸಮುದಾಯವನ್ನು ದೂಷಿಸುವುದು ಸರಿಯಲ್ಲ. ರೈತರು ನಾಡಿನ ಅನ್ನದಾತರು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಿತ್ರ ನಟರಾಗಲೀ, ನಟಿಯರಾಗಲೀ ಯಾರೂ ತಪ್ಪು ಮಾಡಿದರೂ ಅದು ತಪ್ಪೇ. ಡ್ರಗ್ಸ್ ದಂಧೆ ತನಿಖೆ ನಡೆಯುತ್ತಿದೆ. ಅಪರಾಧಿಗಳಾರು ಎಂಬುದು ತನಿಖೆಯಿಂದ ಪತ್ತೆಯಾಗಲಿದೆ. ಈ ಹಿಂದೆ ತಮ್ಮ ಅವಧಿಯಲ್ಲಿನ ಚಿತ್ರರಂಗದಲ್ಲಿ ಪರಿಶುದ್ಧ ವಾತಾವರಣವಿತ್ತು. ಶೂಟಿಂಗ್ ವೇಳೆಯಲ್ಲಿ ಸಣ್ಣ ತಪ್ಪಾದರೂ ಪಶ್ಚಾತ್ತಾಪ ಪಡುವಂತಹ ವಾತಾವರಣವಿತ್ತು. ಈಗ ಚಿತ್ರರಂಗದಲ್ಲಿ ಡ್ರಗ್ ವಿಚಾರ ಕೇಳಿಬಂದಿರುವುದು ಬೇಸರದ ಸಂಗತಿ. ಈ ಹಾವಳಿ ಎಲ್ಲ ರಂಗದಲ್ಲಿಯೂ ಇದೆ. ಚಿತ್ರರಂಗದಲ್ಲಾಗಿರುವುದು ಬಹಳ ಬೇಗ ಎದ್ದು ಕಾಣುತ್ತದೆ ಎಂದು ಹೇಳಿದರು.

ಆ್ಯಪ್ ಮೂಲಕ ಬೆಳೆ ಸಮೀಕ್ಷೆ ಪ್ರಾಯೋಗಿಕ ಹಂತದಲ್ಲಿಯೇ ಯಶಸ್ವಿಯಾಗುತ್ತಿರುವುದು ಹೆಮ್ಮೆಯ ವಿಚಾರ. 2017ರಲ್ಲಿ ಬೆಳೆ ಸಮೀಕ್ಷೆ ಮಾಡಿದಾಗ ಸುಮಾರು 3 ಸಾವಿರ ರೈತರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಆದರೀಗ ಆ್ಯಪ್ ಬೆಳೆ ಸಮೀಕ್ಷೆಯಲ್ಲಿ ಸೆ.11ರ ಸಂಜೆವರೆಗೆ ಒಟ್ಟು 76 ಲಕ್ಷ ತಾಕುಗಳು ಸಮೀಕ್ಷೆಯಾಗಿರುವುದು ಹೆಮ್ಮೆಯ ವಿಚಾರ. ರೈತರು ಬಹಳ ಆಸಕ್ತಿಯಿಂದ ಸಮೀಕ್ಷೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಬಿ.ಸಿ.ಪಾಟೀಲ್ ತಿಳಿಸಿದರು.

ರೈತರು ಸರಕಾರದ ಸೌಲಭ್ಯಗಳನ್ನು ಪಡೆಯಲು ಆ್ಯಪ್ ಮೂಲಕ ಬೆಳೆ ಸಮೀಕ್ಷೆ ನಡೆಸುವುದು ಅತ್ಯವಶ್ಯಕ. ರಾಜ್ಯದ ಕೆಲವೆಡೆ ಇಂಟರ್‍ನೆಟ್ ಸಮಸ್ಯೆಯಿಂದಾಗಿ ಬೆಳೆ ಸಮೀಕ್ಷೆ ವಿಳಂಬವಾಗಿದೆ. ಈಗ ಖಾಸಗಿ ನಿವಾಸಿಗಳ ಮೂಲಕವೂ ಸಮೀಕ್ಷೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದ ಅವರು, ಎಲ್ಲ ರೈತರು ಆ್ಯಪ್ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಮೂಲಕ ಉದ್ದೇಶಿತ ಯೋಜನೆ ಯಶಸ್ವಿಗೊಳಿಸಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X